ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.
ಮಾಟಮಂತ್ರದ ಯಾಗದಲ್ಲಿ ಕೆಲವು ಅಘೋರಿಗಳು ಭಾಗಿಯಾದ್ದಾರೆ, ಈ ಮಾಟಮಂತ್ರಕ್ಕಾಗಿ 21 ಕೆಂಪು ಮೇಕೆ, ಮೂರು ಎಮ್ಮೆ, 21 ಕಪ್ಪು ಕುರಿ, ಐದು ಹಂದಿಗಳನ್ನು ಕರೆತಂದಿರುವ ಮಾಹಿತಿ ಬಂದಿದ್ದು, ಇವುಗಳನ್ನು ಬಲಿ ನೀಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಮೊನ್ನೆಯಷ್ಟೇ ದೇವೇಗೌಡ್ರು ತಮ್ಮ ಮೊಮ್ಮಗನಿಗೆ ಪತ್ರ ಬರೆದು ವಾರ್ನ್ ಮಾಡಿದ್ರು.ಈ ನಡುವೆ ನಾಳೆಯೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ಅವಧಿ ಲಾಸ್ಟ್ ದಿನ. ಈ ಮಧ್ಯೆ ವಿಡಿಯೋ ಬಿಟ್ಟು ಬೆಂಗಳೂರಿಗೆ ಬರ್ತೀನಿ ಎಂದಿದ್ದ ಪ್ರಜ್ವಲ್ ರೇವಣ್ಣ ಬರೋದು ಆಲ್ಮೋಸ್ಟ್ ಕನ್ಫರ್ಮ್ ಆಗಿದೆ.
Bangalore : ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Phone tapping: ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
“ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
G C Chandrashekar: ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ನನ್ನ ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು ಎಂದು ಅವರು ಇದೆ ವೇಳೆ ನೆನಪಿಸಿಕೊಂಡರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.