ಜೋರು ಮಳೆಗೆ ಕೊಚ್ಚಿಹೋದ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ

ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.  

Written by - Krishna N K | Last Updated : May 18, 2024, 05:04 PM IST
    • ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಅವಾಂತರ
    • ಕೊಚ್ಚಿಹೋದ ಸೂರ್ಯಕಾಂತಿ ಹತ್ತಿ ಬೀಜಗಳು
    • ಉತ್ತಮ ಮಳೆ ಹಿನ್ನಲೆ ಬಿತ್ತನೆ ಮಾಡಿದ್ದ ರೈತರು
ಜೋರು ಮಳೆಗೆ ಕೊಚ್ಚಿಹೋದ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ title=

ಚಾಮರಾಜನಗರ : ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದ ಹಿನ್ನೆಲೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.

ಹಿರೇಬೇಗೂರಿನ ಚೇರ್ಮನ್ ಮಧು, ರಾಜೇಶ್ ಸೇರಿದಂತೆ ಹತ್ತಾರು ರೈತರು ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಮಳೆ ಆರ್ಭಟಕ್ಕೆ ಕೊಚ್ಚಿ ಹೋಗಿದ್ದು ಮತ್ತೊಮ್ಮೆ ಬಿತ್ತನೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ತಡರಾತ್ರಿ ದೇವರಾಜೇಗೌಡನನ್ನು SIT ಕಚೇರಿಗೆ ಕರೆತಂದ ಅಧಿಕಾರಿಗಳು

ಹಿರೇಬೇಗೂರಲ್ಲಿ ಟೊಮೊಟೊ ಪೈರು ಕೂಡ ಕೊಚ್ಚಿ ಹೋಗಿದ್ದು ವೀರಭದ್ರಪ್ಪ 1 ಎಕರೆಗೆ ಹಾಕಿದ್ದ ಟೊಮ್ಯಾಟೊ ಪೈರು ಮಳೆ ಪಾಲಾಗಿದೆ. ಚೇರ್ಮನ್ ಮಧು ಅವರು 8 ಬ್ಯಾಗ್ ಸೂರ್ಯಕಾಂತಿ ಬಿತ್ತಿದ್ದರು ಈಗ ಎಲ್ಲವೂ ಕೊಚ್ಚಿಹೋಗಿದ್ದು ಸೂಕ್ತ ಪರಿಹಾರ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News