ಯುವತಿ ಹತ್ಯೆ ಕೇಸ್‌: ಅಂಜಲಿ ಹಂತಕ ಪೊಲೀಸ್ ವಶಕ್ಕೆ

Crime News: ಬುಧವಾರ ನಸುಕಿನಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್‌ನಲ್ಲಿ ಪರಾರಿಯಾಗಿದ್ದ. 

Written by - Yashaswini V | Last Updated : May 17, 2024, 07:45 AM IST
  • ಅಂಜಲಿ ಅಂಬಿಗೇರ ಹಂತಕ ಪೊಲೀಸರ ವಶಕ್ಕೆ
  • ಸಾರ್ವಜನಿಕರ ಸಹಾಯದಿಂದ ಹಂತಕನನ್ನು ಬಂಧಿಸಿದ ಪೊಲೀಸರು.
  • ಗಾಯಗೊಂಡ ಆರೋಪಿ ಗೀರೀಶ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು
ಯುವತಿ ಹತ್ಯೆ ಕೇಸ್‌: ಅಂಜಲಿ ಹಂತಕ ಪೊಲೀಸ್ ವಶಕ್ಕೆ title=

Anjali Ambigera Murder Case: ನಗರದ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ  ಅವರನ್ನು ಕೊಲೆ (Anjali Ambigera Murder) ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ (ಮೇ 16) ತಡರಾತ್ರಿ  ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ಬುಧವಾರ ನಸುಕಿನಲ್ಲಿ ಅಂಜಲಿ ಅಂಬಿಗೇರ (Anjali Ambigera) ಎಂಬ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್‌ನಲ್ಲಿ ಪರಾರಿಯಾಗಿದ್ದ. 

ಯುವತಿಯ ಮನೆ, ಬಸ್ ನಿಲ್ದಾಣದ ಸಿ.ಸಿ ಟಿ.ವಿ ಕ್ಯಾಮೆರಾಗಳಲ್ಲಿ ಆರೋಪಿಯ ಚಲನವಲನಗಳು ದಾಖಲಾಗಿದ್ದವು.

ಇದನ್ನೂ ಓದಿ- ಸಣ್ಣ ವಿಚಾರಕ್ಕೆ ಮನಸ್ಥಾಪ: ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿ ನೇಣಿಗೆ ಶರಣು

ಆರೋಪಿ ಪತ್ತೆಗಾಗಿ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ (Hu-Dha Police Commissioner Renuka Sukumar) ಅವರು ಎಂಟು ತಂಡಗಳನ್ನು ರಚಿಸಿದ್ದರು. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗಿತ್ತು.

ಇದೀಗ ಸಾರ್ವಜನಿಕರ ಸಹಾಯದಿಂದ ಹಂತಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಆತನನ್ನು ಬಂಧಿಸಿದ್ದಾರೆ. ಸದ್ಯ ಗಾಯಗೊಂಡಿರುವ ಆರೋಪಿ ಗಿರೀಶ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ- ನೇಹಾ ಮಾದರಿಯಲ್ಲಿಯೇ ಹುಬ್ಬಳ್ಳಿಯಲ್ಲಿ ನಡೆಯಿತು ಮತ್ತೊಂದು ಕೊಲೆ : ಮನೆ ಮಂದಿ ಕಣ್ಣೆದುರೇ ಯುವತಿ ಹತ್ಯೆ

ಅಂಜಲಿ ಅಂಬಿಗೇರ ಹತ್ಯೆ: ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು: 
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್ ಸಿ.ಬಿ.ಚಿಕ್ಕೋಡಿ ಹಾಗೂ ಮಹಿಳಾ ಹೆಡ್ ಕಾನ್‌ಸ್ಟೇಬಲ್ ರೇಖಾ ಹಾವರಡ್ಡಿ ಅವರನ್ನು ಅಮಾನತುಗೊಳಿಸಿ  ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ. 

ನೇಹಾ ಮಾದರಿಯಲ್ಲಿ ನಿನ್ನನ್ನೂ ಕೊಲ್ಲೋದಾಗಿ ಅಂಜಲಿಗೆ ಬೆದರಿಕೆ ಹಾಕಿದ್ದ ಆರೋಪಿ ಕುರಿತು ಅಂಜಲಿ ಕುಟುಂಬಸ್ಥರು ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದರು. ಆದರೆ, ಇದನ್ನು ನಿರ್ಲಕ್ಷಿಸಿದ್ದ ಪೊಲೀಸರು ಅದೇನು ಆಗಲ್ಲ ಅಂತ ಸಬೂಬು ಹೇಳಿ ಕಳುಹಿಸಿದ್ದರು. ಇದರ ಬೆನ್ನಲ್ಲೇ ಯುವತಿ ಅಂಜಲಿ ಕೊಲೆಯಾಗಿತ್ತು. ಹೀಗಾಗಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಓರ್ವ ಪಿಐ ಮತ್ತು ಮತ್ತೋರ್ವ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News