ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಖಳನಾಯಕ, ಇದೀಗ ಡಾಲಿಯ 'ಕೋಟಿ' ಸಿನಿಮಾದಲ್ಲಿ ನಟನೆ

Kotee : ಸಪ್ತ ಸಾಗರ ದಾಚೆಯೆಲ್ಲೊ ಸಿನಿಮಾದ ಸೋಮ ಎಂಬ ವಿಲನ್ ಪಾತ್ರದಲ್ಲಿ ನಟಿಸಿದ್ದ ರಮೇಶ್ ಇಂದಿರಾ ಇದೀಗ ಡಾಲಿ ಧನಂಜಯ್ ನಟನೆಯ ಸಿನಿಮಾದಲ್ಲಿ ಅವರ ಪ್ರತಿಸ್ಪರ್ತಿ ದಿನು ಸಾವ್ಕಾರ್ ಆಗಿ ನಟಿಸುತ್ತಿದ್ದಾರೆ.

Written by - Zee Kannada News Desk | Last Updated : May 4, 2024, 08:35 PM IST
  • ಕೋಟಿ ಸಿನಿಮಾದಲ್ಲಿ ರಮೇಶ್ ಇಂದಿರಾ ಅವರು ದಿನು ಸಾಹುಕಾರ್ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ.
  • ಪೋಸ್ಟರ್ನಲ್ಲಿ ಅಸಾಧಾರಣ ಖಳನಟ ದಿನು ಸಾಹುಕಾರ್ ಬೂದು ಕೂದಲು ಮತ್ತು ಗಡ್ಡದ ನೋಟದಲ್ಲಿ ಕಾಣಿಸಿಕೊಂಡಿದ್ದಾರೆ.
  • ಸಿನಿಮಾ ಇದೇ ಜೂನ್ 14ರಂದು ಬಿಡುಗಡೆ ಕೊಳ್ಳುತ್ತಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಖಳನಾಯಕ, ಇದೀಗ ಡಾಲಿಯ 'ಕೋಟಿ' ಸಿನಿಮಾದಲ್ಲಿ ನಟನೆ  title=

Kotee movie Villan Reveal : ಸಪ್ತ ಸಾಗರ ದಾಚೆಯೆಲ್ಲೊ ಸೈಡ್ ಎ ಮತ್ತು ಸೈಡ್ ಬಿ ಸಿನಿಮಾದಲ್ಲಿ ಸೋಮ ಎಂಬ ವಿಲ್ಲನ್ ಪಾತ್ರದಲ್ಲಿ ನಟಿಸಿದ್ದ ರಮೇಶ್ ಇಂದಿರಾ ಇದೀಗ ಡಾಲಿ ಧನಂಜಯ ಅವರ ಕೋಟಿ ಸಿನಿಮಾದಲ್ಲಿ ಅವರ ಪ್ರತಿಸ್ಪರ್ಧಿಯಾಗಿ ದಿನು ಸಾಹುಕಾರ್ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ಪರಮ್ ನಿರ್ದೇಶನದ ಡಾಲಿ ಧನಂಜಯ ನಾಯಕ ನಟನಾಗಿ ನಟಿಸುತ್ತಿರುವ ಅವರ ಮುಂಬರುವ ಸಿನಿಮಾ ಕೋಟಿ ಸಿನಿಮಾದಲ್ಲಿ ರಮೇಶ್ ಇಂದಿರಾ ಅವರು ದಿನು ಸಾಹುಕಾರ್ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ರಮೇಶ್ ಇಂದಿರಾ ಅವರ ಪಾತ್ರದ ಪರಿಚಯವನ್ನು ಪೋಸ್ಟರ್ ಮುಖಾಂತರ ಬಿಡುಗಡೆಗೊಳಿಸಲಾಗಿದೆ. ಪೋಸ್ಟರ್ ನೋಡಿದಾಗಲೇ ಖಳನಾಯಕ ನಾಗಿ ನಟಿಸುತ್ತಿದ್ದಾರೆ ಎಂದು ತಿಳಿದು ಬರುತ್ತದೆ. ಪರಮೇಶ್ವರ್ ಗುಂಡ್ಕಲ್ ಅವರು ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಈ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು ಪಾತ್ರದ ಪರಿಚಯ ಮಾಡಿದ್ದಾರೆ. 

ಇದನ್ನು ಓದಿ : ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಪಡೆಯುವ ಸಂಬಳ ಎಷ್ಟು ಗೊತ್ತಾ ? 

ಪೋಸ್ಟರ್ನಲ್ಲಿ ಅಸಾಧಾರಣ ಖಳನಟ ದಿನು ಸಾಹುಕಾರ್ ಬೂದು ಕೂದಲು ಮತ್ತು ಗಡ್ಡದ ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. ಜಿಯೋ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿರುವ ಜ್ಯೋತಿ ದೇಶಪಾಂಡೆ ನಿರ್ಮಾಣದ ಈ ಚಿತ್ರದಲ್ಲಿ ಡಾಲಿ ಧನಂಜಯ್ ನಾಯಕ ನಟನಾಗಿ ನಟಿಸಿದರೆ ಮೋಕ್ಷ ಕುಶಾಲ್ ನಾಯಕಿಯಾಗಿ ಮೊದಲ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಕೋಟಿ ಸಿನಿಮಾದ ಬರಹಗಾರ ಹಾಗೂ ನಿರ್ದೇಶಕ ಪರಂ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಇದೇ ಜೂನ್ 14ರಂದು ಬಿಡುಗಡೆ ಕೊಳ್ಳುತ್ತಿದೆ.

ಇದನ್ನು ಓದಿ :  ಇಂಡೋನೇಷ್ಯಾ : ಸುಲವೆಸಿ ದ್ವೀಪದಲ್ಲಿ ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು!

ಸುಯೋಧನ ಇಲ್ಲದ ಮಹಾಭಾರತ ಇಲ್ಲ. ರಾವಣನಿಲ್ಲದ ರಾಮಾಯಣವಿಲ್ಲ. ಮನಸ್ಸಿನ ಆಳದಲ್ಲಿ ಹುದುಗಿರುವ ಆಸೆಗಳನ್ನು ಈ ಪಾತ್ರಗಳು ನಮಗೆ ಭೇಟಿ ಮಾಡಿಸುತ್ತವೆ. ಇಷ್ಟ ಇಲ್ಲ ಎಂದು ಎಷ್ಟೇ ಹೇಳಿದರೂ ಖಳನಾಯಕರ ಪಾತ್ರಕ್ಕೆ ಅದೇನೋ ಸೆಳೆತ ಇದೆ. ಇಲ್ಲದಿದ್ದರೆ ರಾವಣನ ಲಂಕೆ ಸುಭಿಕ್ಷವಾಗಿತ್ತು ಎಂದು ಓದಿದಾಗ ಯಾಕೆ ಖುಷಿಯಾಗಬೇಕು? ಸುಯೋಧನ ಮತ್ತು ಕರ್ಣನ ನಡುವಿನ ಗೆಳೆತವನ್ನು ನೋಡಿ ಯಾಕೆ ನಾವು ಭಾವುಕರಾಗಬೇಕು?

ಕತೆಯನ್ನು ಮುಂದೆ ತೆಗೆದುಕೊಂಡು ಹೋಗುವವನು, ನಾಯಕನ ಮೌಲ್ಯಗಳನ್ನು ಪ್ರಶ್ನಿಸುವವನು, ಕತೆಗೊಂದು ಎನರ್ಜಿ ಕೊಡುವವನು ಖಳನಾಯಕ!

ಕೋಟಿಯ ಖಳನಾಯಕನ ಹೆಸರು ದಿನೂ ಸಾವ್ಕಾರ್.‌ ರಣತಂತ್ರದಲ್ಲಿ ಎತ್ತಿದ ಕೈ. ಬುದ್ಧಿವಂತ. ಸ್ವಲ್ಪ ಅನ್‌ ಸ್ಟೇಬಲ್.‌ ತಾನು ಹೇಳಿದ್ದನ್ನು ಎಲ್ಲರೂ ಕೇಳಬೇಕು ಎಂದುಕೊಂಡಿರುವ ವ್ಯಕ್ತಿ. ಮಾತು ಕೇಳದವರನ್ನು ಕೇಳಿಸುತ್ತೇನೆ ಎನ್ನುವುದನ್ನು ನಂಬಿದವನು. ಸಿಕ್ಕಾಪಟ್ಟೆ ಮಜಾ ಕೊಡುವ ಪಾತ್ರ ದಿನೂ ಸಾವ್ಕಾರ್ರದು. ರಮೇಶ್‌ ಇಂದಿರಾ ಈ ಪಾತ್ರವನ್ನು ನಿಭಾಯಿಸಿದ ರೀತಿ ನೋಡಿ ನಾನು ಆಲ್ಮೋಸ್ಟ್‌ ಗಾಬರಿಯಾಗಿದ್ದೇನೆ.

ಇದೇ ಜೂನ್‌ 14, ಶುಕ್ರವಾರ ಇವರು ಸಾರ್ವಜನಿಕರ ಭೇಟಿಗೆ ಸಿಗುತ್ತಾರೆ!  ಪೋಸ್ಟರ್ ಹಂಚಿಕೊಂಡಿರುವ ಪರಂ ಈ ರೀತಿ ಬರೆದುಕೊಂಡಿದ್ದಾರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News