"ಮೋದಿಯವರ ಪ್ರಜ್ವಲ ಗ್ಯಾರಂಟಿ"ಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯ

Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

Written by - Puttaraj K Alur | Last Updated : May 4, 2024, 10:56 PM IST
  • "ಮೋದಿಯವರ ಪ್ರಜ್ವಲ ಗ್ಯಾರಂಟಿ"ಯಲ್ಲಿ ಮೊದಲ ಬಂಧನ!
  • ಈ "ಬಂಧನ" ಯಾವ ಜನುಮದ ಅನುಬಂಧನ?! ಎಂದ ಕಾಂಗ್ರೆಸ್‌
  • ಮಹಿಳಾ ಪೀಡಕರು, ಅಪಹರಣಕಾರರು, ಅತ್ಯಾಚಾರಿಗಳನ್ನು ಕಂಡರೆ ಮೋದಿಯವರಿಗೆ ಎಲ್ಲಿಲ್ಲದ ಪ್ರೀತಿ
"ಮೋದಿಯವರ ಪ್ರಜ್ವಲ ಗ್ಯಾರಂಟಿ"ಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯ title=
ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ!

ಬೆಂಗಳೂರು: ಮಹಿಳೆಯೊಬ್ಬರ ಕಿಡ್ನಾಪ್‌ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿದ್ದ ರೇವಣ್ಣರನ್ನು SIT ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಕರೆದೊಯ್ದರು. ಈ ಪ್ರಕರಣ ಸಂಬಂಧ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಎಚ್.ಡಿ.ರೇವಣ್ಣ ಪರಸ್ಪರ ಕೈಕುಲುಕುತ್ತಿರುವ ಫೋಟೋವನ್ನು ಹಂಚಿಕೊಂಡು ಟೀಕಿಸಿದೆ.   

ʼ"ಮೋದಿಯವರ ಪ್ರಜ್ವಲ ಗ್ಯಾರಂಟಿ"ಯಲ್ಲಿ ಮೊದಲ ಬಂಧನ! ಈ "ಬಂಧನ" ಯಾವ ಜನುಮದ ಅನುಬಂಧನ?! ಮಹಿಳಾ ಪೀಡಕರು, ಮಹಿಳೆಯ ಅಪಹರಣಕಾರರು, ಅತ್ಯಾಚಾರಿಗಳನ್ನು ಕಂಡರೆ ಮೋದಿಯವರಿಗೆ ಎಲ್ಲಿಲ್ಲದ ಪ್ರೀತಿ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೇವಣ್ಣನೊಂದಿದೆ NDA ಮೈತ್ರಿಕೂಟದ ಸ್ಟಾರ್ ಪ್ರಚಾರಕ ರೇವಣ್ಣ ಅವರೂ ಮಹಿಳೆಯರನ್ನು ಕಾಡಿಸಿ, ಪೀಡಿಸಿ, ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ. ಮಹಿಳಾ ಪೀಡಕ ಆರೋಪಿಯ ಕೈಯನ್ನು ಗಟ್ಟಿಯಾಗಿ ಹಿಡಿದಿರುವ ಪ್ರಧಾನಿ ಮೋದಿಯವರು ದೇಶಕ್ಕೆ ಯಾವ ಸಂದೇಶ ನೀಡಲು ಹೊರಟಿದ್ದರು?ʼ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನೂ ಓದಿ: ಮೇ 6ಕ್ಕೆ "ಬೆಂಗಳೂರು ಟು ಬೆಳಗಾವಿ" ವಿಶೇಷ ರೈಲು ಸಂಚಾರ

ʼಮಹಿಳೆಯರ ಮಾನ, ಪ್ರಾಣ, ಘನತೆ ಎತ್ತಿ ಹಿಡಿಯುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ನಮ್ಮ ಸರ್ಕಾರ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಹೆಚ್.ಡಿ ರೇವಣ್ಣರನ್ನು ಬಂಧಿಸಿದ SIT ತಂಡ ಮಹಿಳಾ ಪೀಡನೆಯ ವಿಕೃತ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ. ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರದ ಬದ್ಧತೆ ಆಚಲವಾಗಿರುತ್ತದೆʼ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. 

ಇಂಟರ್ ಪೋಲ್‌ಗೆ ಮನವಿ

ಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನೂ ಓದಿ: ಮತಗಟ್ಟೆಗೆ ಬರುವ ಮತದಾರರ ಆರೋಗ್ಯ ಕಾಳಜಿಗೆ ಮೆಡಿಸಿನ್ ಕಿಟ್ ಸಿದ್ದ..!

SIT ತಂಡ ಸಿಬಿಐ ಮೂಲಕ ಇಂಟರ್ ಪೋಲ್‌ಗೆ ಮನವಿ ಮಾಡಿದರೂ ಆರೋಪಿಯ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಕರೆತರುವಲ್ಲಿ ಕೇಂದ್ರ ಸರ್ಕಾರ ಸಹಕರಿಸುತ್ತಿಲ್ಲವೇಕೆ? ಕೇಂದ್ರ ಸರ್ಕಾರದ ರಾಜತಾಂತ್ರಿಕ ಇಲಾಖೆ ಮನಸು ಮಾಡಿದರೆ ಆರೋಪಿಯನ್ನು ಕರೆತರಬಹುದು, ಆದರೆ ಮೋದಿ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ತಮ್ಮ ರೇಪಿಸ್ಟ್ ಅಭ್ಯರ್ಥಿಯ ಪರ ನಿಂತಿದೆ. ಪ್ರಧಾನಿ ಮೋದಿಗೆ ಮಹಿಳೆಯರ ಹಿತಾಸಕ್ತಿ ಬೇಕಿಲ್ಲ ಎನ್ನುವುದು ಮಣಿಪುರದ ಘಟನೆಯಿಂದ ಹಿಡಿದು ಪ್ರಜ್ವಲ್ ರೇವಣ್ಣನ ಪ್ರಕರಣದವರೆಗೂ ಸಾಬೀತಾಗಿದೆʼ ಎಂದು ಕಾಂಗ್ರೆಸ್‌ ಟೀಕಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News