ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ಹಾಗೂ ಭರವಸೆಯ ಆಟಗಾರ ರಿಷಬ್ ಪಂತ್ ಇತ್ತೀಚೆಗಷ್ಟೇ ದೊಡ್ಡ ಕಾರು ಅಪಘಾತಕ್ಕೀಡಾಗಿದ್ದರು. ಗಂಭೀರ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಅವರ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಿರಂತರ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಪಂತ್ ಅಂತಿಮ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಆರೋಗ್ಯವಾಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಪೇಜ್ನಲ್ಲಿಯೂ ಮಾಹಿತಿ ನೀಡಿದ್ದಾರೆ.
Rishabh Pant : ರಿಷಬ್ ಪಂತ್ ಐಪಿಎಲ್ 2023 ರಲ್ಲಿ ಮರಳಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.
ಡಿಸೆಂಬರ್ 2022 ರಲ್ಲಿ ನಡೆದ ಭೀಕರ ಕಾರು ಅಪಘಾತದ ನಂತರ 25 ವರ್ಷದ ರಿಶಬ್ ಪಂತ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನೆರವಾದ ನೆರವಾದ ಬಿಸಿಸಿಐ ಮತ್ತು ಜೇ ಶಾ ಅವರಿಗೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
Team India: ಕಾರು ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಮತ್ತು ಪುನರಾಗಮನ ಮಾಡುತ್ತಾರೆ ಎಂದು ಭರವಸೆಯನ್ನು ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ವ್ಯಕ್ತಪಡಿಸಿದ್ದಾರೆ. ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಶುಕ್ರವಾರ ಎನ್ಎಚ್ -58 ರಲ್ಲಿ ಜಾರಿ ಚಾಲನೆ ಮಾಡುವಾಗ ತಮ್ಮ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಗುರಿಯಾಗಿದ್ದರು.
ದೀಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಸೇರಿದಂತೆ ತಂಡದ ಇತರ ಆಟಗಾರರು ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಪಂತ್ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇದರ ವಿಡಿಯೋವನ್ನು ಬಿಸಿಸಿಐ ಟ್ವೀಟ್ ಮೂಲಕ ಶೇರ್ ಮಾಡಿದೆ.
Rishabh Pant Injury: ರಿಷಬ್ ಪಂತ್ ದೀರ್ಘಕಾಲದವರೆಗೆ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಇನ್ನು ಈ ಸಂದರ್ಭದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಗೆ 2 ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳ ಆಯ್ಕೆ ಮಾಡುವುದು ಹೊಸ ಆಯ್ಕೆ ಸಮಿತಿಗೆ ದೊಡ್ಡ ಸವಾಲಾಗಿದೆ.
Team India : ಭಾರತದ ಸೂಪರ್ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದಾದ ನಂತರ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ರಕ್ಷಿಸಿದ ಜನರನ್ನು ʼಗುಡ್ ಸಮರಿಟನ್ʼ ಯೋಜನೆಯಡಿಯಲ್ಲಿ ಗೌರವಿಸಲಾಗುವುದು ಮತ್ತು ಬಹುಮಾನ ನೀಡಲಾಗುವುದು ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.
Rishabh Pant Health Bulletine: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಮಾತನಾಡಿ, ಡಿಡಿಸಿಎ ತಂಡ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಪಂತ್ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ. ಅಗತ್ಯವಿದ್ದರೆ ನಾವು ಅವರನ್ನು ದೆಹಲಿಗೆ ಸ್ಥಳಾಂತರಿಸುತ್ತೇವೆ. ಪ್ಲಾಸ್ಟಿಕ್ ಸರ್ಜರಿಗಾಗಿ ದೆಹಲಿಗೆ ಕರೆದೊಯ್ಯುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
Rishabh Pant Accident: ಪಂತ್ ಅವರ ಮೆದುಳು ಮತ್ತು ಬೆನ್ನುಮೂಳೆಯ ಎಂಆರ್ಐ ರಿಸಲ್ಟ್ ಬಂದಿದ್ದು, ಅದರಲ್ಲಿ ಎಲ್ಲವೂ ಸಾಮಾನ್ಯವಾಗಿದೆ ಎಂದು ಹೇಳಲಾಗಿದೆ. 25 ವರ್ಷದ ಪಂತ್ ಅವರ ಮುಖದ ಮತ್ತು ದೇಹದ ಗಾಯಗಳನ್ನು ಸರಿಪಡಿಸಲು ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಆದರೆ ನೋವು ಮತ್ತು ಊತದಿಂದಾಗಿ ಅವರ ಪಾದ ಮತ್ತು ಮೊಣಕಾಲಿನ MRI ಸ್ಕ್ಯಾನ್ ಅನ್ನು ಶನಿವಾರಕ್ಕೆ ಮುಂದೂಡಲಾಗಿದೆ.
ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ ಝಾಲ್ ಬಳಿ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಪಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಇದರಿಂದಾಗಿ ಅವರು ಐಪಿಎಲ್-2023ರಲ್ಲಿ ಆಡುವುದು ಅಸಾಧ್ಯ ಎನಿಸುತ್ತಿದೆ.
ಭಾರತ ಕ್ರಿಕೆಟಿಗ ರಿಷಬ್ ಪಂತ್ ಇಂದು ಭೀಕರ ಕಾರು ಅಪಘಾತಕ್ಕೀಡಾಗಿದ್ದಾರೆ. ಇದೀಗ, ಅಪಘಾತದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕಾರಿನ ಪಕ್ಕದಲ್ಲಿ ನೆಲದ ಮೇಲೆ ಪಂತ್ ಮಲಗಿರುವ ವಿಡಿಯೋ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ, ಇಬ್ಬರು ಹುಡುಗರು ರಸ್ತೆಯ ಬದಿಯಲ್ಲಿ ಮಲಗಿರುವ ಪಂತ್ನನ್ನು ಮೇಲಕ್ಕೆತ್ತುವುದನ್ನು ಕಾಣಬಹುದು. ಪಕ್ಕದಲ್ಲೇ ಕಾರು ಹೊತ್ತಿ ಉರಿಯುತ್ತಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.
ಕ್ರಿಕೆಟರ್ ರಿಷಬ್ ಪಂತ್ ಕಾರು ಭೀಕರ ಅಪಘಾತವಾಗಿದೆ. ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಡಿವೈಡರ್ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ರಿಷಬ್ ಪಂತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ..
ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟರ್ ರಿಷಬ್ ಪಂತ್ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ, ಆದರೆ, ಅವರು ರಿಷಬ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಂತ್ ಸ್ವತಃ ಕಾರು ಚಾಹಲಾಯಿಸಿಕೊಂಡು ರೂರ್ಕಿಯಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದರು.
ಭಾರತದ ಕ್ರಿಕೆಟಿಗ ರಿಷಬ್ ಪಂತ್ ಇಂದು ಬೆಳಗ್ಗೆ ತಮ್ಮ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ಕಾರು ಹರಿದ್ವಾರ ರೂರ್ಕಿ ನಗರದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ ಆಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ.
ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ ಝಾಲ್ ಬಳಿ ಪಂತ್ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ, ಕಾಲು ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಈ ಅಪಘಾತಕ್ಕೆ ಸಂಬಂಧಿಸಿದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗಷ್ಟೇ ಪಂತ್ ಕಾರು ಅಪಘಾತಕ್ಕೆ ಮುಖ್ಯ ಕಾರಣ ಬಯಲಾಗಿದೆ.
Rishabh Pant house: ರೂರ್ಕಿಯಲ್ಲಿರುವ ರಿಷಬ್ ಪಂತ್ ಅವರ ಮನೆಯ ಮುಂದೆ ರೈಲ್ವೇ ಇಲಾಖೆಯಿಂದ ಹತ್ತಾರು ಕಂಬಗಳನ್ನು ಹೂಳಿದ್ದು, ಈ ಸಂದರ್ಭದಲ್ಲಿ ಜನರು ಅಲ್ಲಿದ್ದ ರೈಲ್ವೆ ಅಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆದರೆ ಇದರ ಹೊರತಾಗಿಯೂ, ರೈಲ್ವೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಂಬಗಳನ್ನು ಹೂತುಹಾಕಿದರು. ರಿಷಬ್ ಪಂತ್ ಮನೆ ಮುಂದೆ ಪಿಲ್ಲರ್ ನೆಟ್ಟಿದ್ದಕ್ಕೆ ರೈಲ್ವೆ ಅಧಿಕಾರಿಗಳು ದೊಡ್ಡ ಕಾರಣವನ್ನು ಬಹಿರಂಗಪಡಿಸಿದ್ದಾರೆ.
Virat Kohli-Rishab Pant Relay Catch Video: ಬಾಂಗ್ಲಾದೇಶದ ಎರಡನೇ ಇನಿಂಗ್ಸ್ನ 47ನೇ ಓವರ್ನಲ್ಲಿ ಈ ಘಟನೆ ನಡೆದಿದೆ. 513 ರನ್ಗಳ ಬೃಹತ್ ಗುರಿಗೆ ಉತ್ತರವಾಗಿ ಆರಂಭಿಕರಿಬ್ಬರೂ ಕ್ರೀಸ್ನಲ್ಲಿ ಹೋರಾಡಲು ಸಜ್ಜಾಗಿದ್ದರು. ಭಾರತ ತಂಡ ಟೆನ್ಷನ್ನಲ್ಲಿತ್ತು. ಮೊದಲ ವಿಕೆಟ್ ಪಡೆಯಲಿ ಟೀಂ ಇಂಡಿಯಾ ಹೋರಾಡುತ್ತಿತ್ತು. ನಜ್ಮುಲ್ ಹಸನ್ ಶಾಂಟೊ ಮತ್ತು ಜಾಕಿರ್ ಹಸನ್ ಇಬ್ಬರೂ ಅರ್ಧಶತಕ ಗಳಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಉಮೇಶ್ ಯಾದವ್ ಉತ್ತಮ ಎಸೆತದಲ್ಲಿ ಶಾಂಟೊ ಅವರನ್ನು ಬಲೆಗೆ ಬೀಳಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.