Uday Kotak resigns: ಕೊಟಕ್ ಮಹೀಂದ್ರಾ ಬ್ಯಾಂಕ್ ಎಂಡಿ, ಸಿಇಒ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ

Uday Kotak resigns: ಮಧ್ಯಂತರ ವ್ಯವಸ್ಥೆಯಾಗಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಡಿಸೆಂಬರ್ 31, 2023ರವರೆಗೆ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಬ್ಯಾಂಕ್ ತಿಳಿಸಿದೆ. 

Written by - Puttaraj K Alur | Last Updated : Sep 3, 2023, 08:39 AM IST
  • ಕೊಟಕ್ ಮಹೀಂದ್ರಾ ಬ್ಯಾಂಕ್ ಎಂಡಿ, ಸಿಇಒ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ
  • ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ಮುಂದುವರಿಯಲಿರುವ ಉದಯ್ ಕೋಟಕ್
  • ಡಿ.31ರವರೆಗೆ ಎಂಡಿ ಮತ್ತು ಸಿಇಒ ಕರ್ತವ್ಯಗಳನ್ನು ನಿರ್ವಹಿಸಲಿರುವ ದೀಪಕ್ ಗುಪ್ತಾ
Uday Kotak resigns: ಕೊಟಕ್ ಮಹೀಂದ್ರಾ ಬ್ಯಾಂಕ್ ಎಂಡಿ, ಸಿಇಒ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ  title=
ಉದಯ್ ಕೋಟಕ್ ರಾಜೀನಾಮೆ

ನವದೆಹಲಿ: ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಕೋಟಕ್ ಮಹೀಂದ್ರಾ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನದಿಂದ ಉದಯ್ ಕೋಟಕ್ ಕೆಳಗಿಳಿದ್ದಾರೆ ಎಂದು ಬ್ಯಾಂಕ್ ಸೆ.2ರಂದು ವಿನಿಮಯ ಕೇಂದ್ರಗಳಿಗೆ ತಿಳಿಸಿದೆ.

ಆದಾಗ್ಯೂ, ಉದಯ್ ಕೋಟಕ್ ಅವರು ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ಮುಂದುವರಿಯುತ್ತಾರೆ ಎಂದು ಬ್ಯಾಂಕ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಉದಯ್ ಕೋಟಕ್ ಅವರ ಅಧಿಕಾರಾವಧಿಯು ಡಿಸೆಂಬರ್ 31, 2023ರಂದು ಕೊನೆಗೊಳ್ಳಲಿತ್ತು.

ಇದನ್ನೂ ಓದಿ: ಭಾರತದ ಇಸ್ರೋ ವಿಜ್ಞಾನಿಗಳ ಸಂಬಳ ಎಷ್ಟು ಗೊತ್ತಾ?

ಮಧ್ಯಂತರ ವ್ಯವಸ್ಥೆಯಾಗಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಆರ್‌ಬಿಐ ಮತ್ತು ಬ್ಯಾಂಕ್ ಸದಸ್ಯರ ಅನುಮೋದನೆಗೆ ಒಳಪಟ್ಟು ಡಿಸೆಂಬರ್ 31ರವರೆಗೆ ಎಂಡಿ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ ಎಂದು ಬ್ಯಾಂಕ್ ತಿಳಿಸಿದೆ.  

ಉತ್ತರಾಧಿಕಾರ ಸುಲಭಗೊಳಿಸಲು ರಾಜೀನಾಮೆ

ಉದಯ್ ಕೋಟಕ್ ಕೊಟಕ್ ಅವರು ಸೆಪ್ಟೆಂಬರ್ 2ರಂದು ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಮಾಹಿತಿ ಪ್ರಕಾರ, ಬ್ಯಾಂಕ್‌ನಲ್ಲಿ ಉತ್ತರಾಧಿಕಾರ ಯೋಜನೆಯನ್ನು ಸುಗಮಗೊಳಿಸಲು ತಾನು ಕೆಳಗಿಳಿಯುತ್ತಿದ್ದೇನೆ’ ಎಂದು ಹೇಳಿದ್ದಾರೆ.

‘ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಉತ್ತರಾಧಿಕಾರವು ನನ್ನ ಮನಸ್ಸಿನಲ್ಲಿ ಅಗ್ರಗಣ್ಯವಾಗಿದೆ, ಏಕೆಂದರೆ ನಮ್ಮ ಅಧ್ಯಕ್ಷರು, ನಾನು ಮತ್ತು ಜಂಟಿ ಎಂಡಿ ಎಲ್ಲರೂ ವರ್ಷಾಂತ್ಯದೊಳಗೆ ಕೆಳಗಿಳಿಯಬೇಕಾಗಿದೆ. ಈ ನಿರ್ಗಮನಗಳನ್ನು ಅನುಕ್ರಮವಾಗಿ ಸುಗಮ ಸ್ಥಿತ್ಯಂತರವನ್ನು ಖಚಿತಪಡಿಸಿಕೊಳ್ಳಲು ನಾನು ಉತ್ಸುಕನಾಗಿದ್ದೇನೆ. ನಾನು ಈ ಪ್ರಕ್ರಿಯೆಯನ್ನು ಈಗ ಪ್ರಾರಂಭಿಸುತ್ತೇನೆ ಮತ್ತು ಹೆಜ್ಜೆ ಹಾಕುತ್ತಿದ್ದೇನೆ. ಸಿಇಒ ಆಗಿ ಸ್ವಯಂಪ್ರೇರಣೆಯಿಂದ ಕೆಳಗಿಳಿಯುತ್ತಿದ್ದೇನೆ’ ಎಂದು ಉದಯ್ ಕೋಟಕ್ ಹೇಳಿದ್ದಾರೆ.

ಇದನ್ನೂ ಓದಿ: ಹವಾಮಾನ ಬದಲಾವಣೆ ಯೋಜನೆಗೆ 'ಆದಿತ್ಯ-ಎಲ್ 1' ಮಾಡಲಿದೆ ಸಹಾಯ: ಹೇಗೆ ಗೊತ್ತಾ?

ಇದಲ್ಲದೆ ಪ್ರಸ್ತಾವಿತ ಉತ್ತರಾಧಿಕಾರಿಯ ಆರ್‌ಬಿಐ ಅನುಮೋದನೆಗಾಗಿ ಬ್ಯಾಂಕ್ ಕಾಯುತ್ತಿದೆ ಎಂದು ಉದಯ್ ಕೋಟಕ್ ತಿಳಿಸಿದ್ದಾರೆ. ಉದಯ್ ಕೊಟಕ್ ಅವರು 1985ರಲ್ಲಿ ಬ್ಯಾಂಕಿಂಗ್ ಅಲ್ಲದ ಹಣಕಾಸು ಸಂಸ್ಥೆಯಾಗಿ ಪ್ರಾರಂಭವಾದಾಗಿನಿಂದ ಬ್ಯಾಂಕನ್ನು ಮುನ್ನಡೆಸುತ್ತಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಉದಯ್ ಕೊಟಕ್ ಸುಮಾರು $13.4 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News