Railway Jobs: ಹುಬ್ಬಳ್ಳಿಯಲ್ಲಿ ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ರೈಲ್ವೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

RVNL Recruitment 2024: ರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Apr 8, 2024, 11:09 PM IST
  • ರೈಲ್ ವಿಕಾಸ್ ನಿಗಮ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ
  • ಜನರಲ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ
Railway Jobs: ಹುಬ್ಬಳ್ಳಿಯಲ್ಲಿ ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ರೈಲ್ವೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ title=
RVNL Recruitment 2024

RVNL Recruitment 2024: ರೈಲ್ ವಿಕಾಸ್ ನಿಗಮ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜನರಲ್ ಮ್ಯಾನೇಜರ್(ಸಿವಿಲ್​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು.

ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. 

ಇದನ್ನೂ ಓದಿ: ಮತದಾನ ಜಾಗೃತಿ ಕಾರ್ಯಕ್ರಮ : ರಾಷ್ಟ್ರ ಮುನ್ನೆಡಸಲು ಮತ ಚಲಾಯಿಸಿ, ಚುನಾವಣಾ ರಾಯಭಾರಿ ನಟ ರಮೇಶ್ ಅರವಿಂದ್

ವಿದ್ಯಾರ್ಹತೆ: ರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 57 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹1,20,000-2,80,000 ಸಂಬಳವನ್ನು ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಸ್ಕ್ರೀನಿಂಗ್, Interaction ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ: 18/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 17 ಆಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ  ವಿಳಾಸಕ್ಕೆ ಕಳುಹಿಸಬೇಕು. ಡಿಸ್ಪ್ಯಾಚ್ ವಿಭಾಗ, ನೆಲ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ಆರ್.ಕೆ.ಪುರಂ, ನವದೆಹಲಿ-110066

ಇದನ್ನೂ ಓದಿ: ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟು ಸಾಕುತ್ತಿತ್ತು: ಯೋಗಿ ಆದಿತ್ಯನಾಥ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News