ಚಾಲೆಂಜಿಗ್ ಸ್ಟಾರ್ ದರ್ಶನ್ ‘ಕಾಲಾಯ ತಸ್ಮಯ್ ನಮಃ’ ಅಂದಿದ್ದು ಯಾರಿಗೆ..?

ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ’ ಎಂದು ದರ್ಶನ್ ತಿರುಗೇಟು ನೀಡಿದ್ದಾರೆ.

Written by - Puttaraj K Alur | Last Updated : Jan 10, 2024, 04:42 PM IST
  • ತಮ್ಮ ವಿರೋಧಿಗಳಿಗೆ ದುಬೈನಿಂದಲೇ ಖಡಕ್ ಸಂದೇಶ ನೀಡಿದ ನಟ ದರ್ಶನ್
  • ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ.
  • ‘ಕಾಲಾಯ ತಸ್ಮಯ್ ನಮಃ’ ಎಂದು ತಿರುಗೇಟು ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಗ್ ಸ್ಟಾರ್ ದರ್ಶನ್ ‘ಕಾಲಾಯ ತಸ್ಮಯ್ ನಮಃ’ ಅಂದಿದ್ದು ಯಾರಿಗೆ..? title=
ತಿರುಗೇಟು ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಲ್ಲಿ ಸೂಪರ್ ಹಿಟ್ ಆಗಿದೆ. ‘ಕಾಟೇರ’ ಚಿತ್ರಕಥೆ ಸಿನಿಪ್ರಿಯರಿಗೆ ಇಷ್ಟವಾಗಿದ್ದು, ದರ್ಶನ್‍ಗೆ ಜೈ ಹೋ ಅಂದಿದ್ದಾರೆ. ಹೀಗಾಗಿ ಈ ಸಿನಿಮಾ ಬಿಡುಗಡೆಯಾದ ಬಳಿಕ ದೊಡ್ಡ ಹೈಪ್ ಕ್ರಿಯೆಟ್ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡಿದೆ.

‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್‍ ಧೂಳಿಪಟ ಮಾಡಿದ್ದು, 100 ಕೋಟಿ ರೂ. ಕ್ಲಬ್ ಸೇರಿ ಮುನ್ನುಗ್ಗುತ್ತಿದೆ. ಡಿಸೆಂಬರ್ 29ರಂದು ಬಿಡುಡೆಯಾದ ಈ ಸಿನಿಮಾ ಹಲವಾರು ದಾಖಲೆಗಳನ್ನು ನಿರ್ಮಿಸಿದೆ. ದುಬೈನಲ್ಲಿಯೂ ‘ಕಾಟೇರ’ ಅಬ್ಬರ ಜೋರಾಗಿದೆ. ಸಿನಿಮಾ ಪ್ರಚಾರಕ್ಕೆ ದುಬೈಗೆ ತೆರಳಿರುವ ದರ್ಶನ್ ಹಂಚಿಕೊಂಡಿರುವ ಪೋಸ್ಟ್‍ವೊಂದು ಸಖತ್ ಸೌಂಡ್ ಮಾಡುತ್ತಿದೆ.

ಇದನ್ನೂ ಓದಿ: ಬಿಗ್ ಬಾಸ್ ನಲ್ಲಿ ನೇರವಾಗಿ ಫೈನಲ್ ಗೆ ಟಿಕೆಟ್ ಪಡೆದ ಸ್ಪರ್ಧಿ! ಇವರಿಗಿಲ್ಲ ಇನ್ನು ನಾಮಿನೇಷನ್ ಭಯ

ಬೆಂಗಳೂರಿನ ಜೆಟ್‍ಲ್ಯಾಗ್ ಪಬ್‍ನಲ್ಲಿ ‘ಕಾಟೇರ’ ಸಿನಿಮಾದ ಸಕ್ಸಸ್ ಪಾರ್ಟಿ ಅಯೋಜಿಸಲಾಗಿತ್ತು. ಸಮಯಮೀರಿ ಪಾರ್ಟಿ ಮಾಡಿದ್ದಕ್ಕೆ ಬೆಂಗಳೂರು ಪೊಲೀಸರು ನಟರಾದ ದರ್ಶನ್, ಡಾಲಿ ಧನಂಜಯ್, ಚಿಕ್ಕಣ್ಣ, ರಾಕ್‍ಲೈನ್ ವೆಂಕಟೇಶ್, ನಿನಾಸಂ ಸತೀಶ್ ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ದುಬೈನಿಂದ ಬಂದ ಬಳಿಕ ದರ್ಶನ್ ವಿಚಾರಣೆಗೆ ಹಾಜರಾಗಲಿದ್ದಾರೆಂದು ಹೇಳಲಾಗಿದೆ.

ಈ ಬೆಳವಣಿಗೆ ಬಳಿಕ ದರ್ಶನ್ ವಿರೋಧಿಗಳು ಸೋಷಿಯಲ್ ಮೀಡಿಯಾದಲ್ಲಿ ವಿವಿಧ ರೀತಿಯಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ದರ್ಶನ್ ತಮ್ಮ ವಿರೋಧಿಗಳಿಗೆ ಪೋಸ್ಟ್ ಹಂಚಿಕೊಳ್ಳುವ ಮೂಲಕ ಖಡಕ್ ಸಂದೇಶವೊಂದನ್ನು ರವಾನಿಸಿದ್ದಾರೆ.  ‘ಕಾಟೇರ’ನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ’ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಜೊತೆ ಎಂಗೇಜ್ಮೆಂಟ್ ವದಂತಿ ಬಗ್ಗೆ ವಿಜಯ್ ದೇವರಕೊಂಡ ಕಡೆಯಿಂದ ಸಿಕ್ಕೇ ಬಿಡ್ತು ಸ್ಪಷ್ಟನೆ!

ರಾಕ್‍ಲೈನ್‍ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್​ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News