ರಾಷ್ಟ್ರ ಪ್ರಶಸ್ತಿ ಬೆನ್ನಲ್ಲೆ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌..! 'ಪುಷ್ಪ 2'ಗೆ ಡೇಟ್‌ ಫಿಕ್ಸ್‌

Allu Arjun Pushpa 2 : 'ಪುಷ್ಪ' ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್‌ ಅವರು ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸುದ್ದಿ ಈಗಾಗಲೇ ಬನ್ನಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಇದೀಗ ಅರ್ಜುನ್‌ ಫ್ಯಾನ್ಸ್‌ಗೆ ಮತ್ತೊಂದು ಗುಡ್‌ ನ್ಯೂಸ್‌ ಇದೆ.

Written by - Krishna N K | Last Updated : Aug 25, 2023, 02:59 PM IST
  • 'ಪುಷ್ಪ- ದಿ ರೂಲ್' ಭಾರತದ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಸಿನಿಮಾಗಳಲ್ಲಿ ಒಂದಾಗಿದೆ.
  • 'ಪುಷ್ಪ' ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್‌ ಅವರು ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.
  • ಈ ಸಿನಿಮಾ ಎರಡನೇ ಭಾಗ ಒಂದು ರೇಂಜ್‌ಗೆ ನಿರೀಕ್ಷೆ ಹುಟ್ಟು ಹಾಕಿದೆ. ಈ ಚಿತ್ರಕ್ಕೆ ಸಂಬಂಧಿಸಿ ಬಿಗ್‌ ಅಪ್‌ಡೇಟ್‌ ಹೊರಬಿದ್ದಿದೆ.
ರಾಷ್ಟ್ರ ಪ್ರಶಸ್ತಿ ಬೆನ್ನಲ್ಲೆ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌..! 'ಪುಷ್ಪ 2'ಗೆ ಡೇಟ್‌ ಫಿಕ್ಸ್‌ title=

Pushpa 2 release date : 'ಪುಷ್ಪ- ದಿ ರೂಲ್' ಭಾರತದ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಸಿನಿಮಾಗಳಲ್ಲಿ ಒಂದಾಗಿದೆ. ಅಲ್ಲು ಅರ್ಜುನ್ - ಸುಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಎರಡನೇ ಭಾಗ ಒಂದು ರೇಂಜ್‌ಗೆ ನಿರೀಕ್ಷೆ ಹುಟ್ಟು ಹಾಕಿದೆ. ಈ ಚಿತ್ರಕ್ಕೆ ಸಂಬಂಧಿಸಿ ಇದೀಗ ಬಿಗ್‌ ಅಪ್‌ಡೇಟ್‌ ಒಂದು ಹೊರಬಿದ್ದಿದೆ. 

ಹೌದು... ಇತ್ತೀಚೆಗಷ್ಟೇ ಘೋಷಣೆಯಾದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ‘ಪುಷ್ಪ’ ಸಿನಿಮಾ ತನ್ನ ಶಕ್ತಿ ಪ್ರದರ್ಶಿಸಿದೆ. ಇದರಲ್ಲಿ ಅದ್ಬುತ ಅಭಿನಯ ನೀಡಿದ ಅಲ್ಲು ಅರ್ಜುನ್‌ ರಾಷ್ಟ್ರೀಯ ಶ್ರೇಷ್ಠ ನಟ ಪ್ರಶಸ್ತಿಯನ್ನೂ ಪಡೆದಿದ್ದಾರೆ. ತೆಲುಗಿನ ಯಾವ ಹೀರೋಗೂ ಸಾಧ್ಯವಾಗದ ಸಾಧನೆ ಮಾಡಿದ್ದಾರೆ. ಈ ಚಿತ್ರಕ್ಕೆ ಸಂಗೀತ ನೀಡಿರುವ ದೇವಿಶ್ರೀ ಪ್ರಸಾದ್ ಅತ್ಯುತ್ತಮ ಸಂಗೀತ ನಿರ್ದೇಶಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ಇದನ್ನೂ ಓದಿ: ಅಮಾಯಕ 'ಟೋಬಿ'ಯನ್ನ ಇಡೀ ಸಮಾಜ ಬಳಸಿಕೊಳ್ಳೋ ರೀತಿಗೆ ನೀವು ಕಣ್ಣೀರು ಹಾಕೋದು ಪಕ್ಕಾ..! ಕ್ಲೈಮಾಕ್ಸ್ ಮಾತ್ರ ಕಾಡುತ್ತೆ ನಿಮ್ನ..!

'ಪುಷ್ಪಾ- ದಿ ರೂಲ್' ರಿಲೀಸ್ ಡೇಟ್‌ : 'ಪುಷ್ಪ- ದಿ ರೂಲ್' ಬಿಡುಗಡೆಯ ದಿನಾಂಕದ ಬಗ್ಗೆ ನಿರ್ಮಾಪಕರು ಒಂದು ಅಂದಾಜಿಗೆ ಬಂದಿದ್ದಾರೆಂದು ತೋರುತ್ತದೆ. ಮುಂದಿನ ವರ್ಷ (2024) ಮಾರ್ಚ್ 22ಕ್ಕೆ ಚಿತ್ರವನ್ನು ರಿಲೀಸ್ ಮಾಡಲು ಡೇಟ್ ಫಿಕ್ಸ್ ಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ‘ಪುಷ್ಪ’ ಭಾಗ 1ಕ್ಕೆ ಹೋಲಿಸಿದರೆ ‘ಪುಷ್ಪ 2’ ಅಭೂತಪೂರ್ವ ಯಶಸ್ಸು ಕಾಣಲಿದೆ ಎಂಬುದು ನಿರ್ಮಾಪಕರ ನಂಬಿಕೆ. ಸದ್ಯ ಈ ಸಿನಿಮಾದ ಶೂಟಿಂಗ್ ಶರವೇಗದಲ್ಲಿ ಸಾಗುತ್ತಿದ್ದು, 75 ರಷ್ಟು ಶೂಟಿಂಗ್‌ ಈಗಾಗಲೇ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ.

ಈಗಾಗಲೇ ಚಿತ್ರದ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಚಿತ್ರದ ಬಹುತೇಕ ಚಿತ್ರೀಕರಣ ವೈಜಾಗ್‌ನಲ್ಲಿ ನಡೆದಿದೆ. ಸದ್ಯ ರಾಮೋಜಿ ಫಿಲಂ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದೆಯಂತೆ. ಈ ಚಿತ್ರದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ತಯಾರಕರು ತಯಾರಿ ನಡೆಸುತ್ತಿದ್ದಾರೆ. 

ಇದನ್ನೂ ಓದಿ:  ವರಮಹಾಲಕ್ಷ್ಮಿ ಹಬ್ಬಕ್ಕೆ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ನಟ ಧ್ರುವ ಸರ್ಜಾ..! ಏನದು..?

ಮೈತ್ರಿ ಮೂವಿ ಮೇಕರ್ಸ್ ಸುಮಾರು 400 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬನ್ನಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದರೆ, ಹಿರಿಯ ನಟ ಜಗಪತಿ ಬಾಬು, ಅನಸೂಯ ಮತ್ತು ಸುನೀಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಕ್ ಸ್ಟಾರ್ ದೇವಿಶ್ರೀಪ್ರಸಾದ್ ಸಂಗೀತ ನೀಡುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News