Karnataka Bandh: ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗದಿಂದ ಸಂಪೂರ್ಣ ಬೆಂಬಲ..!

Karnataka Bandh: ನಾಳೆ ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಶುಕ್ರವಚಾರ ಬೆಳಗ್ಗೆ 10 ಗಂಟೆಗೆ ಗುರುರಾಜ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಹೋರಾಟ ಮಾಡಲಾಗುತ್ತದೆ ಎಂದು ಎನ್.ಎಂ.ಸುರೇಶ್ ಹೇಳಿದ್ದಾರೆ.

Written by - Puttaraj K Alur | Last Updated : Sep 28, 2023, 10:40 PM IST
  • ಶುಕ್ರವಾರದ ಕರ್ನಾಟಕ ಬಂದ್‍ಗೆ ಕನ್ನಡ ಚಿತ್ರರಂಗ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ
  • ನಾಳೆ ನಟ ಶಿವರಾಜಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆ
  • ನಮ್ಮದು ರೈತಪರ ಹೋರಾಟವೆಂದ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್
Karnataka Bandh: ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗದಿಂದ ಸಂಪೂರ್ಣ ಬೆಂಬಲ..! title=
ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಶುಕ್ರವಾರ(ಸೆ.29) ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೂ 144 ಸೆಕ್ಷನ್ ಜಾರಿಯಾಗಲಿದೆ. ರೈತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಕನ್ನಡ ಚಿತ್ರರಂಗವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟದ ಕಿಚ್ಚು..!

ಕಾವೇರಿ ಹೋರಾಟದ ಕುರಿತು ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಎನ್‍.ಎಂ.ಸುರೇಶ್, ‘ನಾಳೆ ನಡೆಯಲಿರುವ ಕರ್ನಾಟಕ ಬಂದ್‍ಗೆ ನಮ್ಮ ಚಿತ್ರರಂಗದ ಸಂಪೂರ್ಣ ಬೆಂಬಲವಿದೆ’ ಎಂದು ಹೇಳಿದ್ದಾರೆ. ಮೊದಲು ನಾಳೆ ನಡೆಯಲಿರುವ ಬಂದ್ ಏಕೆ ಅಂತಾ ನಟ ಶಿವರಾಜಕುಮಾರ್ ಪ್ರಶ್ನಿಸಿದ್ದರು. ಬಳಿಕ ರೈತರ ಹೋರಾಟಕ್ಕೆ ನಾವು ಪ್ರತಿಭಟನೆ ಮೂಲಕ ಕೈಜೋಡಿಸಬೇಕು ಅಂತಾ ಮನವಿ ಮಾಡಿದೇವು. ಇದಕ್ಕೆ ಖಂಡಿತಾ ಬರುತ್ತೇನೆ ಅಂತಾ ಶಿವಣ್ಣ ಹೇಳಿದ್ದಾರೆ ಅಂತಾ ಹೇಳಿದರು.  

ಇದನ್ನೂ ಓದಿ: ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಿಂದಲೂ ಬೆಂಬಲ!

ನಾಳೆ ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಶುಕ್ರವಚಾರ ಬೆಳಗ್ಗೆ 10 ಗಂಟೆಗೆ ಗುರುರಾಜ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಹೋರಾಟ ಮಾಡಲಾಗುತ್ತದೆ. ಅಲ್ಲಿಯೇ ಚಿತ್ರರಂಗದ ನಟ-ನಟಿಯರು ಬರುತ್ತಾರೆ. ಈ ಬಗ್ಗೆ ಈಗಾಗಲೇ ಶಿವಣ್ಣ, ರವಿಚಂದ್ರನ್, ಪ್ರೇಮ್, ಧ್ರುವ ಸರ್ಜಾ, ವಿಜಯ್ ರಾಘವೇಂದ್ರ, ಶ್ರೀಮುರುಳಿ ಸೇರಿದಂತೆ ಎಲ್ಲರಿಗೂ ತಿಳಿಸಿದ್ದೇವೆ. ನಾಳೆ ನಡೆಯುವ ಪ್ರತಿಭಟನೆಯನ್ನು ಹಬ್ಬದ ರೀತಿಯಲ್ಲಿ ಮಾಡಲಾಗುತ್ತದೆ. ನಮ್ಮದು ರೈತರ ಪರ ಹೋರಾಟ, ಬಂದ್‌ಗೆ ಇಡೀ ಚಿತ್ರೋದ್ಯಮದ ಬೆಂಬಲವಿದೆ ಎಂದು ಎನ್.ಎಂ.ಸುರೇಶ್ ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News