Curry Leaves Benefits: ನಿತ್ಯ ಮುಂಜಾನೆ ಕರಿಬೇವಿನ ಎಲೆ ತಿನ್ನುವುದರಿಂದ ಈ ರೋಗಗಳು ನಿಮ್ಮ ಹತ್ತಿರವೂ ಸುಳಿಯಲ್ಲ

Curry Leaves Benefits: ಆಹಾರದಲ್ಲಿ ಕರಿಬೇವಿನ ಎಲೆಗಳನ್ನು ಬಳಸುವುದರಿಂದ ಆಹಾರದ ರುಚಿ ಹೆಚ್ಚುತ್ತದೆ. ಆದರೆ ಈ ಎಲೆಗಳನ್ನು ಬೆಳಿಗ್ಗೆ ಅಗಿದು ತಿನ್ನುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು ಎಂದು ನಿಮಗೆ ತಿಳಿದಿದೆಯೇ. 

Written by - Yashaswini V | Last Updated : May 23, 2022, 02:25 PM IST
  • ಕರಿಬೇವಿನ ಸೊಪ್ಪು ಆರೋಗ್ಯದ ನಿಧಿ
  • ಕರಿಬೇವಿನ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ವಿಟಮಿನ್‌ಗಳು ಮತ್ತು ಮೆಗ್ನೀಸಿಯಮ್‌ನಂತಹ ಪೋಷಕಾಂಶಗಳು ಕಂಡುಬರುತ್ತವೆ
  • ಇದು ದೇಹಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ.
Curry Leaves Benefits: ನಿತ್ಯ ಮುಂಜಾನೆ ಕರಿಬೇವಿನ ಎಲೆ ತಿನ್ನುವುದರಿಂದ ಈ ರೋಗಗಳು ನಿಮ್ಮ ಹತ್ತಿರವೂ ಸುಳಿಯಲ್ಲ  title=
Curry Leaves Benefits

ಕರಿಬೇವಿನ ಎಲೆ ಸೇವನೆಯ ಪ್ರಯೋಜನಗಳು: ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಎಲೆ ಇಲ್ಲದೆ ಪೂರ್ಣ ಎಂದೆನಿಸುವುದೇ ಇಲ್ಲ. ಅಡುಗೆಯಲ್ಲಿ ಕರಿಬೇವಿನ ಎಲೆ ಬಳಸುವುದರಿಂದ ಆಹಾರದ ರುಚಿ ಹೆಚ್ಚುತ್ತದೆ ಎಂದು ಎಲ್ಲರಿಗೂ ತಿಲಿದಿಎ. ಆದರೆ, ಈ ಎಲೆಗಳನ್ನು ಬೆಳಿಗ್ಗೆ ಅಗಿದು ತಿನ್ನುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು ಎಂದು ನಿಮಗೆ ತಿಳಿದಿದೆಯೇ?

ಕರಿಬೇವಿನ ಸೊಪ್ಪು ಆರೋಗ್ಯದ ನಿಧಿ:
ಕರಿಬೇವಿನ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ವಿಟಮಿನ್‌ಗಳು ಮತ್ತು ಮೆಗ್ನೀಸಿಯಮ್‌ನಂತಹ ಪೋಷಕಾಂಶಗಳು ಕಂಡುಬರುತ್ತವೆ, ಇದು ದೇಹಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಪ್ರತಿದಿನ ಬೆಳಿಗ್ಗೆ 3 ರಿಂದ 4 ಹಸಿರು ಎಲೆಗಳನ್ನು ಅಗಿದು ತಿನ್ನುವುದರಿಂದ ಅದು ನಿಮಗೆ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ತಿಳಿಯಿರಿ...

ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಆಗುವ ಅದ್ಭುತ ಪ್ರಯೋಜನಗಳು:-
1. ಕಣ್ಣುಗಳಿಗೆ ಒಳ್ಳೆಯದು:

ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ, ಇರುಳುಗುರುಡುತನ ಅಥವಾ ಕಣ್ಣುಗಳಿಗೆ ಸಂಬಂಧಿಸಿದ ಇತರ ಅನೇಕ ಕಾಯಿಲೆಗಳ ಅಪಾಯವನ್ನು ತಪ್ಪಿಸಬಹುದು ಎಂದು ಹೇಳಲಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಎ ಅಗತ್ಯ ಪೋಷಕಾಂಶವು ಕಂಡುಬರುತ್ತದೆ, ಇದು ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ- Weight Loss Mistakes: ಪ್ರತಿದಿನ 5000 ಹೆಜ್ಜೆ ನಡೆದರೂ ತೂಕ ಕಡಿಮೆಯಾಗುತ್ತಿಲ್ಲವೇ? ನೀವೂ ಈ ತಪ್ಪು ಮಾಡುತ್ತೀದ್ದೀರಾ!

2. ಮಧುಮೇಹದಲ್ಲಿ ಸಹಾಯಕ:
ಕರಿಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹೈಪೊಗ್ಲಿಸಿಮಿಕ್ ಗುಣಲಕ್ಷಣಗಳನ್ನು ಹೊಂದಿರುವ ಕಾರಣ ಮಧುಮೇಹ ರೋಗಿಗಳಿಗೆ ಹೆಚ್ಚಾಗಿ ಕರಿಬೇವಿನ ಎಲೆಗಳನ್ನು ಅಗಿಯಲು ಸಲಹೆ ನೀಡಲಾಗುತ್ತದೆ.

3. ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ:
ಕರಿಬೇವಿನ ಎಲೆಗಳನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಗಿಯಬೇಕು. ಏಕೆಂದರೆ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆ, ಆಮ್ಲೀಯತೆ, ಉಬ್ಬುವುದು ಸೇರಿದಂತೆ ಎಲ್ಲಾ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

4. ಸೋಂಕನ್ನು ತಡೆಗಟ್ಟುವುದು:
ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳು ಕರಿಬೇವಿನ ಎಲೆಗಳಲ್ಲಿ ಕಂಡುಬರುತ್ತವೆ, ಇದು ಅನೇಕ ರೀತಿಯ ಸೋಂಕುಗಳನ್ನು ತಡೆಯುತ್ತದೆ ಮತ್ತು ರೋಗಗಳ ಅಪಾಯವನ್ನು ತಪ್ಪಿಸುತ್ತದೆ.

ಇದನ್ನೂ ಓದಿ- Cholesterol Control Drink: ಈ ಡ್ರಿಂಕ್ಸ್ ಸಹಾಯದಿಂದ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು

5. ತೂಕವನ್ನು ಕಳೆದುಕೊಳ್ಳಲು:
ಕರಿಬೇವಿನ ಎಲೆಗಳನ್ನು ಜಗಿಯುವುದು ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಏಕೆಂದರೆ ಇದರಲ್ಲಿ ಈಥೈಲ್ ಅಸಿಟೇಟ್, ಮಹಾನಿಂಬಿನ್ ಮತ್ತು ಡೈಕ್ಲೋರೋಮೆಥೇನ್ ನಂತಹ ಪೋಷಕಾಂಶಗಳಿವೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News