ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆ ಜೊತೆ ಇದನ್ನು ಬೆರೆಸಿ ಕುಡಿದರೆ... ದಿನವಿಡಿ ಬ್ಲಡ್‌ ಶುಗರ್‌ ಕಂಟ್ರೋಲ್‌ ನಲ್ಲಿರುತ್ತೆ!

Diabetes Remedies : ಬೆಳಗ್ಗೆ ಬೇವಿನ ನೀರು ಕುಡಿದು ದಿನ ಆರಂಭಿಸಿದರೆ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಅಲರ್ಜಿ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ.

Written by - Chetana Devarmani | Last Updated : May 18, 2024, 07:45 AM IST
  • ಮಧುಮೇಹ ನಿಯಂತ್ರಿಸಲು ಬೇವಿನ ನೀರು
  • ಬೇವಿನ ನೀರು ಆರೋಗ್ಯ ಪ್ರಯೋಜನ
  • ಅಲರ್ಜಿ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆ ಜೊತೆ ಇದನ್ನು ಬೆರೆಸಿ ಕುಡಿದರೆ... ದಿನವಿಡಿ ಬ್ಲಡ್‌ ಶುಗರ್‌ ಕಂಟ್ರೋಲ್‌ ನಲ್ಲಿರುತ್ತೆ!  title=

Blood sugar control remedies: ಬೆಳಿಗ್ಗೆ ಬೇಗ ಏಳುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ವ್ಯಾಯಾಮದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಇದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಬೆಳಗ್ಗೆ ಬೇವಿನ ನೀರು ಕುಡಿದು ದಿನ ಆರಂಭಿಸಿದರೆ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಅಲರ್ಜಿ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ.

ಬೇವಿನ ನೀರು ಮಾಡುವುದು ಹೇಗೆ?

ನೂರಾರು ವರ್ಷಗಳಿಂದ ಅನೇಕ ಜನರು ಆರೋಗ್ಯವನ್ನು ಸುಧಾರಿಸಲು ಬೇವನ್ನು ಬಳಸುತ್ತಿದ್ದಾರೆ. ಬೇವು ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಮಧುಮೇಹ, ಅಸ್ತಮಾ, ಅಲರ್ಜಿ ಮತ್ತು ಸಂಧಿವಾತದ ಸಮಸ್ಯೆಯಿಂದ ಬೇವು ನಿಮ್ಮನ್ನು ರಕ್ಷಿಸುತ್ತದೆ. ಆಯುರ್ವೇದದ ಪ್ರಕಾರ, ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಈ ಬೇವಿನ ನೀರನ್ನು ಕುಡಿಯುವುದು ದೇಹಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದು ಅಲರ್ಜಿಯನ್ನು ಉಂಟುಮಾಡುವ ರೋಗಗಳನ್ನು ತಡೆಯುತ್ತದೆ.

ಬೇವಿನ ಸೊಪ್ಪನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಗ್ಗೆ ಸೋಸಿ ಆ ನೀರನ್ನೇ ಕುಡಿದರೆ ಸಾಕು. ಆ ಮೂಲಕ ಬೆಳಗ್ಗೆ ಎದ್ದ ನಂತರ ಬೇವಿನ ನೀರು ಕುಡಿಯುವುದರಿಂದ ಯಾವ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು.

ಬೇವಿನ ನೀರು ಕುಡಿಯುವುದರ ಆರೋಗ್ಯ ಪ್ರಯೋಜನ : 

ಸಂಧಿವಾತಕ್ಕೆ ರಾಮಬಾಣ : ಉರಿಯೂತದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಬೇವಿನ ನೀರು ಪ್ರಯೋಜನಕಾರಿಯಾಗಿದೆ. ಇದು ದೇಹದಿಂದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಂಧಿವಾತ, ಚರ್ಮದ ಅಲರ್ಜಿ ಇತ್ಯಾದಿಗಳಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿ.

ಇದನ್ನೂ ಓದಿ: ನೀವು ಅಧಿಕ ರಕ್ತದೊತ್ತಡದ ಬಗ್ಗೆ ಚಿಂತಿತರಾಗಿದ್ದಿರಾ? ಇಲ್ಲಿದೆ ತಜ್ಞರಿಂದ ಸುಲಭ ಪರಿಹಾರ  

ಚರ್ಮಕ್ಕೆ ಒಳ್ಳೆಯದು : ಬೇವಿನ ನೀರು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಕೂಡಿದೆ. ಯಾವುದೇ ರೀತಿಯ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ಮೊಡವೆ ಮತ್ತು ಚರ್ಮದ ಅಲರ್ಜಿಯನ್ನು ಕಡಿಮೆ ಮಾಡುವ ಮೂಲಕ ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಸೂರ್ಯನ ಬೆಳಕು ಮತ್ತು ಮಾಲಿನ್ಯದಿಂದ ಚರ್ಮವನ್ನು ರಕ್ಷಿಸುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚುತ್ತದೆ : ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬೇವಿನ ನೀರು ಪ್ರಯೋಜನಕಾರಿಯಾಗಿದೆ. ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. 

ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡುತ್ತದೆ : ಶೀತ ಅಥವಾ ಜ್ವರದಿಂದ ಬಳಲುವವರಿಗೆ ಬೇವು ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗುತ್ತದೆ. ದೇಹದಲ್ಲಿನ ಹಾನಿಕಾರಕ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡಲು ಬೇವು ಸಹಾಯ ಮಾಡುತ್ತದೆ. ಬೇವಿನ ಎಲೆಗಳು ಜ್ವರ, ಮೂತ್ರದ ಸೋಂಕು ಇತ್ಯಾದಿಗಳಿಗೆ ಚಿಕಿತ್ಸೆ ನೀಡಲು ಉಪಯುಕ್ತವೆಂದು ಪರಿಗಣಿಸಲಾಗಿದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ : ಮಧುಮೇಹದಿಂದ ಬಳಲುತ್ತಿರುವವರು ಬೆಳಗಿನ ಉಪಾಹಾರದಲ್ಲಿ ಬೇವಿನ ನೀರನ್ನು ಕುಡಿಯಬಹುದು. ಆಯುರ್ವೇದದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಐದು ಕಾಯಿಲೆಗಳನ್ನು ಬುಡದಿಂದಲೇ ಕಿತ್ತು ಹಾಕುತ್ತದೆ ತೊಂಡೆಕಾಯಿ !

ಸೂಚನೆ: ಬೇವಿನ ನೀರನ್ನು ಕುಡಿಯುವುದರಿಂದ ವಾಂತಿ ಮತ್ತು ಭೇದಿಯಂತಹ ಅಡ್ಡಪರಿಣಾಮಗಳು ಉಂಟಾಗಬಹುದು. ಶ್ವಾಸಕೋಶ ಮತ್ತು ಮೂತ್ರಪಿಂಡದ ತೊಂದರೆ ಇರುವವರು ಇದನ್ನು ಕುಡಿಯುವುದನ್ನು ತಪ್ಪಿಸಬೇಕು. ಇದನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಈ ಎಲ್ಲಾ ಮಾಹಿತಿಯು ಸಾಮಾನ್ಯವಾಗಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News