ಮಣ್ಣಿನ ಕೆಳಗೆ ಬೆಳೆಯುವ ಈ ಗೆಡ್ಡೆ ಮಧುಮೇಹ ನಿಯಂತ್ರಣಕ್ಕೆ ಒಂದು ರಾಮಬಾಣ ಚಿಕಿತ್ಸೆ!

Taming Blood Sugar: ಆಲೂಗೆಡ್ಡೆ ತರಹ ಕಾಣುವ ಈ ತರಕಾರಿಯ ಹೆಸರು ಕೆಸುವಿನ ಗೆಡ್ಡೆ, ಇದರ ಸೇವನೆ ಕೇವಲ ಒಂದು ಅಥವಾ ಎರಡಲ್ಲ ಆರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.Health News In Kannada  

Written by - Nitin Tabib | Last Updated : Sep 23, 2023, 07:42 PM IST
  • ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳಿಂದ ಕೆಸುವಿನ ಗೆಡ್ಡೆ ರಕ್ಷಣೆ ಒದಗಿಸುತ್ತದೆ.
  • ಇದರಲ್ಲಿರುವ ಕ್ಯಾನ್ಸರ್ ವಿರೋಧಿ ಗುಣಗಳು ಜೀವಕೋಶಗಳಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುತ್ತದೆ.
  • ಇದಲ್ಲದೆ, ಸಸ್ಯಗಳು ಅತ್ಯುತ್ತಮ ಪೂರಕ ಪಾಲಿಫಿನಾಲ್‌ಗಳನ್ನು ಹೊಂದಿದೆ, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಮಣ್ಣಿನ ಕೆಳಗೆ ಬೆಳೆಯುವ ಈ ಗೆಡ್ಡೆ ಮಧುಮೇಹ ನಿಯಂತ್ರಣಕ್ಕೆ ಒಂದು ರಾಮಬಾಣ ಚಿಕಿತ್ಸೆ! title=

Taming Blood Sugar: ಅನೇಕ ತರಕಾರಿಗಳು ನೆಲದ ಮೇಲೆ ಮಾತ್ರವಲ್ಲದೆ ನೆಲದ ಆಳದಲ್ಲಿಯೂ ಕೂಡ ಬೆಳೆಯುತ್ತವೆ. ನಮ್ಮ ದೇಹವನ್ನು ಆರೋಗ್ಯವಾಗಿಡಲು ಇದು ತುಂಬಾ ಪ್ರಯೋಜನಕಾರಿಯಾಗಿದೆ. ಇವುಗಳಲ್ಲಿ ಒಂದು ಆಲೂಗೆಡ್ಡೆಯಂತೆ ಕಾಣುವ ಕೆಸುವಿನ ಗೆಡ್ಡೆ ಕೂಡ ಒಂದಾಗಿದೆ. ಇದು ರುಚಿಕರವಾಗಿ ಕಾಣುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ (Health News In Kannada). ಇದು ಮಧುಮೇಹ ರೋಗಿಗಳಿಗೆ ರಾಮಬಾಣಕ್ಕಿಂತ ಕಡಿಮೆಯಿಲ್ಲ. ಈ ಕಾರಣದಿಂದಾಗಿ, ಕೆಸುವಿನ ಗೆಡ್ಡೆಯಲ್ಲಿರುವ ಪೋಷಕಾಂಶಗಳು ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತವೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸುತ್ತದೆ. ಈ ತರಕಾರಿಗಳಲ್ಲಿ ಯಾವ ಪೋಷಕಾಂಶಗಳಿವೆ ಮತ್ತು ಇದು ಆರೋಗ್ಯಕ್ಕೆ ಯಾವ ಯಾವ ಲಾಭಗಳನ್ನು ನೀಡುತ್ತದೆ ತಿಳಿದುಕೊಳ್ಳೋಣ ಬನ್ನಿ, 

ವಾಸ್ತವದಲ್ಲಿ ಅರಬಿ ಅಥವಾ ಕೆಸುವಿನ ಗೆದ್ದೆಯಲ್ಲಿ ಹಲವು ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಇವುಗಳು ಮುಖ್ಯವಾಗಿ ಜೀವಸತ್ವಗಳು, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಫೈಬರ್, ಫೋಲೇಟ್, ಕಬ್ಬಿಣ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿವೆ. ಇದರ ಸೇವನೆ ನಮ್ಮ ಆರೋಗ್ಯಕ್ಕೆ ತುಂಬಾ ಲಾಭಕಾರಿಯಾಗಿದೆ. ಮಧುಮೇಹದಂತಹ ಕಾಯಿಲೆಗಳನ್ನು ನಿಯಂತ್ರಿಸುವುದರ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಇದು ಹೆಚ್ಚಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಹೊಟ್ಟೆಯನ್ನು ಆರೋಗ್ಯವಾಗಿಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿಡುತ್ತದೆ
ಆಲೂಗಡ್ಡೆಯಂತೆ ಕಾಣುವ ಈ ಕೆಸುವಿನ ಗೆಡ್ಡೆಯಲ್ಲಿ  ಪಿಷ್ಟ ಹೇರಳ ಪ್ರಮಾಣದಲ್ಲಿ ಕಂಡುಬರುತ್ತದೆ. ಇದಲ್ಲದೆ, ಇದು ಕಾರ್ಬೋಹೈಡ್ರೇಟ್‌ಗಳಲ್ಲಿ ಸಮೃದ್ಧವಾಗಿದೆ, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ತರಕಾರಿಯ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ಸುಲಭವಾಗಿ ನಿಯಂತ್ರಿಸುತ್ತದೆ. ಇದಲ್ಲದೆ, ಫೈಬರ್ ಮತ್ತು ನಿರೋಧಕ ಪಿಷ್ಟವು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯ ಹಠಾತ್ ಏರಿಕೆಯನ್ನು ತಡೆಯುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಹೆಚ್ಚಾಗುವುದನ್ನು ತಡೆಯುತ್ತದೆ. ಸುಲಭವಾಗಿ ನಿಯಂತ್ರಿಸುತ್ತದೆ. ಮಧುಮೇಹ ರೋಗಿಗಳು ಆಹಾರದಲ್ಲಿ ಕೆಸುವಿನ ಗೆಡ್ಡೆ ತರಕಾರಿಯನ್ನು ಸೇರಿಸುವುದು ಪ್ರಯೋಜನಕಾರಿಯಾಗಿದೆ.

ಇದು ಕಣ್ಣುಗಳ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ
ಕೆಸುವಿನ ಗೆಡ್ಡೆ ಉತ್ಕರ್ಷಣ ನಿರೋಧಕಗಳು, ಬೀಟಾ ಕ್ಯಾರೋಟಿನ್ ಮತ್ತು ಕ್ರಿಪ್ಟೋಕ್ಸಾಂಥಿನ್ ಅನ್ನು ಹೊಂದಿರುತ್ತದೆ. ಇದು ದೃಷ್ಟಿಯನ್ನು ಸುಧಾರಿಸುತ್ತದೆ. ಇದು ಕಣ್ಣುಗಳಿಗೆ ಸಂಬಂಧಿಸಿದ ಕಪ್ಪು ವರ್ತುಗಳು, ಒತ್ತಡ ಮತ್ತು ಇತರ ಸಂಬಂಧಿತ ಕಾಯಿಲೆಗಳಿಂದ ರಕ್ಷಿಸುತ್ತದೆ. ಕೆಸುವಿನ ಗೆದ್ದೆಯಲ್ಲಿರುವ ಆಂಟಿ-ಆಕ್ಸಿಡೆಂಟ್ ಕಣ್ಣಿನ ಜೀವಕೋಶಗಳ ವಯಸ್ಸಾಗುವಿಕೆಯನ್ನು ತಡೆಯುತ್ತದೆ. ಇದು ಕಣ್ಣಿನ ಪೊರೆ ಮತ್ತು ಮ್ಯಾಕ್ಯುಲರ್ ಡಿಜೆನರೇಶನ್‌ನಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಪ್ರತಿ ಎರಡನೇ ಅಥವಾ ಮೂರನೇ ದಿನಕ್ಕೆ ಕೆಸುವಿನ ಗೆಡ್ಡೆ ಸೇವಿಸುವುದರಿಂದ ದೀರ್ಘಕಾಲದವರೆಗೆ ದೃಷ್ಟಿ ಚೆನ್ನಾಗಿರುತ್ತದೆ.

ಕೆಸುವಿನ  ಕ್ಯಾನ್ಸರ್ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ 
ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳಿಂದ ಕೆಸುವಿನ ಗೆಡ್ಡೆ ರಕ್ಷಣೆ ಒದಗಿಸುತ್ತದೆ.  ಇದರಲ್ಲಿರುವ ಕ್ಯಾನ್ಸರ್ ವಿರೋಧಿ ಗುಣಗಳು ಜೀವಕೋಶಗಳಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುತ್ತದೆ. ಇದಲ್ಲದೆ, ಸಸ್ಯಗಳು ಅತ್ಯುತ್ತಮ ಪೂರಕ ಪಾಲಿಫಿನಾಲ್‌ಗಳನ್ನು ಹೊಂದಿದೆ, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದನ್ನು ಆಹಾರದಲ್ಲಿ ಸೇರಿಸುವುದರಿಂದ ಕ್ಯಾನ್ಸರ್ ಬರುವ ಅಪಾಯ ಕಡಿಮೆಯಾಗುತ್ತದೆ. ಇದಲ್ಲದೆ, ಕೆಸುವಿನ ಗೆದ್ದೆಯಲ್ಲಿ ಕಂಡುಬರುವ ಪಾಲಿಫಿನಾಲ್ಗಳು. ದೇಹವನ್ನು ಫ್ರೀ ರಾಡಿಕಲ್ ಹಾನಿಯಿಂದ ರಕ್ಷಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ
ರಕ್ತದೊತ್ತಡ ಅನಿಯಂತ್ರಿತವಾಗಿದ್ದಾರೆ ಆಹಾರದಲ್ಲಿ ಕೆಸುವಿನ ಗೆಡ್ಡೆ ಶಾಮೀಲುಗೊಳಿಸಿ. ಅಲ್ಲದೆ, ಇದರ ಎಲೆಗಳನ್ನು ಅಗಿಯುವುದರಿಂದ ರಕ್ತದೊತ್ತಡವು ಸುಲಭವಾಗಿ ನಿಯಲ್ಲಿರುತ್ತದೆ. ಇದರಲ್ಲಿರುವ ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ನರಗಳನ್ನು ಬಲಪಡಿಸುವುದರ ಜೊತೆಗೆ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ-ನಿಮ್ಮ ತಲೆ ಕೂದಲುಗಳು ಕೂಡ ಕೊಲೆಸ್ಟ್ರಾಲ್ ಹೆಚ್ಚಳದ ಸಂಕೇತ ನೀಡುತ್ತವೆ, ಯಾವ ರೀತಿಯ ಸಂಕೇತಗಳು ಇಲ್ಲಿ ತಿಳಿದುಕೊಳ್ಳಿ!

ಜೀರ್ಣಾಂಗ ವ್ಯವಸ್ಥೆಯನ್ನು ಬಳಪಡಿಸುತ್ತದೆ
ಕೆಸುವಿನ ಗೆಡ್ಡೆಯಲ್ಲಿರುವ ಫೈಬರ್ ಮತ್ತು ನಿರೋಧಕ ಪಿಷ್ಟವು ಹೊಟ್ಟೆಯಲ್ಲಿ ಇರುವ ಬ್ಯಾಕ್ಟೀರಿಯಾವನ್ನು ಶಾರ್ಟ್ ಚೈನ್ ಫ್ಯಾಟಿ ಆಸಿಡ್‌ಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವುದರ ಜೊತೆಗೆ, ಇದು ಕರುಳಿನ ಕ್ಯಾನ್ಸರ್ ಮತ್ತು ಉರಿಯೂತದ ಕರುಳಿನ ಕಾಯಿಲೆಯಿಂದ ರಕ್ಷಿಸುತ್ತದೆ. ಕೆಸುವಿನ ಗೆದ್ದೆಯನ್ನು ಆಹಾರದಲ್ಲಿ ಸೇರಿಸುವುದರಿಂದ ಬೊಜ್ಜು ಹೆಚ್ಚಾಗುವುದಿಲ್ಲ.

ಇದನ್ನೂ ಓದಿ-ಹೃದಯದ ಆರೋಗ್ಯಕ್ಕೆ ಲಾಭಕಾರಿ ಈ ಹಸಿರು ಈರುಳ್ಳಿ, ಹೇಗೆ ಬಳಸಬೇಕು ಇಲ್ಲಿ ತಿಳಿದುಕೊಳ್ಳಿ!

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಕೂಡ ಕೆಸುವಿನ ಗೆಡ್ಡೆಯನ್ನು ಸೇವಿಸಬಹುದು. ಉರಿಯೂತದ ಗುಣಲಕ್ಷಣಗಳು ಮತ್ತು ವಿಟಮಿನ್ ಸಿ ಮತ್ತು ಇ ಇದರಲ್ಲಿರುವ ಇದರಲ್ಲಿ ಹೇರಳ ಪ್ರಮಾಣದಲ್ಲಿರುತ್ತವೆ ಮತ್ತು ಅವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News