ನಿತ್ಯ ಈ ಮಸಾಲೆ ಸೇವಿಸಿದರೆ ಸಂಪೂರ್ಣ ನಿಯಂತ್ರಣದಲ್ಲಿರುವುದು ಬ್ಲಡ್ ಶುಗರ್ !

Diabetec Control Tips : ಈ ರೋಗವನ್ನು ಔಷಧ, ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅಭ್ಯಾಸಗಳಿಂದ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇನ್ನು ಕೆಲವು ಭಾರತೀಯ ಮಸಾಲೆಗಳು ಮಧುಮೆಹದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

Written by - Ranjitha R K | Last Updated : Feb 21, 2024, 02:24 PM IST
  • ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದೆ.
  • ಇದನ್ನು ಎಂದಿಗೂ ಸಂಪೂರ್ಣವಾಗಿ ಗುಣಪಡಿಸುವುದು ಸಾಧ್ಯವಿಲ್ಲ.
  • ಆದರೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ನಿತ್ಯ ಈ ಮಸಾಲೆ ಸೇವಿಸಿದರೆ ಸಂಪೂರ್ಣ ನಿಯಂತ್ರಣದಲ್ಲಿರುವುದು ಬ್ಲಡ್ ಶುಗರ್ ! title=

ಬೆಂಗಳೂರು : ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದೆ. ಇದನ್ನು ಎಂದಿಗೂ  ಸಂಪೂರ್ಣವಾಗಿ ಗುಣಪಡಿಸುವುದು ಸಾಧ್ಯವಿಲ್ಲ. ಆದರೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ರಕ್ತದಲ್ಲಿರುವ ಗ್ಲೂಕೋಸ್ ಅನ್ನು ಹೀರಿಕೊಳ್ಳಲು ದೇಹವು ಇನ್ಸುಲಿನ್ ಅನ್ನು ಸರಿಯಾಗಿ ಉತ್ಪಾದಿಸಲು ಸಾಧ್ಯವಾಗದಿದ್ದಾಗ ಈ ರೋಗವು ಸಂಭವಿಸುತ್ತದೆ. ಈ ರೋಗವು ಸಾಮಾನ್ಯವಾಗಿ ಕಳಪೆ ಜೀವನಶೈಲಿಯ ಪರಿಣಾಮವಾಗಿದೆ.ಕೆಲವೊಮ್ಮೆ   ಅನುವಂಶಿಕ ಕಾರಣಗಳಿಂದಲೂ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ.  

ICMR ನ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 101 ಲಕ್ಷ ಭಾರತೀಯರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ರೋಗವನ್ನು ಔಷಧ, ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅಭ್ಯಾಸಗಳಿಂದ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇನ್ನು ಕೆಲವು ಭಾರತೀಯ ಮಸಾಲೆಗಳು ಮಧುಮೆಹದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. 

ಇದನ್ನೂ ಓದಿ : Health Tips: ವಾರಕ್ಕೆ 3 ಪೇರಲೆ ಹಣ್ಣು ತಿಂದರೆ ಸಾಕು ಈ ಆರೋಗ್ಯ ಸಮಸ್ಯೆಗಳು ಮತ್ತೆಂದೂ ಬರಲ್ಲ!

ಶುಂಠಿ :
ಟೈಪ್ 2 ಡಯಾಬಿಟಿಸ್ ರೋಗಿಗಳಿಗೆ ಶುಂಠಿ ಸಹಾಯಕವಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ನಲ್ಲಿ ಪ್ರಕಟವಾದ ಸಂಶೋಧನೆಯು ಶುಂಠಿಯು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ ಎನ್ನುವುದನ್ನು ಸಾಬೀತು ಪಡಿಸಿದೆ. T2DM ರೋಗಿಗಳಲ್ಲಿ ಹೈಪರ್ ಇನ್ಸುಲಿನೆಮಿಯಾವನ್ನು ನಿಯಂತ್ರಿಸುವಲ್ಲಿ ಶುಂಠಿಯು ಅತ್ಯಂತ ಪರಿಣಾಮಕಾರಿಯಾಗಿದೆ. ಇದಲ್ಲದೆ, ಶುಂಠಿಯು T2DM ರೋಗಿಗಳಲ್ಲಿ ಯಕೃತ್ತು, ಮೂತ್ರಪಿಂಡ ಮತ್ತು ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯುತ್ತದೆ.  

ಬೆಳ್ಳುಳ್ಳಿ :
ರಕ್ತದಲ್ಲಿನ ಸಕ್ಕರೆ, ಒಟ್ಟು ಕೊಲೆಸ್ಟ್ರಾಲ್ ಮತ್ತು ಲಿಪೊಪ್ರೋಟೀನ್ ಅನ್ನು ನಿರ್ವಹಿಸುವಲ್ಲಿ ಬೆಳ್ಳುಳ್ಳಿ ಬಹಳ ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಕಂಡುಬರುವ ಅಲಿಸಿನ್ ಮೇದೋಜ್ಜೀರಕ ಗ್ರಂಥಿಯ ಬೀಟಾ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಇನ್ಸುಲಿನ್ ಅನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ : Health Tips: ವಾರಕ್ಕೆ 3 ಪೇರಲೆ ಹಣ್ಣು ತಿಂದರೆ ಸಾಕು ಈ ಆರೋಗ್ಯ ಸಮಸ್ಯೆಗಳು ಮತ್ತೆಂದೂ ಬರಲ್ಲ!

ಚಕ್ಕೆ :
ಮಧುಮೇಹದಲ್ಲಿ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಚಕ್ಕೆ ತುಂಬಾ ಪರಿಣಾಮಕಾರಿಯಾಗಿದೆ. ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, 12 ವಾರಗಳವರೆಗೆ 1 ಗ್ರಾಂ  ಚಕ್ಕೆ ಸೇವಿಸುವವರ ಫಾಸ್ಟಿಂಗ್  ಬ್ಲಡ್ ಶುಗರ್ ಮಟ್ಟದಲ್ಲಿ ಇಳಿಕೆ ಮತ್ತು ಮಧುಮೇಹ ಟೈಪ್ 2 ರೋಗಿಗಳಲ್ಲಿ ಆಕ್ಸಿಡೇಟಿವ್ ಒತ್ತಡದಲ್ಲಿ ಸುಧಾರಣೆ  ಕಂಡು ಬರುತ್ತದೆ ಎಂದು ಹೇಳಲಾಗುತ್ತದೆ. 

ಮೆಂತ್ಯೆ ಬೀಜ :
ಮೆಂತ್ಯ ಬೀಜಗಳು ಕರಗುವ ಫೈಬರ್ ಅನ್ನು ಹೊಂದಿರುತ್ತವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಮೆಂತ್ಯೆ ಮಧುಮೇಹ ರೋಗಿಗಳಿಗೆ ಉತ್ತಮ ಆಹಾರವಾಗಿದೆ. ಏಕೆಂದರೆ ಇದರಲ್ಲಿ ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುವ ಗ್ಯಾಲಕ್ಟೋಮನ್ನನ್ ಮತ್ತು ಟ್ರೈಗೋನೆಲ್ಲಾ ರಾಸಾಯನಿಕಗಳಿವೆ.

ಲವಂಗ :
ಲವಂಗವು ಮಧುಮೇಹ ರೋಗಿಗಳಿಗೆ ನಂಜುನಿರೋಧಕ, ಉರಿಯೂತ ನಿವಾರಕ, ನೋವು ನಿವಾರಕ ಮತ್ತು ಜೀರ್ಣಕಾರಿ ಆರೋಗ್ಯ ಪ್ರಯೋಜನಗಳಿಂದ ತುಂಬಿರುವ ಮಸಾಲೆಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. 

 

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News