Health Tips: ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ಏಕೆ ತಿನ್ನಬೇಕು ಗೊತ್ತಾ?

ಹಸಿರು ಬಟಾಣಿ ತಿನ್ನುವ ಪ್ರಯೋಜನಗಳು: ಹಸಿರು ಬಟಾಣಿಗಳ ರುಚಿಯನ್ನು ಯಾರು ತಾನೇ ಇಷ್ಟಪಡುವುದಿಲ್ಲ. ಹೆಚ್ಚಿನ ಆಹಾರ ತಜ್ಞರು ಇದನ್ನು ಚಳಿಗಾಲದಲ್ಲಿ ತಿನ್ನಲು ಶಿಫಾರಸು ಮಾಡುತ್ತಾರೆ. ಏಕೆಂದರೆ ಇದು ಕೆಲವು ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

Written by - Puttaraj K Alur | Last Updated : Nov 4, 2023, 01:20 PM IST
  • ಹಸಿರು ಬಟಾಣಿಯಲ್ಲಿ ಪ್ರೋಟೀನ್ ಹೇರಳವಾಗಿದ್ದು, ಇದು ಮೂಳೆಗಳು ಮತ್ತು ಸ್ನಾಯುಗಳು ಬಲಗೊಳಿಸುತ್ತದೆ
  • ಹಸಿರು ಬಟಾಣಿ ಫೈಬರ್‌ನ ಶ್ರೀಮಂತ ಮೂಲವಾಗಿದ್ದು, ತೂಕ ಇಳಿಕೆಗೆ ಸಹಕಾರಿಯಾಗಿದೆ
  • ಹಸಿರು ಬಟಾಣಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ
Health Tips: ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ಏಕೆ ತಿನ್ನಬೇಕು ಗೊತ್ತಾ? title=
ಹಸಿರು ಬಟಾಣಿ ಪ್ರಯೋಜನಗಳು

ನವದೆಹಲಿ: ಹಸಿರು ಬಟಾಣಿಗಳನ್ನು ಸಾಮಾನ್ಯವಾಗಿ ಚಳಿಗಾಲದಲ್ಲಿ ಬೆಳೆಯಲಾಗುತ್ತದೆ. ಆದರೆ ಅವು ವರ್ಷವಿಡೀ ಲಭ್ಯವಿರುತ್ತವೆ. ಆದರೆ ಒಣ ಬಟಾಣಿಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೀಗಾಗಿ ತಾಜಾ ಹಸಿರು ಬಟಾಣಿಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ. ಆಹಾರ ತಜ್ಞರ ಪ್ರಕಾರ, ‘ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ನಿಯಮಿತವಾಗಿ ಸೇವಿಸಿದರೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು’.

ಹಸಿರು ಬಟಾಣಿಯ ಅದ್ಭುತ ಪ್ರಯೋಜನಗಳು

1. ಪ್ರೋಟೀನ್‌ನ ಸಮೃದ್ಧ ಮೂಲ: ಹಸಿರು ಬಟಾಣಿ ಸಸ್ಯದ ಅತ್ಯುತ್ತಮ ಪ್ರೋಟೀನ್ ಅನ್ನು ಹೇರಳವಾಗಿ ಹೊಂದಿರುತ್ತದೆ. ನಿಯಮಿತವಾಗಿ ಇದನ್ನು ಸೇವಿಸಿದರೆ ಮೂಳೆಗಳು ಮತ್ತು ಸ್ನಾಯುಗಳು ಬಲಗೊಳ್ಳುತ್ತವೆ. ಇದು ಸ್ನಾಯುಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ ಮಕ್ಕಳ ದೇಹದ ಬೆಳವಣಿಗೆಗೆ ತುಂಬಾ ಸಹಾಯಕವಾಗಿದೆ.

2. ಫೈಬರ್‌ನಲ್ಲಿ ಸಮೃದ್ಧವಾಗಿದೆ: ಹಸಿರು ಬಟಾಣಿಗಳನ್ನು ಫೈಬರ್‌ನ ಶ್ರೀಮಂತ ಮೂಲವೆಂದು ಪರಿಗಣಿಸಲಾಗುತ್ತದೆ, ಇದನ್ನು ತಿನ್ನುವುದರಿಂದ ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಭಾವನೆ ಉಂಟಾಗುತ್ತದೆ. ಇದು ಅತಿಯಾದ ಆಹಾರ ಸೇವನೆ ತಪ್ಪಿಸಲು ಮತ್ತು ಕ್ರಮೇಣ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಪರಿಪೂರ್ಣ ಆಹಾರವಾಗಿದೆ.

ಇದನ್ನೂ ಓದಿ: Heart Attack Signs: ಈ 5 ಲಕ್ಷಣ ಕಾಣಿಸಿಕೊಂಡರೆ, ಹೃದಯವು ಅನಾರೋಗ್ಯದಿಂದ ಬಳಲುತ್ತಿದೆ ಎಂದರ್ಥ !

3. ಮಧುಮೇಹದಲ್ಲಿ ಪರಿಣಾಮಕಾರಿ: ಹಸಿರು ಬಟಾಣಿಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ ಮತ್ತು ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ಇದು ಹಠಾತ್ ಸಕ್ಕರೆ ಏರಿಕೆಯನ್ನು ತಡೆಯುತ್ತದೆ ಮತ್ತು ಫೈಬರ್‍ನಿಂದಾಗಿ ಕಾರ್ಬೋಹೈಡ್ರೇಟ್‌ಗಳ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಹಸಿರು ಬಟಾಣಿ ಅತ್ಯುತ್ತಮ ಆಹಾರವಾಗಿದೆ ಎಂಬುದೇ ಇದಕ್ಕೆ ಕಾರಣ.

4. ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ: ಹಸಿರು ಬಟಾಣಿಯಲ್ಲಿ ಅನೇಕ ಖನಿಜಗಳು ಕಂಡುಬರುತ್ತವೆ, ಇದು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಉದಾಹರಣೆಗೆ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ. ಈ ಎಲ್ಲಾ ಪೋಷಕಾಂಶಗಳು ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡಲು ಸಹಾಯ ಮಾಡುತ್ತದೆ. ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡುತ್ತದೆ. ಇದಲ್ಲದೆ ಇದು ರಕ್ತನಾಳಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಮಧುಮೇಹಕ್ಕೆ ರಾಮಬಾಣ ಈ 3 ಗಿಡಗಳು, ಶುಗರ್‌ ಲೆವಲ್‌ ಹೆಚ್ಚಾಗೋದೇ ಇಲ್ಲ!

(ಗಮನಿಸಿರಿ: ಇಲ್ಲಿ ನೀಡಿರುವ ಮಾಹಿತಿ ಮತ್ತು ಸಲಹೆ ಪಾಲಿಸುವ ಮೊದಲು ನೀವು ಕಡ್ಡಾಯವಾಗಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News