ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.   

Written by - Ranjitha R K | Last Updated : May 13, 2024, 04:08 PM IST
  • ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ
  • ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ
  • ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ತಿರುಗೇಟು
ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ  ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ title=

ಬೆಂಗಳೂರು : ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ.ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮೋದಿ ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದ್ದಾರೆ. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ. 

ಇದನ್ನೂ ಓದಿ : ಲೋಕಸಭೆ ಫಲಿತಾಂಶ ಬಂದ ನಂತರ ಶಿಂದೆಯೇ ಮಾಜಿ ಆಗುತ್ತಾರೆ - ಎಂ ಬಿ ಪಾಟೀಲ್

ನಮಗೆ ಯಾರ ಭಯವೂ ಇಲ್ಲ.ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ”  ಎಂದು ವ್ಯಂಗ್ಯವಾಡಿದ್ದಾರೆ. 

ಪರಿಷತ್ ಚುನಾವಣೆ: ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ : 
“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ.ಪಕ್ಷದ ಆರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮಗಿದೆ.ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅರಿವಿದೆ.ಇವರ ಬದುಕಿನ ಬಗ್ಗೆ ನಮಗೆ ಕಾಳಜಿ ಇರುವ ಕಾರಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಇವರ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡಿದ್ದೇವೆ. 

ಇದನ್ನೂ ಓದಿ : ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೂತನ ಶಿಕ್ಷಣ ನೀತಿ ಸೇರಿದಂತೆ ಇತರ ಸಮಸ್ಯೆಗಳ ನಿವಾರಣೆ ಬಗ್ಗೆ ಹೇಳಿದ್ದೇವೆ.ನಿರುದ್ಯೋಗಿ ಪದವೀಧರರ ಸಮಸ್ಯೆ ನಿವಾರಣೆಗೆ ನಾವು ಕೆಲಸ ಮಾಡಿದ್ದೇವೆ.ಹಿಂದಿನ ಬಿಜೆಪಿ ಸರ್ಕಾರ ಈ ವರ್ಗಕ್ಕೆ ಏನಾದರೂ ಸಹಾಯ ಮಾಡಿದೆಯೇ? ಇಲ್ಲ ಎಂದು ತಿರುಗೇಟು ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News