Ballari News: ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ದಾಳಿ; ಎಫ್‍ಐಆರ್ ದಾಖಲು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ  ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ ಯಾವುದೇ ಕ್ಲಿನಿಕ್ ಹೆಸರಿನ ಬೋರ್ಡ್‍ಗಳಿಲ್ಲದ 04 ನಕಲಿ ಕ್ಲಿನಿಕ್‍ಗಳ ಮೇಲೆ ದಾಳಿ ಮಾಡಿ, ಪರಿಶೀಲಿಸಲಾಗಿದ್ದು, ನಕಲಿ ವೈದ್ಯರಾದ ಕರೀಮ್, ಗೋವಿಂದ್, ಜಾವೀದ್, ಶಬಾನಾ ಅವರ ವಿರುದ್ಧ ಕೌಲ್‍ಬಜಾರ್ ಪೋಲಿಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ ತಿಳಿಸಿದ್ದಾರೆ.

Written by - Manjunath Naragund | Last Updated : Oct 14, 2023, 05:33 AM IST
  • ವೈದ್ಯ ವೃತ್ತಿ ಮಾಡುವವರಿಗೆ ಬಾಡಿಗೆ ಕೊಡುವಾಗ ಅಂಗಡಿಗಳ ಮಾಲೀಕರು ಸಹ ಅವರ ಮಾಹಿತಿ ಪಡೆದು ಬಾಡಿಗೆ ನೀಡಬೇಕು.
  • ಇಲ್ಲದಿದ್ದರೆ, ಮಾಲಿಕರ ಲೋಪವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
  • ವೈದ್ಯ ಪದವಿ ಪಡೆಯದವರು ಗೊತ್ತಿಲ್ಲದ ಔಷಧಿಗಳನ್ನು ಜನತೆಗೆ ನೀಡುವುದರಿಂದ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದು
Ballari News: ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ದಾಳಿ; ಎಫ್‍ಐಆರ್ ದಾಖಲು title=

ಬಳ್ಳಾರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ  ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ ಯಾವುದೇ ಕ್ಲಿನಿಕ್ ಹೆಸರಿನ ಬೋರ್ಡ್‍ಗಳಿಲ್ಲದ 04 ನಕಲಿ ಕ್ಲಿನಿಕ್‍ಗಳ ಮೇಲೆ ದಾಳಿ ಮಾಡಿ, ಪರಿಶೀಲಿಸಲಾಗಿದ್ದು, ನಕಲಿ ವೈದ್ಯರಾದ ಕರೀಮ್, ಗೋವಿಂದ್, ಜಾವೀದ್, ಶಬಾನಾ ಅವರ ವಿರುದ್ಧ ಕೌಲ್‍ಬಜಾರ್ ಪೋಲಿಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ ತಿಳಿಸಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿ ಕಂಪನಿಯೊಂದರ ದುರ್ವಾಸನೆಗೆ ಬೇಸತ್ತ ಜನ

ಈ ಕುರಿತು ಪ್ರಕಟಣೆ ನೀಡಿರುವ ಅವರು ಕರ್ನಾಟಕ ಖಾಸಗಿ ಆಸ್ಪತ್ರೆಗಳ ಅಧಿನಿಯಮ-2007ರ ಅಡಿಯಲ್ಲಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳು ಕಡ್ಡಾಯವಾಗಿ ನೊಂದಣಿ ಮಾಡಿಸಿ, ಅನುಮತಿ ಪಡೆದುಕೊಂಡು ಕಾರ್ಯ ನಿರ್ವಹಣೆ ಮಾಡಬೇಕು ಎಂದು ಹೇಳಿದ್ದಾರೆ.ಅನುಮತಿ ಪಡೆಯದೇ ಕಾರ್ಯ ಆರಂಭಿಸಿದ್ದರೆ ತಕ್ಷಣ ಸ್ಥಗಿತಗೊಳಿಸಿ ಅನುಮತಿ ಪಡೆಯಬೇಕು. ಮುಖ್ಯವಾಗಿ ವೈದ್ಯರು ಅಲ್ಲದವರು ವೈದ್ಯ ವೃತ್ತಿ ಮಾಡುತ್ತಿದ್ದಲ್ಲಿ ಕಾನೂನು ರೀತಿಯಲ್ಲಿ ಎಫ್‍ಐಅರ್ ದಾಖಲಿಸಲಾಗುವುದು.

ಇದನ್ನೂ ಓದಿ : ಅರಣ್ಯ ಅಧಿಕಾರಿಗಳ ದಬ್ಬಾಳಿಕೆ: ಸರ್ಕಾರದ ವಿರುದ್ಧ ಬಿಲ್ಲು-ಬಾಣದ ಹೋರಾಟದ ಎಚ್ಚರಿಕೆ ನೀಡಿದ ಕಾಡಿನ ಮಕ್ಕಳು

ವೈದ್ಯ ವೃತ್ತಿ ಮಾಡುವವರಿಗೆ ಬಾಡಿಗೆ ಕೊಡುವಾಗ ಅಂಗಡಿಗಳ ಮಾಲೀಕರು ಸಹ ಅವರ ಮಾಹಿತಿ ಪಡೆದು ಬಾಡಿಗೆ ನೀಡಬೇಕು. ಇಲ್ಲದಿದ್ದರೆ, ಮಾಲಿಕರ ಲೋಪವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ವೈದ್ಯ ಪದವಿ ಪಡೆಯದವರು ಗೊತ್ತಿಲ್ಲದ ಔಷಧಿಗಳನ್ನು ಜನತೆಗೆ ನೀಡುವುದರಿಂದ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದು, ಅದರಲ್ಲೂ ಜೀವದ ಪ್ರಶ್ನೆ ಇರುವ ಆರೋಗ್ಯ ಸೇವೆಗಳನ್ನು ನೀಡುವಾಗ ಅಧಿಕೃತವಾಗಿ ನೋಂದಣೆ ಮಾಡಿಸಬೇಕು.

ನೊಂದಣಿ ಮಾಡಿಸದೇ ವೈದ್ಯ ವೃತ್ತಿ ಮಾಡುತ್ತಿದ್ದಲ್ಲಿ ಅಂತವರ ವಿರುದ್ದ ಕರ್ನಾಟಕ ಖಾಸಗಿ ಆಸ್ಪತ್ರೆಗಳ ಅಧಿನಿಯಮ-2007 ಅಡಿಯಲ್ಲಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ತಿಳಿಸಿದರು.ಈ ದಾಳಿ ಸಂದರ್ಭದಲ್ಲಿ  ಕೆಪಿಎಂಎ ತಂಡದ ಅರುಣ್ ಕುಮಾರ್ ಮತ್ತು ಗೋಪಾಲ್.ಹೆಚ್.ಕೆ., ಕೌಲ್‍ಬಜಾರ್ ಪೆÇಲೀಸ್ ಠಾಣೆಯ ಸಿಬ್ಬಂದಿಯವರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News