ಈಶ್ವರಪ್ಪ ಅವರಿಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ : ಬಸವರಾಜ ಬೊಮ್ಮಾಯಿ

ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ  ಕೊಡಿ ಎಂದಿದ್ದೆ. ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ.  ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Krishna N K | Last Updated : Mar 15, 2024, 09:58 PM IST
    • ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ
    • ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ
    • ಈಶ್ವರಪ್ಪ ನಡೆ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಈಶ್ವರಪ್ಪ ಅವರಿಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ : ಬಸವರಾಜ ಬೊಮ್ಮಾಯಿ title=
Lok sabha election 2024

ಹಾವೇರಿ: ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ನಾನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ, ಹೈಕಮಾಂಡ್ ನಾಯಕರು ಅನಿವಾರ್ಯತೆ ಇದೆ. ನನಗೆ ಸ್ಪರ್ಧಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಹಾವೇರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಪುತ್ರನಿಗೆ ಟಿಕೇಟ್ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಅಸಮಾಧಾನಗೊಂಡಿರುವ ಕುರಿತು ಮಾತನಾಡಿದ ಅವರು, ಈಶ್ವರಪ್ಪ ಅವರ ಸಭೆ ಬಗ್ಗೆ ಮಾಹಿತಿ ಇಲ್ಲ. ಈಶ್ವರಪ್ಪ ಅವರಿಗೆ ಎಲ್ಲಾ ಗೊತ್ತಿದೆ. ನಾನು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಏನ್ ಹೇಳಿದ್ದೆ ಎಂದು ಎಲ್ಲಾ ಅವರಿಗೆ ಗೊತ್ತಿದೆ ಎಂದರು.

ಇದನ್ನೂ ಓದಿ: KS Eshwarappa : ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ..! ಬಿಎಸ್‌ವೈ ವಿರುದ್ಧ ತೊಡೆ ತಟ್ಟಿದ ಕೆಎಸ್‌ಇ

ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ  ಕೊಡಿ ಎಂದಿದ್ದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಡ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ಅನಿವಾರ್ಯ ಇದೆ ನೀನು ಸ್ಪರ್ದಿಸು ಎಂದು  ಹೇಳಿದರು. ಹೀಗಾಗಿ ನಾನು ಸ್ಪರ್ದೆ ಮಾಡ್ತಿದ್ದೇನೆ ಎಂದು ಹೇಳಿದರು.

ಈಶ್ವರಪ್ಪ ಅವರು ಈ ಪಕ್ಷವನ್ನ ಕಟ್ಟಿ ಬೆಳೆಸಿದವರು ಈಶ್ವರಪ್ಪನವರು. ಶಿಸ್ತಿನ ಸಿಪಾಯಿ ಅವರು ನಾನು ಸಹ ಈಗ ಈಶ್ವರಪ್ಪರ ಜೊತೆಗೆ ಮಾತನಾಡುತ್ತೇನೆ. ಅದು ವರಿಷ್ಠರ ತೀರ್ಮಾನ, ನಾನು ಮೋಸ ಮಾಡಿಲ್ಲ ಎಂದು ಹೇಳಿದರು. ಶಿಗ್ಗಾವಿ ಬೈ ಎಲೆಕ್ಷನ್ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೇಟ್ ಕೊಡಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ನಾನಿನ್ನೂ ಸ್ಪರ್ದೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ನಾನು ಹೇಳಲು ಆಗುವುದಿಲ್ಲ. ಆ ಸಂದರ್ಭದಲ್ಲಿ  ಜನರ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಕೇಳಬೇಕು ಎಂದು ಹೇಳಿದರು.

ಇದನ್ನೂ ಓದಿ:ಸುಮಲತಾ ಅವರು ನನ್ನ ಸ್ವಂತ ಅಕ್ಕ : ಹೆಚ್‌ಡಿ ಕುಮಾರಸ್ವಾಮಿ

ಮಾಜಿ ಶಾಸಕ ನೆಹರು ಓಲೆಕಾರ್  ಅವರ ನಿಲುವು ಗೊತ್ತಿಲ್ಲ ನಾನು ಈಗ ಏನು ಹೇಳಲು ಆಗುವುದಿಲ್ಲ. ಈ ಬಗ್ಗೆ ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡುವೆ. ನನಗೆ ಶಿಗ್ಗಾವಿ ಜೊತೆ ಭಾವನಾತ್ಮಕ ಸಂಬಂಧ ಇದೆ. ಎಲ್ಲಾ ತಾಲೂಕುಗಳ ಅಭಿವೃದ್ಧಿ ಜೊತೆ ಶಿಗ್ಗಾವಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಹೇಳಿದರು.

ಹಾವೇರಿ ಗ್ರಾಮೀಣ ಘಟಕದ ಅದ್ಯಕ್ಷರ ನೇಮಕದಲ್ಲಿ ಆಕ್ಷೇಪದ ಕುರಿತು ನನ್ನ ಬಳಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು ನಿಜ ಅದನ್ನು ನಾನು ಸರಿ ಮಾಡುತ್ತೇನೆ  ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News