ಕೇಂದ್ರದ ಅನುದಾನ ಪಡೆಯಲು ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ : ಬೊಮ್ಮಾಯಿ

ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದ್ದರೆ ಅದನ್ನು ಎಲ್ಲರೂ ಕೂಡಿಯೇ ಕೇಳೋಣ. ಅದರ ಬದಲು ನಮಗೆ 1.87 ಲಕ್ಷ ಕೋಟಿ ಬರುತ್ತಿತ್ತು ಎಂದು ಶೆಕ್ ಮಹಮೊದ್ ಲೆಕ್ಕ ಮಾತನಾಡಿದರೆ ಯಾವುದೇ ಪ್ರಯೋಜನ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Krishna N K | Last Updated : Feb 15, 2024, 06:17 PM IST
  • 15 ನೇ ಹಣಕಾಸು ಆಯೋಗ ಈಗಾಗಲೇ ವರದಿ ಕೊಟ್ಟು ಜಾರಿಯಲ್ಲಿದೆ.
  • ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವುದು ರಾಜಕೀಯವಲ್ಲದೇ ಮತ್ತೇನು.
  • ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದ್ದರೆ ಅದನ್ನು ಎಲ್ಲರೂ ಕೂಡಿಯೇ ಕೇಳೋಣ.
ಕೇಂದ್ರದ ಅನುದಾನ ಪಡೆಯಲು ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ : ಬೊಮ್ಮಾಯಿ title=

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರುವ ಅನುದಾನದ ಕುರಿತು ವಾಸ್ತವದ ಅಂಶದ ಮೇಲೆ ನಾವು ಚರ್ಚೆ ಮಾಡಿದರೆ ಹೆಚ್ಚು ಅನುಕೂಲ ಇದೆ. ರಾಜಕೀಯ ಬೆರೆಸಿ ಮಾತನಾಡಿದರೆ ರಾಜ್ಯಕ್ಕೆ ನಷ್ಟವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ರಾಜ್ಯಪಾಲರ ಭಾಷಣದ ಮೇಲೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯ ಪ್ರವೇಶಿಸಿ ಮಾತನಾಡಿ, 15 ನೇ ಹಣಕಾಸು ಆಯೋಗ ಈಗಾಗಲೇ ವರದಿ ಕೊಟ್ಟು ಜಾರಿಯಲ್ಲಿದೆ. ನಾವು ಕಾಂಪ್ಲೆಕ್ಸ್ ಪರಿಸ್ಥಿತಿಯಲ್ಲಿ ಇದ್ದೇವೆ. ಈಗ ಎಲ್ಲವೂ ಮುಗಿದು ಹೋಗಿದೆ. ಆಯೋಗದ ಅವಧಿ 2026 ರ ವರೆಗೆ ಇದೆ. ಈ ಸಂದರ್ಭದಲ್ಲಿ ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವುದು ರಾಜಕೀಯವಲ್ಲದೇ ಮತ್ತೇನು. ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದ್ದರೆ ಅದನ್ನು ಎಲ್ಲರೂ ಕೂಡಿಯೇ ಕೇಳೋಣ. ಅದರ ಬದಲು ನಮಗೆ 1.87 ಲಕ್ಷ ಕೋಟಿ ಬರುತ್ತಿತ್ತು ಎಂದು ಶೆಕ್ ಮಹಮೊದ್ ಲೆಕ್ಕ ಮಾತನಾಡಿದರೆ ಯಾವುದೇ ಪ್ರಯೋಜನ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು ಶಾಲೆ ಪ್ರಕರಣ: ಶಾಸಕರ ವಿರುದ್ಧ ಎಫ್ಐಆರ್ ಹಾಕಿರುವ ಪೋಲಿಸ್ ಅಧಿಕಾರಿ ಅಮಾನತಿಗೆ ಬೊಮ್ಮಾಯಿ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ಅನುದಾನ ಘೋಷಣೆ ಮಾಡಿತ್ತು. ಅದನ್ನು ಹೇಗೆ ಪಡೆಯಬೇಕು ಎನ್ನುವ ಬಗ್ಗೆ ಚರ್ಚೆ ಮಾಡೋಣ. 16 ನೇ ಹಣಕಾಸು ಆಯೋಗ ಬರುತ್ತಿದೆ. ಅದರಲ್ಲಿ ನಮಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ರಾಜ್ಯಕ್ಕೆ ಅನುದಾನ ತರುವ ನಿಟ್ಟಿನಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ನಮಗೂ ಅಷ್ಟೇ ಜವಾಬ್ದಾರಿ ಇದೆ. ಇಬ್ಬರೂ  ಸೇರಿ ರಾಜ್ಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡೋಣ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News