ಸರ್ಕಾರಕ್ಕೆ ಶತದಿನ: ಆಡಳಿತಕ್ಕೆ ಬಿಸಿ ಮುಟ್ಟಿಸಲು ಡಿಸಿ, ಸಿಇಓಗಳ ಜತೆ ಸಿಎಂ ಸಭೆ

ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು  ಸೇರಿದಂತೆ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಅನುಷ್ಠಾನ ಸಂಬಂಧ ಮತ್ತು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ  ಸಿಎಂ ಚರ್ಚಿಸಲಿದ್ದಾರೆ. ಜೊತೆಗೆ ಜಿಲ್ಲೆಗಳ ಮಳೆ ಸ್ಥಿತಿಗತಿ ಹಾಗೂ ಬೆಳೆ ಹಾನಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ. 

Written by - RACHAPPA SUTTUR | Last Updated : Sep 12, 2023, 12:17 PM IST
  • ರಾಜ್ಯ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
  • ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಇಡೀ ದಿನ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
  • ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಅನುಷ್ಠಾನ ಸಂಬಂಧ ಚರ್ಚೆ ನಡೆಯಲಿದೆ
ಸರ್ಕಾರಕ್ಕೆ ಶತದಿನ: ಆಡಳಿತಕ್ಕೆ ಬಿಸಿ ಮುಟ್ಟಿಸಲು  ಡಿಸಿ, ಸಿಇಓಗಳ ಜತೆ ಸಿಎಂ ಸಭೆ title=

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆಗೆ ಮಂಗಳವಾರ ಪ್ರಗತಿ ಪರಿಶೀಲನೆ ಸಭೆ ಹಮ್ಮಿಕೊಂಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಸಂತೋಷ್ ಲಾಡ್,ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇತರ ಸಚಿವರು ಉಪಸ್ಥಿತರಿದ್ದಾರೆ.

ಇದನ್ನೂ ಓದಿ- ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರೈತರಿಂದ ಧರಣಿ

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಸಭೆ: 
ರಾಜ್ಯ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಇಡೀ ದಿನ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು  ಸೇರಿದಂತೆ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಅನುಷ್ಠಾನ ಸಂಬಂಧ ಮತ್ತು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ  ಸಿಎಂ ಚರ್ಚಿಸಲಿದ್ದಾರೆ. ಜೊತೆಗೆ ಜಿಲ್ಲೆಗಳ ಮಳೆ ಸ್ಥಿತಿಗತಿ ಹಾಗೂ ಬೆಳೆ ಹಾನಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ. 

ಇದನ್ನೂ ಓದಿ- ವಿದ್ಯೆ ಕಲಿತು ಜಾತಿವಾದಿಗಳಾದರೆ ಪ್ರಯೋಜನವಿಲ್ಲ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ ನಡೆಯಲಿರುವ ಪ್ರಮುಖ ಚರ್ಚೆಗಳು: 
-ಪುಸಕ್ತ ಸಾಲಿನ ಮುಂಗಾರು ಅವಧಿಯ ಹವಾಮಾನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಿರುವ ಸಿಎಂ.

-ಬರ ಪರಿಸ್ಥಿತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳು, ಕುಡಿಯುವ ನೀರು ಮತ್ತು ಪರಿಹಾರ ಬಗ್ಗೆ ಮಾಹಿತಿ 

-ಪುಸಕ್ತ ಸಾಲಿನ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಉಂಟಾದ ಬೆಳೆ ಹಾನಿಗೆ ಇನ್‌ಪುಟ್ ಸಬ್ಸಿಡಿ ವಿತರಣೆ ಬಗ್ಗೆ ಚರ್ಚೆ.

-ಪುಸಕ್ತ ಸಾಲಿನ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಉಂಟಾದ ಮನೆ ಹಾನಿಗೆ ಪರಿಹಾರ ವಿತರಣೆ ಬಗ್ಗೆ ಚರ್ಚೆ‌

-ಬರ-ನಿರ್ವಹಣೆ ಕುರಿತಾಗಿ ಸಭೆಯಲ್ಲಿ ಚರ್ಚೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯವಿರುವ ಅನುದಾನದ ವಿವರಣೆ ಪಡೆಯುವ ಸಾಧ್ಯತೆ.

-ಪುಸಕ್ತ ಸಾಲಿನಲ್ಲಿ ಹೊಸ ಪಿಂಚಣಿ ಯೋಜನೆಗಳ ಮಂಜೂರಾತಿ. NPCI ಮ್ಯಾಪಿಂಗ್ ಕುರಿತು ಚರ್ಚೆ.

-ಇತರ ಸಾಮಾಜಿಕ ಭದ್ರತಾ ಪಿಂಚಣಿ- ಯೋಜನೆಗಳು, ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News