ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ! ಸಿದ್ದು ಪುತ್ರನ ವಿರುದ್ಧ ಗ್ರಾಮಸ್ಥರ ಆಕ್ರೋಶ!

Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು​ ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ​

Written by - Puttaraj K Alur | Last Updated : Apr 8, 2024, 03:49 PM IST
  • ಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ
  • ಮತಯಾಚನೆಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ವಿರುದ್ಧ ಗ್ರಾಮಸ್ಥರ ಆಕ್ರೋಶ
  • ಹೋಗಿ.. ಹೋಗಿ.. ನಾವು ವೋಟು ಹಾಕಲ್ಲ, ಚುನಾವಣೆ ಬಹಿಷ್ಕರಿಸುತ್ತೇವೆಂದ ಗ್ರಾಮದ ಜನರು
ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ! ಸಿದ್ದು ಪುತ್ರನ ವಿರುದ್ಧ ಗ್ರಾಮಸ್ಥರ ಆಕ್ರೋಶ! title=
ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಿಂದ ಮತಬೇಟೆ ನಡೆಯುತ್ತಿದೆ. ತಮ್ಮ ವಿರೋಧಿಗಳ ವಿರುದ್ಧ ಟೀಕೆ, ಆಕ್ರೋಶ ವ್ಯಕ್ತಪಡಿಸುತ್ತಾ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಕ್ಷೇತ್ರಗಳು ಹೆಚ್ಚು ಗಮನ ಸೆಳೆಯುತ್ತಿವೆ. ಕೆಲವು ಬದಲಾವಣೆಗಳ ಮೂಲಕ ಅಭ್ಯರ್ಥಿಗಳನ್ನು ಬದಲಾಯಿಸಿಕೊಂಡಿರುವ ಬಿಜೆಪಿ ಮತ್ತು ಕಾಂಗ್ರೆಸ್‌ ಈ ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸಲು ಇನ್ನಿಲ್ಲದ ಸರ್ಕಸ್‌ ನಡೆಸುತ್ತಿವೆ. 

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆಂದು ಸಿಎಂ ಸಿದ್ದರಾಮಯ್ಯ ಪಣತೊಟ್ಟಿದ್ದಾರೆ. ಆದರೆ ಅವರಿಗೆ ಭಾರೀ ಮುಖಭಂಗ ಉಂಟಾಗಿದೆ. ನಮಗೆ ಈ ಚುನಾವಣೆಯೇ ಬೇಡ, ನಾವು ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಅಂತಾ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗತ್ತೆ: ಸಿಎಂ ಸಿದ್ದರಾಮಯ್ಯ

ಹೌದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು​ ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಲು ಹೋದ ಯತೀಂದ್ರಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ʼಹೋಗಿ.. ಹೋಗಿ.. ನಾವು ವೋಟು ಹಾಕಲ್ಲ. ಈ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಅಷ್ಟೇʼ ಅಂತಾ ಕಿಡಿಕಾರಿದ್ದಾರೆ.  

ಹೀಗಾಗಿ ಸಿಎಂ ಸಿದ್ದರಾಮಯ್ಯರ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಕೂಗು ಕೇಳಿಬಂದಿದ್ದು, ಯತೀಂದ್ರರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯರ ಪುತ್ರ ಯತೀಂದ್ರರ ವಿರುದ್ಧ ರೈತರು ಮತ್ತು ಗ್ರಾಮದ ಜನರು ಅಸಮಾಧಾನ ಹೊರಹಾಕಿದ್ದಾರೆ. ಮತಪ್ರಚಾರದ ವೇಳೆ ನಡೆದ ಈ ಘಟನೆಯಿಂದ ಕಾಂಗ್ರೆಸ್‌ ನಾಯಕರಿಗೆ ಒಂದು ರೀತಿ ಹಿನ್ನೆಡೆಯಾದಂತಾಗಿದೆ. ತೀವ್ರ ಮುಖಭಂಗಕ್ಕೆ ಒಳಗಾಗಿ ಬಂದ ದಾರಿಗೆ ಸುಂಕವಿಲ್ಲವೆಂಬಂತೆ ʼಕೈʼ ನಾಯಕರು ಗ್ರಾಮದಿಂದ ವಾಪಸ್‌ ಆಗಿದ್ದಾರೆ. 

ಇದನ್ನೂ ಓದಿ: ಇದು ರಾಷ್ಟ್ರೀಯ ಆಧಾರಿತ ಚುನಾವಣೆ ಜಾತಿ ಆಧಾರಿತವಲ್ಲ :ಸಚಿವ ಪ್ರಹ್ಲಾದ ಜೋಶಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News