"ಪ್ರಜ್ವಲ್ ರೇವಣ್ಣ ಅವರಿಗೆ ಟಿಕೇಟ್ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ?"

CM Siddaramaiah: ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದು ಅವರು ಮನವಿ ಮಾಡಿದರು.

Written by - Manjunath N | Last Updated : May 3, 2024, 09:49 PM IST
  • ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ.
  • ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು.
  • ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ.
 "ಪ್ರಜ್ವಲ್ ರೇವಣ್ಣ ಅವರಿಗೆ ಟಿಕೇಟ್ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ?" title=

ಕುಮುಟಾ: ಪ್ರಜ್ವಲ್ ರೇವಣ್ಣ ಅವರಿಗೆ ಟಿಕೇಟ್ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅವರು ಕುಮಟಾದಲ್ಲಿ ಆಯೋಜಿಸಿದ್ದ "ಪ್ರಜಾಧ್ವನಿ - ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮ"ದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಗೆಲುವಿಗೆ ಕರೆ ನೀಡಿದರು.

ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ-ಭಾರತದಿಂದ ಗಂಟುಮೂಟೆ ಕಟ್ಟುವ ಬೆದರಿಕೆ ಹಾಕಿದ WhatsApp, ಅಷ್ಟಾಗ್ಯೂ ಕೋರ್ಟ್ ನಲ್ಲಿ ನಡೆದಿದ್ದೇನು?

ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು ಹೇಳುವ ಮೋದಿಯವರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏನು ಮಾಡಿದ್ದಾರೆ ಎಂದು ಜಗಜ್ಜಾಹೀರಾಗಿದೆ. ಇದು ತಿಳಿದಿದ್ದರೂ ಕೂಡ ಹೊಂದಾಣಿಕೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟಿದ್ದೀರಲ್ಲಾ? ಇದೇನಾ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ರೀತಿ? ನರೇಂದ್ರ ಮೋದಿ ಅವರೇ, ಅತ್ಯಾಚಾರಿಗಳಿಗೆ ಟಿಕೇಟ್ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಇಡೀ ರಾಜ್ಯದ ಜನ ಕೇಳುತ್ತಿದ್ದಾರೆ. ಎಂದು ಅವರು ಪ್ರಶ್ನಿಸಿದರು.

ಮೋದಿ ಅವರು ಬರೀ ಸುಳ್ಳು ಹೇಳುತ್ತಾರೆ. ಯಾವ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲದ ಮೇಲೆ ಅವರು ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಅರ್ಹರಲ್ಲ ಎಂದು ಅವರು ದೂರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News