40 ಸಾವಿರ ಕೋಟಿಯ ಬಗ್ಗೆ ಉತ್ತರ ನೀಡಿ: ವಿಜಯೇಂದ್ರಗೆ ಕಾಂಗ್ರೆಸ್ ಪ್ರಶ್ನೆ

₹40,000 crore scam: ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

Written by - Puttaraj K Alur | Last Updated : Jan 1, 2024, 08:53 PM IST
  • ಮಧು ಬಂಗಾರಪ್ಪನವರ ವಯಕ್ತಿಕ ವ್ಯವಹಾರವನ್ನು ಹಿಡಿದು ಜಗ್ಗಾಡುತ್ತಿರುವ ಬಿಜೆಪಿ ನಾಯಕರು
  • 40 ಸಾವಿರ ಕೋಟಿ ರೂ.ನ ಬೃಹತ್ ಹಗರಣದ ಬಗ್ಗೆ ಜನತೆಗೆ ಉತ್ತರ ನೀಡುವುದು ಯಾವಾಗ?
  • ವಿಜಯೇಂದ್ರ ಅವರೇ ಮಧು ಬಂಗಾರಪ್ಪನವರ ಕತೆ ಬಿಟ್ಟು 40 ಸಾವಿರ ಕೋಟಿಯ ಬಗ್ಗೆ ಉತ್ತರ ನೀಡಿ
40 ಸಾವಿರ ಕೋಟಿಯ ಬಗ್ಗೆ ಉತ್ತರ ನೀಡಿ: ವಿಜಯೇಂದ್ರಗೆ ಕಾಂಗ್ರೆಸ್ ಪ್ರಶ್ನೆ title=
40 ಸಾವಿರ ಕೋಟಿ ಬಗ್ಗೆ ಉತ್ತರ ನೀಡಿ!

ಬೆಂಗಳೂರು: ಚೆಕ್‍ಬೌನ್ಸ್ ಪ್ರಕರಣ ಸಂಬಂಧ ಸಚಿವ ಮಧು ಬಂಗಾರಪ್ಪ ವಿರುದ್ಧ ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲ’ವೆಂದು ಹೇಳಿದೆ.

ಇದನ್ನೂ ಓದಿ: ‘ಫೋಟೋಶೂಟ್’ ಮಾಡಿಸ್ಬೇಡ ಎಂದ ಪೋಷಕರು: ವಿದ್ಯಾರ್ಥಿನಿ ಆತ್ಮಹತ್ಯೆ..!

ಮಧು ಬಂಗಾರಪ್ಪನವರ ವಯಕ್ತಿಕ ವ್ಯವಹಾರವನ್ನು ಹಿಡಿದು ಜಗ್ಗಾಡುತ್ತಿರುವ ಬಿಜೆಪಿ ನಾಯಕರು ತಮ್ಮ ತಮ್ಮದೇ ಪಕ್ಷದ ನಾಯಕರು ಹೇಳಿದ 40 ಸಾವಿರ ಕೋಟಿ ರೂಪಾಯಿಯ ಬೃಹತ್ ಹಗರಣದ ಬಗ್ಗೆ ಜನತೆಗೆ ಉತ್ತರ ನೀಡುವುದು ಯಾವಾಗ? ಅದು ಜನರ ಬೆವರಿನ ಹಣ, ಸರ್ಕಾರದ ಹಣ. ಬಿ.ವೈ.ವಿಜಯೇಂದ್ರ ಅವರೇ, ಮಧು ಬಂಗಾರಪ್ಪನವರ ಕತೆ ಬಿಟ್ಟು 40 ಸಾವಿರ ಕೋಟಿಯ ಬಗ್ಗೆ ಉತ್ತರ ನೀಡಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ಓದಿ: ವರ್ಷದ ಕೊನೆ ದಿನ ದಾಖಲೆಯ ಮದ್ಯ ಮಾರಾಟ: ಒಂದೇ ದಿನದಲ್ಲಿ 18.85 ಕೋಟಿ ರೂ. ವಹಿವಾಟು

40 ಸಾವಿರ ಕೋಟಿ ರೂ. ಅಕ್ರಮವೆಂದರೆ ನಂಬಲು ಸಾಧ್ಯವೆ ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಎಚ್.ಡಿ.ಕುಮಾರಸ್ವಾಮಿಯವರೇ, ನೀವು ನಂಬಬೇಕು ಎಂದರೆ ಹಗರಣ ಎಷ್ಟು ಸಾವಿರ ಕೋಟಿಯದ್ದಾಗಿರಬೇಕು? ಬಹುಶಃ ತಮಗೆ 40,000 ಕೋಟಿ ಜುಜುಬಿ ಮೊತ್ತ ಇರಬಹುದೇನೋ! ಸ್ವತಃ ಬಿಜೆಪಿಗರೇ 40 ಸಾವಿರ ಕೋಟಿಯ ಹಗರಣದ ಬಗ್ಗೆ ಮಾತನಾಡಲು ತಯಾರಿಲ್ಲ, ನಿರಾಕರಿಸಲೂ ತಯಾರಿಲ್ಲ. ಕುಮಾರಸ್ವಾಮಿಯವರು ಮಾತ್ರ ಬಿಜೆಪಿಯ ರಕ್ಷಣೆಗೆ ಬಿಜೆಪಿಗರಿಗಿಂತ ನಾಲ್ಕು ಹೆಜ್ಜೆ ಮುಂದೆ ನಿಂತಿದ್ದಾರೆ!’ ಎಂದು ಕುಟುಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News