ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ  1178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ  3.00 ರೂ.ಗಳಿಂದ 5. ರೂ.ಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂದರು. 

Written by - Yashaswini V | Last Updated : Feb 20, 2024, 02:52 PM IST
  • ಗಾಳಿ ಇಲ್ಲದೆ ಕೆಟ್ಟು ನಿಂತಿರುವ ಬಸ್ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು
  • ನಮ್ಮ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಕಿಂತಲೂ ಹೆಚ್ಚಿನ ಹಾಲು ಉತ್ಪಾದನೆಯಾಗಿದೆ.
  • 2023- 24 ರಲ್ಲಿ 84.41 ಕೆಜಿ ಹಾಲು ಹೆಚ್ಚು ಉತ್ಪಾದನೆಯಾಗಿದೆ ಎಂದು ಮಾಹಿತಿ ಒದಗಿಸಿದ ಸಿಎಂ
ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ title=

CM Siddaramaiah: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ , ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಗಾಳಿ ಇಲ್ಲದೆ ಕೆಟ್ಟು ನಿಂತಿರುವ ಬಸ್  ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ನೀಡಿದ್ದ  ಹೇಳಿಕೆಗೆ ಇಂದು ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ ತಿರುಗೇಟು ನೀಡಿದರು. 

 ನಮ್ಮ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಕಿಂತಲೂ ಹೆಚ್ಚಿನ ಹಾಲು ಉತ್ಪಾದನೆಯಾಗಿದೆ. 2023- 24 ರಲ್ಲಿ 84.41 ಲಕ್ಷ ಲೀಟರ್ ಹಾಲು ಹೆಚ್ಚು ಉತ್ಪಾದನೆಯಾಗಿದೆ ಎಂದು ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕರು ಪತ್ರದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು.  

ಇದನ್ನೂ ಓದಿ- ಸದನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು-ಸಿ.ಎಂ.ಸಿದ್ದರಾಮಯ್ಯ ತಿರುಗೇಟು

ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ  1178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ  3.00 ರೂ.ಗಳಿಂದ 5. ರೂ.ಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂದರು. 

ಇದನ್ನೂ ಓದಿ- BJP ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ, ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ: ಸಿಎಂ

ಸರ್ಕಾರದ ನೀತಿ, ಮುನ್ನೋಟವನ್ನು ಜನತೆಯ ಮುಂದಿಟ್ಟಿದ್ದಾರೆ
ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ನಿಲುವು, ನೀತಿ, ಮುನ್ನೋಟ ಹಾಗೂ ಕಾರ್ಯಕ್ರಮ ಗಳನ್ನು ಸ್ಪಷ್ಟವಾಗಿ ರಾಜ್ಯದ ಜನತೆ ಮುಂದಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News