20 ದಿನ ಕಳೆದ್ರೂ ಭಾರತಕ್ಕೆ ಬರಲಿಲ್ಲ ಪ್ರಜ್ವಲ್ : ಪದೇಪದೇ ಫ್ಲೈಟ್ ಟಿಕೆಟ್ ಕ್ಯಾನ್ಸಲ್

Prajwal Revanna case : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್, ಪದೇ ಪದೇ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿ ನಂತರ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೀಗಾಗಿ ಎಸ್ಐಟಿ ಅಧಿಕಾರಿಗಳಿಗೆ ಇದು ಸಾಕಷ್ಟು ತಲೆಬಿಸಿ ಮಾಡಿದೆ. ಇಂದು ಸಹ ಪ್ರಜ್ವಲ್ ಬರುತ್ತಾರೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತ ಕುಳಿತಿದ್ದ ಎಸ್ಐಟಿ ಅಧಿಕಾರಿಗಳಿಗೆ ನಿರಾಸೆಯಾಗಿದೆ.

Written by - VISHWANATH HARIHARA | Edited by - Krishna N K | Last Updated : May 15, 2024, 09:28 PM IST
    • ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ.
    • ತಲೆಮರೆಸಿಕೊಂಡಿರುವ ಸಂಸದ ಭಾರತಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ.
    • ಪ್ರಜ್ವಲ್‌ಗಾಗಿ ಕಾಯುತ್ತ ಕುಳಿತಿದ್ದ ಎಸ್ಐಟಿ ಅಧಿಕಾರಿಗಳಿಗೆ ನಿರಾಸೆ.
20 ದಿನ ಕಳೆದ್ರೂ ಭಾರತಕ್ಕೆ ಬರಲಿಲ್ಲ ಪ್ರಜ್ವಲ್ : ಪದೇಪದೇ ಫ್ಲೈಟ್ ಟಿಕೆಟ್ ಕ್ಯಾನ್ಸಲ್ title=

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿಕೊಂಡು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ.. ಪದೇ ಪದೇ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡೋತ್ತಿರೋದು ಎಸ್ಐಟಿ ಅಧಿಕಾರಿಗಳಿಗೆ ತಲೆ ನೋವು ತರಿಸಿದೆ. ಇತ್ತ ರೇವಣ್ಣ ಸಹ ಮುಂದಿನ ಕಾನೂನು ಹೋರಾಟದ ಬಗ್ಗೆ ವಕೀಲರ ಜೊತೆ ಚರ್ಚೆ ನಡೆಸಿದ್ದು, ಈ ಬಗ್ಗೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ.

ಯೆಸ್.. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲಿಕಿಕೊಂಡು ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಭಾರತಕ್ಕೆ ಕರೆತಂದು ವಿಚಾರಣೆ ನಡೆಸುವುದೇ ಎಸ್ಐಟಿಗೆ ದೊಡ್ಡ ತಲೆನೋವಾಗಿದೆ. ಕಳೆದ 20 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್, ಪದೇ ಪದೇ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿ ನಂತರ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೀಗಾಗಿ ಎಸ್ಐಟಿ ಅಧಿಕಾರಿಗಳಿಗೆ ಇದು ಸಾಕಷ್ಟು ತಲೆಬಿಸಿ ಮಾಡಿದೆ. ಇಂದು ಸಹ ಪ್ರಜ್ವಲ್ ಬರುತ್ತಾರೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತ ಕುಳಿತಿದ್ದ ಎಸ್ಐಟಿ ಅಧಿಕಾರಿಗಳಿಗೆ ನಿರಾಸೆಯಾಗಿದೆ. ಐದನೇ ಬಾರಿಗೆ ಪ್ರಜ್ವಲ್ ಭಾರತಕ್ಕೆ ಬರುವ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಇಂದು  ಭಾರತೀಯ ಕಾಲಮಾನ ಮಧಾಹ್ನ 4 ಗಂಟೆಗೆ ಮ್ಯೂರಿಚ್ ನಿಂದ ಹೊರಟು ಮಧ್ಯರಾತ್ರಿ 12.30 ಕ್ಕೆ  ಬೆಂಗಳೂರಿಗೆ ಆಗಮಿಸುವ ವಿಮಾನದಲ್ಲಿ ಪ್ರಜ್ವಲ್ ಬರಬೇಕಿತ್ತು. ಆದರೆ ಇದೇ ವಿಮಾನದಲ್ಲಿ ಬುಕ್ ಮಾಡಿದ್ದ ಟಿಕೆಟ್ ಅನ್ನು ಪ್ರಜ್ವಲ್ ಕ್ಯಾನ್ಸಲ್ ಮಾಡಿದ್ದಾರೆ.

ಇದನ್ನೂ ಓದಿ:ಇದ್ದಕ್ಕಿದ್ದಂತೆ ಕುಸಿದು 3 ರಾಸುಗಳ ಸಾವು, 10ಕ್ಕೂ ಹೆಚ್ಚು ಅಸ್ವಸ್ಥ

ಇನ್ನೂ ಪ್ರಜ್ವಲ್ ರೇವಣ್ಣರನ್ನು ಲಾಕ್ ಮಾಡಲು ಬ್ಲೂ ಕಾರ್ನರ್ ನೋಟಿಸ್ ನ್ನು ಈಗಾಗಲೇ ಹೊರಡಿಸಲಾಗಿದೆ. ಆದರೆ ಪ್ರಜ್ವಲ್ ಇದಕ್ಕೂ ಕ್ಯಾರೆ ಎನ್ನದೇ ತಮ್ಮ ಪಾಡಿಗೆ ಹಾಯಾಗಿ ವಿದೇಶದಲ್ಲಿದ್ದಾರೆ.. ಹೀಗಾಗಿ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ಬಳಿ ರಾಜತಾಂತ್ರಿಕ ಪಾಸ್‌ಪೋರ್ಟ್ ಇರುವ ಕಾರಣ ಇದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ  ಚಾರ್ಜ್ ಶೀಟ್ ಸಲ್ಲಿಸಿ ನಂತರ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್ಐಟಿ ಮುಂದಾಗಿದೆ.. ಆದರೆ ಈ ರೆಡ್ ಕಾರ್ನರ್ ನೋಟಿಸ್ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಇತ್ತ ಪ್ರಜ್ವಲ್ ತಂದೆ ರೇವಣ್ಣಗೆ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಸಿಕ್ಕ ಮೇಲಾದ್ರೂ ಪ್ರಜ್ವಲ್ ಭಾರತಕ್ಕೆ ಬರುತ್ತಾರೆ ಎನ್ನಲಾಗಿತ್ತು. ಆದರೆ ಎಸ್ಐಟಿಯ ಈ ನೀರಿಕ್ಷೆ ಕೂಡ ಹುಸಿಯಾಗುವ ಸಾಧ್ಯತೆ ಇದೆ.. ಇನ್ನೂ ಬೇಲ್ ಮೇಲೆ ಹೊರಬಂದಿರುವ ರೇವಣ್ಣ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರು ಹಾಗೂ ಹಿರಿಯ ವಕೀಲರ ಸಲಹೆ ಪಡೆಯುತ್ತಿದ್ದಾರೆ..

ಇದನ್ನೂ ಓದಿ:ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ: ಜಮೀರ್ ಆಪ್ತ ನವೀನ್‌ಗೌಡ ನಿವಾಸದ ಮೇಲೂ SIT ದಾಳಿ

ಅದೆನೇ ಇರ್ಲಿ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ತಲೆಮರೆಸಿಕೊಂಡಿರುವುದು ಹಾಗೂ ಆತನನ್ನು ಅಧಿಕಾರಿಗಳು ಬಂಧಿಸಲು ಸಾಧ್ಯವಾಗದಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿರುವುದಂತೂ ಸುಳ್ಳಲ್ಲ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News