ಕಾಂಗ್ರೆಸ್‌ ಪಕ್ಷವನ್ನೇ ಭಗವಾನ್‌ ಶ್ರೀರಾಮನ ಭಕ್ತರು ತಿರಸ್ಕರಿಸಿ ಆಗಿದೆ : ಪ್ರಲ್ಹಾದ್ ಜೋಶಿ 

ಅಯೋಧ್ಯೆಯಲ್ಲಿ ರಾಜಕೀಯ ಮಾಡಲು, ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗ್ರೆಸ್ ಪಕ್ಷದ ಚುನಾವಣೆ ಅಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡರು. 

Written by - Prashobh Devanahalli | Edited by - Krishna N K | Last Updated : Jan 11, 2024, 03:35 PM IST
  • ಕಾಂಗ್ರೆಸ್‌ ಅನ್ನು ದೇಶದ ಜನ ಮತ್ತು ರಾಮ ಭಕ್ತರು ಕಾಂಗ್ರೆಸ್ ಅನ್ನು ತಿರಸ್ಕರಿಸಿ ಆಗಿದೆ
  • ಶ್ರೀರಾಮನ ಮೇಲೆ ನಂಬಿಕೆ, ಭಕ್ತಿ, ಶ್ರದ್ಧೆ ಇದ್ದವರು ಯಾವುದೇ ರಾಜಕೀಯ ಮಾಡಲ್ಲ
  • ರಾಮ ಮಂದಿರ ಉದ್ಘಾಟನೆ ಆಮಂತ್ರಣ ತಿರಸ್ಕರಿಸಿದ ಕಾಂಗ್ರೆಸ್‌ ವಿರುದ್ಧ ಜೋಶಿ ಗುಡುಗು
ಕಾಂಗ್ರೆಸ್‌ ಪಕ್ಷವನ್ನೇ ಭಗವಾನ್‌ ಶ್ರೀರಾಮನ ಭಕ್ತರು ತಿರಸ್ಕರಿಸಿ ಆಗಿದೆ : ಪ್ರಲ್ಹಾದ್ ಜೋಶಿ  title=

ಬೆಂಗಳೂರು : ಕಾಂಗ್ರೆಸ್ ನವರು ರಾಮ ಮಂದಿರ ಉದ್ಘಾಟನೆ ಆಮಂತ್ರಣ ತಿರಸ್ಕರಿಸುವ ಮೊದಲೇ ದೇಶದ ಜನ ಮತ್ತು ರಾಮ ಭಕ್ತರು ಕಾಂಗ್ರೆಸ್ ಅನ್ನು ತಿರಸ್ಕರಿಸಿ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಯಾಗಿ ಟ್ವೀಟ್ ಮಾಡಿರುವ ಸಚಿವ ಜೋಶಿ ಅವರು, ಅಯೋಧ್ಯೆಯಲ್ಲಿ ರಾಜಕೀಯ ಮಾಡಲು, ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗ್ರೆಸ್ ಪಕ್ಷದ ಚುನಾವಣೆ ಅಲ್ಲ ಎಂದು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಶ್ರೀರಾಮನ ಮೇಲೆ ನಂಬಿಕೆ, ಭಕ್ತಿ, ಶ್ರದ್ಧೆ ಇದ್ದವರು ಖಂಡಿತವಾಗಿಯೂ ಯಾವುದೇ ರಾಜಕೀಯ ಮಾಡದೆ ಮಂದಿರಕ್ಕೆ ಭೇಟಿ ನೀಡುತ್ತಾರೆ ಎಂದರು.

ಇದನ್ನೂ ಓದಿ:ʼದಿಲೀಪ್‌ಕುಮಾರ್ʼ ರೆಹಮಾನ್‌ ಆಗಿದ್ದು ಹೇಗೆ..? ಮತಾಂತರದ ಹಿಂದಿದೆ ರೋಚಕ ಕಥೆ

ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ನೀವು ನಿಮ್ಮ ಆಡಳಿತ ವೈಫಲ್ಯವನ್ನು ಮರೆಮಾಚಲು ಇಂತಹ ವಿಚಾರ ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದ್ದೀರಿ. ಇಂಥ ರಾಜಕೀಯವನ್ನು ತಾವು ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ಜ್ಯ ಮಾತ್ರವಲ್ಲ ಇಡೀ ದೇಶದ ಜನತೆಗೆ ಅರ್ಥವಾಗಿದೆ ಕರ್ನಾಟಕದಲ್ಲಿ ನಿಮ್ಮ "ಸುಳ್ಳಿನ ಸರಕಾರ ಎತ್ತ ಸಾಗುತ್ತಿದೆ" ಎಂದು ಜೋಶಿ ಕಿಡಿಕಾರಿದರು.

ರಾಮ ಈ ದೇಶದ ಸಂಸ್ಕೃತಿ. ರಾಮನಿಗಾಗಿ ಅಳಿಲು ಸೇವೆಯೂ ಕಾಂಗ್ರೆಸ್ ನವರಿಂದ ಆಗಿಲ್ಲ.‌ ಹೀಗಿರುವಾಗ ರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನವರು ಯಾವ ಮುಖ ಇಟ್ಕೊಂಡು ಬರುತ್ತಾರೆ? ಅದಕ್ಕಾಗಿ ಈ ರೀತಿ ಆಮಂತ್ರಣ ತಿರಸ್ಕರದ ಪ್ರಹಸನ ಮಾಡುತ್ತಿದ್ದಾರೆ. ಇವರಿಗಿಂತ ಮೊದಲು ರಾಮ ಭಕ್ತರು ಇವರನ್ನ ತಿರಸ್ಕರಿಸಿ ಆಗಿದೆ ಎಂದರು.

ಇದನ್ನೂ ಓದಿ:ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿಕೊಹ್ಲಿ ಬ್ರೇಕ್ ತೆಗೆದುಕೊಂಡಿರುವುದು ಇದೇ ಕಾರಣಕ್ಕೆ!  ಬಯಲಾಯ್ತು ರಹಸ್ಯ 

ಧಾರ್ಮಿಕವಾಗಿ ಅಲ್ಲದಿದ್ದರೂ, ರಾಮನನ್ನ ನಮ್ಮ ಸಾಂಸ್ಕೃತಿಕ ದೃಷ್ಠಿಯಿಂದ ನೋಡುವ ಮುಸ್ಲಿಂ, ಕ್ರಿಶ್ಚಿಯನ್ ಅನ್ಯ ಧರ್ಮದವರು ಕಾಂಗ್ರೆಸ್ ಅನ್ನ ತಿರಸ್ಕರಿಸುವ ಕಾಲ ಸನ್ನಿ ಹಿತದಲ್ಲಿದೆ ಎಂದು ಸಚಿವ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News