ವಿಶ್ವ ನಂ.1 ಪ್ಲೇಯರ್’ಗೆ ಗಂಭೀರ ಗಾಯ! ಟಿ20 ಸರಣಿ ಆರಂಭಕ್ಕೂ ಮುನ್ನವೇ ಪಂದ್ಯದಿಂದ ಹೊರಬಿದ್ದ ಸ್ಟಾರ್ ಬೌಲರ್

Rashid Khan Out From BBL 2023: ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್-1 ಆಟಗಾರ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅಫ್ಘಾನಿಸ್ತಾನದ ಸ್ಪಿನ್ನರ್ ಮತ್ತು ವಿಶ್ವ ನಂಬರ್-1 T20 ಬೌಲರ್ ರಶೀದ್ ಖಾನ್ ಮುಂಬರುವ ಬಿಗ್ ಬ್ಯಾಷ್ ಲೀಗ್‌’ನಿಂದ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಬೆನ್ನುನೋವಿನ ಸಮಸ್ಯೆ.

Written by - Bhavishya Shetty | Last Updated : Nov 23, 2023, 04:41 PM IST
    • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ T20 ಸರಣಿ
    • ಪಂದ್ಯ ಆರಂಭಕ್ಕೂ ಮುನ್ನ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ
    • ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್-1 ಆಟಗಾರ ಹೊರಕ್ಕೆ
ವಿಶ್ವ ನಂ.1 ಪ್ಲೇಯರ್’ಗೆ ಗಂಭೀರ ಗಾಯ! ಟಿ20 ಸರಣಿ ಆರಂಭಕ್ಕೂ ಮುನ್ನವೇ ಪಂದ್ಯದಿಂದ ಹೊರಬಿದ್ದ ಸ್ಟಾರ್ ಬೌಲರ್ title=
India Australia T20 Series

Rashid Khan Out From BBL 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ: 26 ಬಾರಿ ವಿಶ್ವಕಪ್ ಗೆದ್ದ ಭಾರತದ ಏಕೈಕ ಆಟಗಾರ ಯಾರೆಂದು ಗೊತ್ತಾ? ತಿಳಿದರೆ ಶಾಕ್ ಆಗೋದು ಗ್ಯಾರಂಟಿ

ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್-1 ಆಟಗಾರ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅಫ್ಘಾನಿಸ್ತಾನದ ಸ್ಪಿನ್ನರ್ ಮತ್ತು ವಿಶ್ವ ನಂಬರ್-1 T20 ಬೌಲರ್ ರಶೀದ್ ಖಾನ್ ಮುಂಬರುವ ಬಿಗ್ ಬ್ಯಾಷ್ ಲೀಗ್‌’ನಿಂದ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಬೆನ್ನುನೋವಿನ ಸಮಸ್ಯೆ.

ಲೆಗ್ ಸ್ಪಿನ್ನರ್ ರಶೀದ್ ಖಾನ್ ಮುಂಬರುವ ಬಿಗ್ ಬ್ಯಾಷ್ ಲೀಗ್ 2023 ರಿಂದ ಹೊರಗುಳಿಯಬೇಕಾಗಿದೆ. ಅಡಿಲೇಡ್ ಸ್ಟ್ರೈಕರ್ಸ್‌ ಪರ ಆಡುತ್ತಿದ್ದ ರಶೀದ್ ಅವರು ಬೆನ್ನಿನ ಗಾಯದಿಂದಾಗಿ ಇಡೀ ಸೀಸನ್’ನಿಂದ ಹೊರಗುಳಿದಿದ್ದಾರೆ. ಈ ಮಾಹಿತಿಯನ್ನು ಸ್ವತಃ ಅಡಿಲೇಡ್ ಸ್ಟ್ರೈಕರ್ಸ್ ಪೋಸ್ಟ್ ಮಾಡಿದ್ದಾರೆ.

ತಂಡದ ಜನರಲ್ ಮ್ಯಾನೇಜರ್ ಟಿಮ್ ನೀಲ್ಸನ್ ಹೇಳಿಕೆ ನೀಡಿದ್ದು, “ರಶೀದ್ ಅವರು ಸ್ಟ್ರೈಕರ್‌’ಗಳ ಅಚ್ಚುಮೆಚ್ಚಿನ ಸದಸ್ಯ ಮತ್ತು ಏಳು ವರ್ಷಗಳಿಂದ ನಮ್ಮೊಂದಿಗಿರುವ ಅಭಿಮಾನಿಗಳ ನೆಚ್ಚಿನವರಾಗಿದ್ದಾರೆ. ಆದರೆ ಈ ಋತುವಿನಲ್ಲಿ ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಬಿಗ್’ಬಾಸ್ ಆನೆ ವಿನಯ್ ಗೌಡ ಪ್ರತಿ ಎಪಿಸೋಡ್’ಗೆ ಪಡೆಯುವ ಸಂಭಾವನೆ ಎಷ್ಟು ಲಕ್ಷ ಗೊತ್ತಾ?

“ರಶೀದ್ ಅಡಿಲೇಡ್ ಸ್ಟ್ರೈಕರ್ಸ್ ತಂಡವನ್ನು ತುಂಬಾ ಇಷ್ಟಪಡುತ್ತಾರೆ. ಅವರಿಗೆ ಕ್ರಿಕೆಟ್ ಆಡಲು ಇನ್ನೂ ಬಹಳ ಸಮಯ ಇರುವುದರಿಂದ ನಾವು ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ನಮ್ಮ ಕೋಚಿಂಗ್ ಸಿಬ್ಬಂದಿ ಮುಂಬರುವ ಋತುವಿನಲ್ಲಿ ರಶೀದ್ ಅವರ ಬದಲಿ ಆಯ್ಕೆ ಯಾರೆಂದು ಸೂಕ್ತ ಸಮಯದಲ್ಲಿ ಪ್ರಕಟಿಸುತ್ತಾರೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News