ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಲಿದ್ದಾರೆ. ಅಲ್ಲದೆ, ನಾಲ್ಕೈದು ಹಾಲಿಗಳಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಆ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಿದೆ ಎಂದು ಹೇಳಲಾಗುತ್ತಿದೆ.
ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆ ಮುಂದುವರಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ದಶಪಥ ಹೆದ್ದಾರಿ ವೀಕ್ಷಣೆ ರದ್ದು ಮಾಡಿದ್ದಾರೆ. ಸಿದ್ದರಾಮಯ್ಯ ಇಂದು ಬೆಂಗಳೂರು-ಮೈಸೂರು ಹೆದ್ದಾರಿ ವೀಕ್ಷಣೆ ನಿಗದಿಯಾಗಿತ್ತು.
ನಿನ್ನೆ ರಾಜ್ಯಕ್ಕೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಎಂಟ್ರಿ. ಅಧ್ಯಕ್ಷ ಪ್ರಕಾಶ್ ಮೋಹನ್ ಕಮಿಟಿ ಆಗಮನ. 3 ದಿನಗಳ ಕಾಲ ರಾಜ್ಯದಲ್ಲಿ ಸ್ಕ್ರೀನಿಂಗ್ ಕಮಿಟಿ ಠಿಕಾಣಿ. ಇಂದಿನಿಂದ ರಾಜ್ಯ ಕಾಂಗ್ರೆಸ್ನಲ್ಲಿ ಸರಣಿ ಸಭೆಗಳು ಶುರು. ಟಿಕೆಟ್ ಆಯ್ಕೆ ವಿಚಾರದಲ್ಲಿ ಎಐಸಿಸಿ ಎಚ್ಚರಿಕೆಯ ನಡೆ.
ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರನ್ನಾಗಿ ಎಐಸಿಸಿ ಕಾರ್ಯದರ್ಶಿಗಳಾದ ಮೋಹನ್ ಪ್ರಕಾಶ್ ಅವರನ್ನು ಆಯ್ಕೆ ಮಾಡಿದೆ. ಅಲ್ಲದೆ, ನೀರಜ್ ದಂಗಿ, ಮೊಹಮ್ಮದ್ ಜಾವೇದ್, ಸಪ್ತಗಿರಿ ಉಲಕಾ ಅವರನ್ನು ಕಮಿಟಿಯ ಸದಸ್ಯರನ್ನಾಗಿ ನೇಮಿಸಿದೆ.
ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ. ರಾಜ್ಯಕ್ಕೆ ಮೊದಲ ಬಾರಿ ಪ್ರಿಯಾಂಕಾ ಗಾಂಧಿ ಆಗಮನ. ಮಹಿಳಾ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಬಿಗ್ ಪ್ಲಾನ್. ‘ನಾ ನಾಯಕಿ’ ಸಮಾವೇಶದಲ್ಲಿ ಹೊಸ ಭರವಸೆ ಘೋಷಣೆ.
ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ 200ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದ್ದು, ಜಿಲ್ಲೆಯಿಂದ 15 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆಎನ್ ಕೇಶವರೆಡ್ಡಿ ತಿಳಿಸಿದ್ದಾರೆ.
137 ವರ್ಷಗಳ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿಗೆ ಅಧ್ಯಕ್ಷ ಪದವಿಗಾಗಿ ನಡೆದ ಆರನೇ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಸ್.ನಿಜಲಿಂಗಪ್ಪನವರ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ ಎರಡನೇ ಕನ್ನಡಿಗ ಹಾಗೂ ಜಗಜೀವನ್ ರಾಮ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದೇ ವೇಳೆ ಖರ್ಗೆ ಅವರು ಯುವ ರಾಜಕಾರಣಿಯಾಗಿದ್ದಾಗಿನ ಕೆಲವು ಅಪರೂಪದ ಕಪ್ಪು ಬಿಳುಪಿನ ಫೋಟೋಗಳನ್ನು ಅವರ ಪುತ್ರ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Photo Courtsey: Priyank Kharge (Twitter)
ಇಂದು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಬೆಳ್ಳಿಗೆ 10.30ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.
Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರು ದಕ್ಷಿಣ ಭಾರತದಿಂದ (ಕರ್ನಾಟಕ) ಬಂದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರ ಈ ಆಯ್ಕೆಯಿಂದ 51 ವರ್ಷಗಳ ನಂತರ ಕಾಂಗ್ರೆಸ್ಗೆ ದಲಿತ ಅಧ್ಯಕ್ಷರೊಬ್ಬರು ಸಿಕ್ಕಂತಾಗಿದೆ.
Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಸಂಸದ ಶಶಿ ತರೂರ್ ಅವರನ್ನ ಅಧ್ಯಕ್ಷ ಚುನಾವಣೆಯಲ್ಲಿ ಮಣಿಸಿದ್ದು, ಕಾಂಗ್ರೆಸ್ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಬಹುತೇಕ ವಿಜಯ ಸಾಧಿಸುವ ಸಾಧ್ಯತೆ ಇದೆ. AICC ಅಧ್ಯಕ್ಷ ಆದ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿಯ ಸವಾಲು ಚಕ್ರವ್ಯೂಹ ಆಗುವುದು ನಿಶ್ಚಿತವಾಗಿದೆ.
ಬಕ್ರೀದ್ನಲ್ಲಿ ಬದುಕಿದರೆ ಮೊಹರಂನಲ್ಲಿ ಕುಣಿಯುತ್ತೇವೆ ಎಂಬ ಮಾತು ನಮ್ಮಲ್ಲಿದೆ. ಮೊದಲು ಅಧ್ಯಕ್ಷರ ಆಯ್ಕೆ ಆಗಬೇಕು ನೋಡಿ’. ಮೊದಲು ಈ ಚುನಾವಣೆ ಮುಗಿಯಲಿ...ನಾನೇ ಸ್ಪೀಕರ್ ಆಗಲಿ, ಆಮೇಲೆ ನೋಡೋಣ ಎಂದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ ಒಂದು ದಿನದ ನಂತರ, ಇಂದು ದಿಗ್ವಿಜಯ ಸಿಂಗ್ ಅವರು ತಮ್ಮ ಸ್ಥಾನವನ್ನು ತ್ಯಜಿಸುವುದಾಗಿ ಘೋಷಿಸಿದರು. ಗಾಂಧಿ ಬೆಂಬಲಿತ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ಆ ನಿರ್ಧಾರ ಕೈಗೊಳ್ಳಲಾಗಿದೆ.
Rajasthan Political Crisis: ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಿದ ಬಳಿಕ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಗೆಹ್ಲೋಟ್ ನಿರಾಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ನಾಮನಿರ್ದೇಶನ ಪ್ರಕ್ರಿಯೆ ಕೊನೆಗೊಳ್ಳಲು ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ದಿಗ್ಗಜರೊಂದಿಗೆ ಸಮಾಲೋಚನೆ ನಡೆಸುತ್ತಿರುವಾಗಲೂ ಪ್ರಮುಖ ವಿರೋಧ ಪಕ್ಷವು ಅಭ್ಯರ್ಥಿಯನ್ನು ಹುಡುಕಲು ಹರಸಾಹಸ ಪಡುತ್ತಿರುವಾಗಲೇ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕೂಡ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.