ಚಾಮರಾಜನಗರ ಜಿಲ್ಲೆಯಲ್ಲಿ ಮುಂದುವರೆದ ದಟ್ಟನೆಯ ಮಂಜು.. ಬೆಳಗ್ಗೆ ಏಳು ಗಂಟೆಯಾದರೂ ನಗರದೆಲ್ಲೆಡೆ ದಟ್ಟನೆಯ ಮಂಜು.. ವಾಯು ವಿಹಾರಕ್ಕೆ ತೆರಳಿದವರಿಗೆ ಮುಸುಕಿನ ಮಂಜು... ವಾಹನ ಸವಾರರು ಲೈಟ್ ಹಾಕಿಕೊಂಡು ಓಡಾಡುವಷ್ಟು ಮಂಜಿನ ದಟ್ಟನೆ
ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಮೃತ ಜಯಪ್ರಕಾಶ್ ಇತ್ತೀಚೆಗಷ್ಟೇ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೋಡ್ ರಾಬರಿ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಕಾರು ಅಡ್ಡಗಟ್ಟಿ 45 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣದಲ್ಲಿ ಜಯಪ್ರಕಾಶ್ನನ್ನು ಬಂಧಿಸಲಾಗಿತ್ತು.
ತಮಿಳುನಾಡಿನಲ್ಲಿ ಮೂರು ಬೆಳೆಗೆ ಕಾವೇರಿ ನೀರನ್ನು ಹರಿಸಲಾಗುತ್ತಿದೆ. ಇದೇ ರೀತಿ ನೀರು ಹರಿಸಿದರೇ ನಮಗೇ ಟಿಶ್ಯೂ ಪೇಪರ್ ಅನ್ನೇ ಬಳಸಬೇಕಾಗುತ್ತದೆ, ಮುಖ ತೊಳೆಯಲೂ ನೀರಿರಲ್ಲ ಎಂದು ಟಿಶ್ಯೂ ಪೇಪರ್ ಹಿಡಿದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ. ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಶುಕ್ರವಾರ ಮಲಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕರ್ತವ್ಯಕ್ಕೆ ಹಾಜರಾಗದೆ ಇದ್ದರಿಂದ ಆಸ್ಪತ್ರೆ ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗ ಸಿಂದುಜಾ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣವನ್ನು ಪಡೆಯುತ್ತಿದ್ದ ಜಾಲವನ್ನು ಬೆಳಕಿಗೆ ತಂದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ಹಾಗೂ ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಂಡೀಪುರ ಅಭಯಾರಣ್ಯದ ಸಾವಿರಾರು ವಿವಿಧ ಕಾಡುಪ್ರಾಣಿಗಳು ಆಶ್ರಯ ನೀಡಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪುಷ್ಬ ಚಲನಚಿತ್ರದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ
ತರಕಾರಿ ವಾಹನದಲ್ಲಿ ರಕ್ತಚಂದನ ತುಂಡುಗಳನ್ನ ಸಾಗಿಸುತ್ತಿದ್ದ ಖದೀಮರು
ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳ ತಂಡದಿಂದ ದಾಳಿ
ಐದು ಮಂದಿ ಆರೋಪಿಗಳನ್ನ ಬಂಧಿಸಿದ ಅರಣ್ಯಾಧಿಕಾರಿಗಳು
ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ದಾಳಿ ನಡೆಸಿ ಬಂಧನ
ಬಂಧಿತರಿಂದ ಸುಮಾರು 50 ಕೆಜಿ ತೂಕದ ರಕ್ತಚಂದನ ವಶ
ADITYA L1 LAUNCH: ಬಾಹ್ಯಾಕಾಶದಲ್ಲಿ ಸೂರ್ಯನ ಅಧ್ಯಯನ ನಡೆಸಲು ಭಾರತ ಕೈಗೊಂಡಿರುವ ಮೊಟ್ಟ ಮೊದಲ ಯೋಜನೆಯ ಭಾಗವಾಗಿ ಇಂದು ಬೆಳಗ್ಗೆ 11.50ಕ್ಕೆ ಇಸ್ರೋ ಆಂಧ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ PSLV-C57 ರಾಕೆಟ್ನಲ್ಲಿ Aditya L1 ಉಪಗ್ರಹವನ್ನು ಉಡಾವಣೆ ಮಾಡಲಿದೆ.
ಜಲಾಶಯಗಳು ಖಾಲಿ.. ಖಾಲಿ.. ನೀರಿನ ಮಟ್ಟ ಇಳಿಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೆ ನೆಲ ಕಚ್ಚಿದ ಬೆಳೆ ಬೀದರ್ನಿಂದ ಚಾಮರಾಜನಗರದವರೆಗೂ ಬರದಛಾಯೆ.! ಬರಿದಾಗಿವೆ ಜಲಾಶಯಗಳು.. ಕೇಳೋರಿಲ್ಲ ಜನರ ಗೋಳು ಕುಡಿಯಲು ನೀರಿಲ್ಲದೆ.. ಮೇವಿಲ್ಲದೆ ಜಾನುವಾರಗಳಿಗೆ ಸಂಕಷ್ಟ
ಶಕ್ತಿ ಯೋಜನೆಗೆ ಜಿಲ್ಲೆಯಲ್ಲಿ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶಕ್ತಿ ಯೋಜನೆ ಜಾರಿಯಾದ ದಿನದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 1,63,44,799 ಮಂದಿ ಪ್ರಯಾಣ ಮಾಡಿದ್ದು ಇವರಲ್ಲಿ 1,05,76,930 ಮಂದಿ ಮಹಿಳೆಯರೇ ಪ್ರಯಾಣ ಮಾಡಿದ್ದಾರೆ.
ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿಂದು ಸಭೆ ನಡೆಸಿದ ಸಚಿವರು, ಮಾನವ – ವನ್ಯಮೃಗಗಳ ಸಂಘರ್ಷ ಹೆಚ್ಚಳದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಅಮೂಲ್ಯವಾದ ಮಾನವ ಪ್ರಾಣ ಹಾನಿಯೂ ಆಗಬಾರದು, ಅದೇ ವೇಳೆ ವನ್ಯ ಮೃಗಗಳ ಕೂಡ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶದಿಂದ ಹಾಗೂ ಬೇಲಿಯಲ್ಲಿ ಹಾಕುವ ಉರುಳಿಗೆ ಸಿಲುಕಿ ಸಾವಿಗೀಡಾಗಬಾರದು.
ವಿ.ಎಸ್ ದೊಡ್ಡಿ ಗ್ರಾಮದ ಭಾಗ್ಯ ಎಂಬುವರು ಕಳೆದ ನಾಲ್ಕೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ಎಂದು ತಿಳಿದು ಮನೆಯನ್ನು ತೊರೆದು ಬೆಂಗಳೂರಿನಲ್ಲಿ ತಳ್ಳುವ ಗಾಡಿಯಲ್ಲಿ ಮಜ್ಜಿಗೆ, ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.