Cauvery Water Sharing Dispute: ಸಿಎಂ ಸಿದ್ದರಾಮಯ್ಯರವರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ರವರು, ಇನ್ನು 15 ದಿನದೊಳಗೆ ತಮಿಳುನಾಡು ಸರ್ಕಾರದ ವತಿಯಿಂದ ಮೇಕೆದಾಟು ಯೋಜನೆಗೆ ನಿರಪೇಕ್ಷಣಾ ಅರ್ಜಿಯನ್ನು ಸಲ್ಲಿಸಲು ಸ್ಟಾಲಿನ್ ಅವರ ಮನವೊಲಿಸಲಿ ಎಂದು ಬಿಜೆಪಿ ಸವಾಲು ಹಾಕಿದೆ.
Cauvery water dispute: ಪ್ರಾಧಿಕಾರರ ಮುಂದೆ ವಾದ ಮಂಡಿಸಿದ ಕರ್ನಾಟಕದ ಅಧಿಕಾರಿಗಳು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಅಸಾಧ್ಯ. ಈಗಾಗಲೇ ಕರ್ನಾಟಕದಲ್ಲಿ ಸರಣಿ ಬಂದ್ ನಡೆಯುತ್ತಿದೆ. ಈ ಪರಿಸ್ಥಿತಿಯಲ್ಲಿ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿದ್ದಾರೆ
Cauvery Water Sharing Dispute: ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.
Karnataka Bandh: ನಾಳೆ ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಶುಕ್ರವಚಾರ ಬೆಳಗ್ಗೆ 10 ಗಂಟೆಗೆ ಗುರುರಾಜ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಹೋರಾಟ ಮಾಡಲಾಗುತ್ತದೆ ಎಂದು ಎನ್.ಎಂ.ಸುರೇಶ್ ಹೇಳಿದ್ದಾರೆ.
Cauvery Water Sharing Dispute: ಬಲವಂತವಾಗಿ ಬಂದ್ ಮಾಡುವವರ ಮೇಲೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.
Cauvery Water Sharing Dispute: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ನಾಡಿಗೆ ಕಳ್ಳತನದಿಂದ ಬೇಕಾಬಿಟ್ಟಿಯಾಗಿ ನೀರು ಬಿಟ್ಟು, ರಾಜ್ಯದ ರೈತರಿಗೆ ದ್ರೋಹ ಬಗೆದದ್ದು ಮಾತ್ರವಲ್ಲದೆ, ರೈತರಿಗೆ ಭತ್ತ ಬೆಳೆಯಬೇಡಿ ಎಂದು ಕೃಷಿ ಸಚಿವರು ಬೆದರಿಕೆ ಹಾಕಿ ಕರ್ನಾಟಕವನ್ನು ದುಸ್ಥಿತಿಗೆ ತಳ್ಳಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
Cauvery Water Sharing Dispute: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರಿನ ವಿವಾದ ತಾರಕಕ್ಕೇರಿರುವ ನಡುವೆ ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನೀಡಿದ್ದ ಹೇಳಿಕೆ ಸಖತ್ ಸೌಂಡ್ ಮಾಡುತ್ತಿದೆ.
Cauvery Water Sharing Dispute: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ನಡುವಿನ ಸಂಬಂಧವೂ ಒಂದೇ ತಾಯಿಯ ಮಕ್ಕಳು ನಾವು ಎನ್ನುವಷ್ಟರ ಮಟ್ಟಿಗೆ ಅನ್ಯೋನ್ಯವಾಗಿದೆ ಎಂದು ಬಿಜೆಪಿ ಟೀಕಿಸಿದೆ.
Cauvery Water Sharing Dispute: ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಎಂದು ಡಿಕೆಶಿ ಆಗ್ರಹಿಸಿದರು.
Cauvery Water Sharing Dispute: CWRC ಮತ್ತೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಹೇಳಿದ್ದು, ಅವರದು ಏನೇ ಆದೇಶ ಬಂದರೂ ರಾಜ್ಯ ಸರ್ಕಾರ ಒಪ್ಪಬಾರದು. ತಕ್ಷಣ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಬೇಕೆಂದು ಬೊಮ್ಮಾಯಿ ಹೇಳಿದ್ದಾರೆ.
Cauvery Water Sharing Dispute: ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ 66 ಟಿಎಂಸಿ ನೀರು ಅವರಿಗೆ ಸೇರುತ್ತದೆ. ಕೆಆರ್ಎಸ್, ಕಬಿನಿ ಮತ್ತು ಹೇಮಾವತಿ ಅಣೆಕಟ್ಟೆಗಳ ಮೇಲಿನ ಒತ್ತಡ ತಗ್ಗುತ್ತದೆ. ಬೆಂಗಳೂರಿನ ಕುಡಿಯುವ ನೀರಿಗೂ ಸಾಕಷ್ಟು ಅನುಕೂಲವಾಗುತ್ತದೆ ಅಂತಾ ಡಿಕೆಶಿ ಹೇಳಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಡಿಎಂಕೆ ಯೋಗಕ್ಷೇಮಕ್ಕೆ ಕರ್ನಾಟಕದ ಹಿತವನ್ನು ಸಂಪೂರ್ಣವಾಗಿ ಬಲಿ ಕೊಟ್ಟಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ಬಂಡೆ ಎಳೆದಿದೆ ಎಂದು ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.