ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ನೀವು ನಮಗೆ ಅಧಿಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಜೈ ಶ್ರೀರಾಮ್ ಎಂದರೆ ಜೈಲಿಗೆ ಹಾಕುತ್ತಾರೆ, ಜೈ ಟಿಪ್ಪು ಎಂದರೆ ಬಿಡುಗಡೆಗೊಳಿಸುತ್ತಾರೆ. ರಾಮಭಕ್ತರನ್ನು ವಿರೋಧಿಸಿದರೆ ಹಾಗೂ ಟಿಪ್ಪು ಸಂಸ್ಕೃತಿಯನ್ನು ವಿಜೃಂಭಿಸಿದರೆ ಕಾಂಗ್ರೆಸ್ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರದಲ್ಲಿ ಬಿಜೆಪಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯನವರ ಯೋಜನೆಗಳೆಲ್ಲಾ ಜಾರಿಯಾಗುವ ಬದಲು ಕೇವಲ ಘೋಷಣೆ ಮಾಡಲಷ್ಟೇ ಸೀಮಿತ. ಸಹಕಾರಿ ಸಾಲಗಳ ಬಡ್ಡಿ ಮನ್ನಾ ಎಂದು ಹೇಳಿಕೆ ನೀಡಿ ಈಗ ರೈತರಿಗೆ ಬ್ಯಾಂಕ್ ಮೂಲಕ ನೋಟಿಸ್ ಕೊಡಲಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.