ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅಂತ ಒಕ್ಕಲಿಗರಲ್ಲೇ ಫೈಟ್ ಆರಂಭಗೊಂಡಿದೆ. ಕಾಂಗ್ರೆಸ್ನಲ್ಲಿ ಡಿ.ಕೆ.ಶಿವಕುಮಾರ್, ಜೆಡಿಎಸ್ನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನಡುವೆ ಫೈಟ್ ಆರಂಭಗೊಂಡಿದ್ದು, ಚಿತ್ರದುರ್ಗದ ಹಿರಿಯೂರು ನಗರದಲ್ಲಿ ನಡೆದ ಒಕ್ಕಲಿಗರ ಸಮಾವೇಶದಲ್ಲಿ ನಂಜಾವಧೂತ ಶ್ರೀಗಳು ಡಿಕೆ - ಹೆಚ್ಡಿಕೆ ಯಾರೇ ಆದರೂ ಆಗಲಿ. ಆದರೆ ನಮ್ಮವರೇ ಆಗಲೇಬೇಕು ಎಂದು ಫತ್ವಾ ಹೊರಡಿಸಿದರು.
ಇದುವರೆಗೂ ನನಗೆ ಎಐಸಿಸಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ಜಮೀರ್ ಅಹಮದ್ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಅಧ್ಯಕ್ಷರು ದೊಡ್ಡವರು ಇದ್ದಾರೆ ಎಂದು ಡಿಕೆಶಿಗೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಬಂದಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಡಿಕೆಶಿ ನಿನ್ನೆ ರಾತ್ರಿ 9 ಗಂಟೆ ಡಿಕೆಶಿ ದೆಹಲಿಗೆ ತೆರಳಿದ್ದು, ಇಂದು ಹೈಕಮಾಂಡ್ ಭೇಟಿಯಾಗಲಿದ್ದಾರೆ.
ಪರಿಷತ್ ಚುನಾವಣೆ ಬಗ್ಗೆ ಡಿ.ಕೆ.ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.. ಮುಂದಿನ ಭವಿಷ್ಯ ಕಾಂಗ್ರೆಸ್ ಅನ್ನೋದನ್ನು ಫಲಿತಾಂಶ ಹೇಳಿದೆ. ಎಲ್ಲಾ ಶಿಕ್ಷಕ, ಪದವೀಧರರಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ರಾಹುಲ್ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿ ಬೆದರಿಸ್ತಿದ್ದಾರೆ ಎಂದು ಕೆಪಿಸಿಸಿ ಅಧಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಆಸ್ತಿ. ಅದನ್ನು ಕೇಳೋದಕ್ಕೆ ನೀವು ಯಾರು ಎಂದು ಬಿಜೆಪಿಗೆ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ..
ಸಚಿವ ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ವಲಯದಲ್ಲೇ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಾಜಿ ಸಂಸದೆ ರಮ್ಯಾ ಬಹಿರಂಗವಾಗೇ ಅಸಮಾಧಾನ ಹೊರ ಹಾಕಿದ್ದಾರೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ವೀರಪ್ಪ ಮೋಯ್ಲಿ, ಈ ಸರ್ಕಾರದಲ್ಲಿ ಒಂದೊಂದೇ ಭ್ರಷ್ಟಾಚಾರ ಪ್ರಕರಣ ಬರುತ್ತಿವೆ. ಇದು ಗೃಹ ಸಚಿವರ ಜವಾಬ್ದಾರಿ ಅಂತ ಹೇಳಿದ್ರು. ಇನ್ನು ಇದೇ ವಿಚಾರದ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಏನ್ ಹೇಳಿದ್ರು ನೋಡೋಣ ಬನ್ನಿ....
'ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರೂ . ಹಾಗೂ ಮಂತ್ರಿ ಆಗಬೇಕಾದರೆ 100 ಕೋಟಿ ರೂ . ನೀಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ, ಉನ್ನತ ಮಟ್ಟದ ತನಿಖೆ ಆಗಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಪಕ್ಷ ಮೊದಲಿನಿಂದಲೂ ಅಲ್ಪಸಂಖ್ಯಾತ ಪರವಾಗಿಯೇ ಇದೆ. ಸಂವಿಧಾನಕ್ಕೆ, ಅಲ್ಪಸಂಖ್ಯಾತರಿಗೆ ಗೌರವ ನೀಡುತ್ತಾ ಬಂದಿದ್ದೇವೆ. ಜಾತ್ಯತೀತದ ಬಗ್ಗೆ ಸಂವಿಧಾನದ ಆಶಯಗಳನ್ನು ಪಾಲಿಸುವುದು ಪಕ್ಷದ ಕರ್ತವ್ಯ.
ಕರೋನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಈಗ ಎಫ್ ಐ ಆರ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (A1) ಮೊದಲ ಆರೋಪಿಯನ್ನಾಗಿ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ (A2), ಸಂಸದ ಡಿ ಕೆ ಸುರೇಶ್ (A3) ಸೇರಿದಂತೆ 31 ನಾಯಕರ ವಿರುದ್ಧ ಎಫ್ಐಆರ್ (FIR)ದಾಖಲಿಸಲಾಗಿದೆ.
Mekedatu Padayatre: ಏನ್ ಟೆಸ್ಟ್ ಮಾಡದು? ಏನನ್ನ ಟೆಸ್ಟ್ ಮಾಡದು? ಬೇಕಾದರೆ ಅವನು ಟೆಸ್ಟ್ ಮಾಡಿಸಿಕೊಳ್ಳಲಿ ಎಂದು ಏಕವಚನದಲ್ಲಿ ಮಾತನಾಡಿದರು. ನೀವು ನನ್ನ ಆರೋಗ್ಯ ಕಾಳಜಿಯ ಮೆರೆಗೆ ಬಂದ್ದಿದೀರ, ಆದರೆ ನಾನು ಯಾವುದೇ ಪರೀಕ್ಷೆ ಕೊಡಲ್ಲ.
ಜನರು ಈಗಾಗಲೇ ತಮಗೆ ಹೇಗೆ ಬೇಕೋ ಹಾಗೆ ಮಾತನಾಡಿಕೊಂಡಿದ್ದಾರೆ. ಈ ಬಗ್ಗೆ ನಾನು ಬಿಜೆಪಿ ಅಥವಾ ಮಾಧ್ಯಮವನ್ನು ದೂಷಿಸುವುದಿಲ್ಲ. ಇತರರಿಗೆ ನಮ್ಮನ್ನು ಬಳಸಿಕೊಳ್ಳುವ ಅವಕಾಶವನ್ನು ನಾವೇ ನೀಡಿದ್ದೇವೆ" ಎಂದು ಶಿವಕುಮಾರ್ ಹೇಳಿದ್ದಾರೆ.
ಉಡುಪಿ ನಗರದಲ್ಲಿ ನಡೆದ ಕಾಂಗ್ರೆಸ್ ಜನಧ್ವನಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ, ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.