Voter ID: ಮತದಾನ ಪ್ರತಿಯೊಬ್ಬ ನಾಗರೀಕರ ಹಕ್ಕು. ಮತದಾನಕ್ಕಾಗಿ ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೀಗ ವೋಟರ್ ಐಡಿ ಪಡೆಯಲು ನೀವು ಸುತ್ತುವ ಅಗತ್ಯವಿಲ್ಲ, ಇದಕ್ಕಾಗಿ ಭಾರತ ಸರ್ಕಾರವು ರಾಷ್ಟ್ರೀಯ ಮತದಾರರ ಪೋರ್ಟಲ್ ಅನ್ನು ಪ್ರಾರಂಭಿಸಿದೆ.
Voter ID: ನಿನ್ನೆಯಷ್ಟೇ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದೆ. ಐದು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಾಗಿ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಈ ಪಟ್ಟಿಯಲ್ಲಿ ಹೆಸರಿಲ್ಲದವರು ಈಗ ಅವರ ಹೆಸರನ್ನು ಸೇರಿಸಬಹುದೇ?
Assembly Election 2023: ಈ ವರ್ಷಾಂತ್ಯದಲ್ಲಿ ನಡೆಯಬೇಕಿರುವ ಪಂಚ ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ಸಜ್ಜಾಗಿದ್ದು ಇಂದು ಮಧ್ಯಾಹ್ನ ಚುನಾವಣಾ ದಿನಾಂಕಗಳನ್ನು ಘೋಷಿಸುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆಯಲ್ಲಿ ಕುಕ್ಕರ್ & ಐರನ್ ಬಾಕ್ಸ್ ಹಂಚಿಕೆ ನಿಜವೇ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ-2023 ಅಂಗವಾಗಿ ಮೇ 10, 2023 ರಂದು ಮತದಾನ ನಡೆಯಲಿದೆ. ಮುದ್ರಣ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಮತ್ತು ಕಾನೂನು ಉಲ್ಲಂಘಿಸುವ ಜಾಹಿರಾತುಗಳನ್ನು ಪ್ರಕಟಿಸುತ್ತಿರುವುದನ್ನು ಕೇಂದ್ರ ಚುನಾವಣಾ ಆಯೋಗ ಗಮನಿಸಿದೆ. ಚುನಾವಣೆಯ ಅಂತಿಮ ಹಂತದಲ್ಲಿ ಇಂತಹ ಜಾಹಿರಾತುಗಳು ಇಡೀ ಚುನಾವಣಾ ಪ್ರಕ್ರಿಯೆಯನ್ನು ಕಲುಷಿತಗೊಳಿಸುವ ಸಾಧ್ಯತೆಯಿದ್ದು, ಇದರಿಂದ ಬಾಧಿತರಾದ ಅಭ್ಯರ್ಥಿಗಳು ಮತ್ತು ಪಕ್ಷಗಳು ಅವುಗಳಿಗೆ ಸ್ಪಷ್ಟೀಕರಣ ಅಥವಾ ಖಂಡಿಸುವ ಅವಕಾಶವನ್ನು ಕಳೆದುಕೊಂಡಂತಾಗುತ್ತದೆ.
ಬೆಂಗಳೂರು: ನಗರದಲ್ಲಿ ಯಾವೊಬ್ಬ ಮತದಾರನೂ ಆಮೀಷಕ್ಕೆ ಒಳಗಾಗದೆ ಎಲ್ಲರೂ ತಪ್ಪದೆ ಮತ ಚಲಾಯಿಸುವಂತಾಗಬೇಕು, ಅದಕ್ಕೆ ಎಲ್ಲಾ ಯುವ ಸಮೂಹ ಕೈಜೋಡಿಸಬೇಕೆಂದು ಮಾನ್ಯ ಜಿಲ್ಲಾ ಚುನಾವಣಾಧಿಕಾರಿಯಾದ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಕೋರಿದರು.
Karnataka Assembly Election: ಶತಾಯುಷಿ ಆಗಿದ್ದರೂ ಕೂಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಮಹಾದೇವ ಮಹಾಲಿಂಗ ಮಾಳಿ ಅವರ ಉತ್ಸಾಹವನ್ನು ಗುರುತಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್, ನಿನ್ನೆ, ಮಂಗಳವಾರ (ಮೇ 02) ಸ್ವತಃ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಪಕ್ಷದ ಪದಾಧಿಕಾರಿಗಳಿಗೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ ಗಟ್ಟೆಗಳ ವಿವರ ನೀಡುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ಅವರು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಹೋಟೇಲ್ ಮತ್ತು ರೆಸ್ಟೋರೆಂಟ್ಗಳಿಗೆ ನೀವು ಹೋದರೆ ಅಲ್ಲಿಯ ಸಿಬ್ಬಂದಿ ನಿಮಗೆ ತಿಂಡಿ-ತಿನಿಸುಗೊಳೊಂದಿಗೆ, ಮತದಾನ ಮಾಡಿ ಎಂಬ ಸಂದೇಶವನ್ನೂ ಕೂಡ ಸರ್ವ್ ಮಾಡುತ್ತಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಮತದಾನ (Vote) ಮಾಡಿ ಎನ್ನುವ ಮಾತುಗಳು ಮತ್ತು ಘೋಷಣೆಗಳನ್ನು ಎಲ್ಲೆಡೆ ಕೇಳುತ್ತಿದ್ದೇವೆ. ಕಳೆದ ಎಲ್ಲ ಚುನಾವಣೆಗಿಂತ ಈ ಬಾರಿ ಅತಿ ಹೆಚ್ಚು ಮತದಾನವಾಗಬೇಕೆಂದು ರಾಜ್ಯ ಚುನಾವಣಾ ಆಯೋಗ ಗುರಿ ಇಟ್ಟುಕೊಂಡಿದ್ದು, ಈ ಸಂಬಂಧ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದೇ ರೀತಿಯಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕೂಡ ಈ ಜಾಗೃತಿ ಅಭಿಯಾನ ನಡೆಯಲಿದೆ.
ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಕಾಂಗ್ರೆಸ್ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದು ಬಿಜೆಪಿ ಮತಗಳ ಮೇಲೆ ಪರಿಣಾಮ ಬೀರಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Jagadish Shettar join congress : ಪಕ್ಷ ಮುಖ್ಯ ವ್ಯಕ್ತಿ ಅಲ್ಲ ಎಂಬ ಸಿದ್ಧಾಂತ ನಂಬಿ ಪಕ್ಷವನ್ನು ಬೆಳೆಸಿದವರು, ಆದರೆ ಇಂದು ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ನಿಯಂತ್ರಣದಲ್ಲಿದೆ. ಅವರೆಲ್ಲಾ ವ್ಯವಸ್ಥಿತವಾಗಿ ಸಂಚು ರೂಪಿಸಿ ನನ್ನನ್ನು ಹೊರಗೆ ಹಾಕಿದ್ದಾರೆ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಟಿ.ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಭ್ಯರ್ಥಿ ಕೃಷ್ಣಮೂರ್ತಿ ಡಿ.ಕೆ. ಸಹೋದರರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಹಣ ಪಡೆದು ಧನಂಜಯ್ಯ ಅವರಿಗೆ ಟಿಕೆಟ್ ನೀಡಿದ್ದಾಗಿ ದೂರಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಟಿಕೆಟ್ ಸರ್ವೇ ಬರೀ ಬೋಗಸ್ ಎಂದು ಕಿಡಿಕಾರಿದ್ದಾರೆ.
Karnataka Election 2023 : ಸೂಕ್ಷ್ಮ ಪ್ರದೇಶಗಳಂತೆ ನೂರಕ್ಕೂ ಹೆಚ್ಚು ಏರಿಯಾ ಲಿಸ್ಟ್ ಔಟ್ ಮಾಡಲಾಗಿದೆ. ಬರೊಬ್ಬರಿ 405 ಮಿಲಿಟರಿ ಪೋರ್ಸ್ ಕಂಪನಿಗಳು ರಾಜ್ಯದಲ್ಲಿ ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ 105 ಸೆಂಟ್ರಲ್ ಆರ್ಮಿ ಕಂಪನಿಯನ್ನ ಮಾತ್ರ ತೆಗೆದುಕೊಳ್ಳಲಾಗಿತ್ತು. ಈ ಬಾರಿ 405 ಕಂಪನಿಗಳಲ್ಲಿ ಅರವತ್ತು ಸಾವಿರ ಮಂದಿಯ ಪಡೆಯನ್ನು ನೇಮಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.