Assembly Elections: ದೇಶದಲ್ಲಿ ಒಂದೆಡೆ ಕರೋನಾವೈರಸ್ ಹೊಸ ರೂಪಾಂತರದ ಹಾವಳಿಯಾದರೆ, ಇನ್ನೊಂದೆಡೆ ದೇಶದ ಐದು ರಾಜ್ಯಗಳಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆಗಳು ನಡೆಯಬೇಕಿದೆ. ಈ ಹಿನ್ನಲೆಯಲ್ಲಿ ಚುನಾವಣಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಚುನಾವಣಾ ಆಯೋಗ (ಇಸಿ) ಮಹತ್ವದ ಸೂಚನೆಗಳನ್ನು ನೀಡಿದೆ.
Election Commission of India: 2022 ರ ಆರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಆದರೆ ಅಂತಹ ಪರಿಸ್ಥಿತಿಯಲ್ಲಿ, ಕರೋನದ ಹೊಸ ರೂಪಾಂತರದ ಓಮಿಕ್ರಾನ್ನ ಅಪಾಯವೂ ಹೆಚ್ಚಾಗಲು ಪ್ರಾರಂಭಿಸಿದೆ. ಒಮಿಕ್ರಾನ್ (Corona Fear During Election) ಸರ್ಕಾರ ಹಾಗೂ ಚುನಾವಣಾ ಆಯೋಗದ ಕಳವಳವನ್ನು ಎತ್ತಿದೆ. ಇಂತಹ ಸಂದರ್ಭಗಳಲ್ಲಿ ಚುನಾವಣಾ ರ್ಯಾಲಿಗಳು ಕೊರೊನಾ ಸೋಂಕನ್ನು ಹೆಚ್ಚಿಸಬಹುದು.
ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಲು ಕಂಪ್ಯೂಟರ್ ಅಥವಾ ಮೊಬೈಲ್ ಇದ್ದಾರೆ ಸಾಕು. ಚುನಾವಣಾ ಆಯೋಗದ ವೆಬ್ಸೈಟ್ನಿಂದ ಇಂಟರ್ನೆಟ್ನಲ್ಲಿ ನಿಮ್ಮ ಹೆಸರು ಪರಿಶೀಲಿಸಬಹುದು. ಇದಕ್ಕಾಗಿ ಕೆಲವು ಹಂತಗಳನ್ನು ಅನುಸರಿಸಬೇಕು.
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಚುನಾವಣಾ ಆಯೋಗಕ್ಕೆ ಮಾಧ್ಯಮ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಸಮೀಕ್ಷೆಗಳನ್ನು ಯಾವುದೇ ಚುನಾವಣೆಗೆ ಆರು ತಿಂಗಳ ಮುಂಚೆ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿಮ್ಮ ಮತದಾರರ ಗುರುತಿನ ಚೀಟಿ ಕಳೆದುಹೋದರೆ ಮತ್ತು ಕೆಲವು ಪ್ರಮುಖ ಕೆಲಸಗಳಿಗಾಗಿ ನಿಮಗೆ ತಕ್ಷಣವೇ ಅದು ಬೇಕಾಗಿದ್ದರೆ ಭಯಪಡುವ ಅಗತ್ಯವಿಲ್ಲ. ತುರ್ತು ಡಿಜಿಟಲ್ ಮತದಾರರ ಗುರುತಿನ ಚೀಟಿಯನ್ನು ಇಲ್ಲಿಂದ ಡೌನ್ಲೋಡ್ ಮಾಡಿ.
ಕೋವಿಡ್ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಿರುವುದರಿಂದ ಪಶ್ಚಿಮ ಬಂಗಾಳದ ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಸುವಂತೆ ಒತ್ತಾಯಿಸಲು ತೃಣಮೂಲ ಕಾಂಗ್ರೆಸ್ ನಿಯೋಗ ಜುಲೈ 15 ರಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದೆ.
West Bengal Assembly Election Result 2021: ಸ್ಪರ್ಧಿಗಳ ಸಾವಿನಿಂದಾಗಿ ಎರಡು ಕ್ಷೇತ್ರಗಳಲ್ಲಿ ಮತದಾನವನ್ನು ಮುಂದೂಡಲಾಯಿತು. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಗೆಲ್ಲಲು, ಒಂದು ಪಕ್ಷ ಅಥವಾ ಒಕ್ಕೂಟವು 148 ಸ್ಥಾನಗಳನ್ನು ಗೆಲ್ಲಬೇಕು.
ಪಂಚರಾಜ್ಯ ಚುನಾವಣಾ ಫಲಿತಾಂಶಕ್ಕಾಗಿ ಸಕಲ ರೀತಿಯಲ್ಲಿಯೂ ಸಜ್ಜಾಗಿರುವ ಚುನಾವಣಾ ಆಯೋಗವು ಮತಎಣಿಕೆ ಕೇಂದ್ರಗಳಲ್ಲಿ ಭಾರೀ ಬಿಗಿ ಭದ್ರತೆ ಕೈಗೊಂಡಿದೆ. ಅದಲ್ಲದೆ ಕೋವಿಡ್ -19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೂಡ ಕ್ರಮ ಕೈಗೊಂಡಿದೆ.
ಮೇ 2 ರಂದು ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬರಲಿವೆ. ಚುನಾವಣಾ ಆಯೋಗವು ಭಾನುವಾರ ಬೆಳಿಗ್ಗೆ 8 ರಿಂದ ಮತಎಣಿಕೆ ಆರಂಭಿಸಲಿದೆ.
ಋಣಾತ್ಮಕ ಕೋವಿಡ್ ವರದಿ ಅಥವಾ ಲಸಿಕೆ ಎರಡು ಡೋಸ್ ತೆಗೆದುಕೊಳ್ಳದ ಅಭ್ಯರ್ಥಿಗಳಿಗೆ ಭಾನುವಾರ ಮತ ಎಣಿಕೆ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ರೋಡ್ ಶೋ ಮತ್ತು ವಾಹನ ರ್ಯಾಲಿ ಮತ್ತು 500 ಕ್ಕೂ ಹೆಚ್ಚು ಜನರನ್ನು ಹೊಂದಿರುವ ಯಾವುದೇ ಸಾರ್ವಜನಿಕ ಸಭೆಯನ್ನು ಅನುಮತಿಸುವುದಿಲ್ಲ ಎಂದು ಹೇಳಿದೆ. ಈ ಆದೇಶಗಳು ಗುರುವಾರ ಸಂಜೆ 7 ರಿಂದ ಜಾರಿಗೆ ಬರಲಿವೆ.
ಮೂರನೇ ಹಂತದ ಚುನಾವಣೆಗೆ ಮುನ್ನ ಏಪ್ರಿಲ್ 3 ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಪ್ರಚಾರ ನಡೆಸುತ್ತಿರುವಾಗ ಕೋಮುವಾದಿ ಆಧಾರದ ಮೇಲೆ ಮತಗಳನ್ನು ಬಹಿರಂಗವಾಗಿ ಕೇಳಬೇಕು ಎಂಬ ಹೇಳಿಕೆ ವಿಚಾರವಾಗಿ ಕುರಿತು ಚುನಾವಣಾ ಆಯೋಗವು ಬುಧವಾರ ಸಂಜೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ನೋಟಿಸ್ ನೀಡಿದೆ.
ಅಸ್ಸಾಂನ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರವನ್ನು (ಇವಿಎಂ) ಸಾಗಿಸುವ ಚುನಾವನಾ ಅಧಿಕಾರಿಗಳ ವೀಡಿಯೋ ವೈರಲ್ ಆಗಿರುವ ವಿಚಾರವಾಗಿ ತೀವ್ರ ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ (ಏಪ್ರಿಲ್ 1) ನಂದಿಗ್ರಾಮ್ನ ಮತದಾನ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ ಮಾಡಿದ ಕೆಲವೇ ಗಂಟೆಗಳ ನಂತರ, ಚುನಾವಣಾ ಆಯೋಗವು ಈ ಬೂತ್ನಲ್ಲಿ ಯಾವುದೇ ಅಡೆತಡೆಗಳಿಲ್ಲ ಎಂದು ಹೇಳಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.