ರಾಜ್ಯದ ಬಜೆಟ್ ಮಂಡನೆ ಬಳಿಕ ನಾಡದೊರೆ ಬೊಮ್ಮಾಯಿ ಹಾವೇರಿ ಜಿಲ್ಲೆಗೆ ಇಂದು ಆಗಮಿಸಿದ್ದರು. ಸಿಎಂ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು. ಬಳಿಕ ಸಿಎಂ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಈ ವೇಳೆ ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸಿಎಂ ಮಾತನಾಡಿದರು.
ಚುನಾವಣೆ ಹೊತ್ತಲ್ಲಿ ಬಾಗಲಕೋಟೆಯಲ್ಲಿ ಗಿಫ್ಟ್ ರಾಜಕೀಯ ಜೋರಾಗಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದ ಗಲಗಲಿಯಲ್ಲಿ ಸಚಿವ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆಯನ್ನು ಮಹಿಳೆಯೊಬ್ಬರು ತಿರಸ್ಕರಿಸಿದ್ದಾರೆ..
ರಾಜ್ಯದಲ್ಲಿ ಭ್ರಷ್ಟಾಚಾರ ಪಿತಾಮಹ ಸಿಎಂ ಬೊಮ್ಮಾಯಿ. ಟ್ರಾನ್ಸ್ಫರ್.. ಪೋಸ್ಟಿಂಗ್.. ಪ್ರಾಜೆಕ್ಟ್ ಸೇರಿದಂತೆ ಎಲ್ಲದರಲ್ಲೂ ಭ್ರಷ್ಟಾಚಾರ ನಡೀತಿದೆ. ಹಣ ಸಂಪಾದನೆ ಮಾಡಿ.. ಚುನಾವಣೆಗೆ ಹಣ ಹಾಕ್ತಾರೆ ಅಂತಾ ಸಿಎಂ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಫುಲ್ ಅಲರ್ಟ್. ಚುನಾವಣೆ ಗೆಲುವಿಗೆ BJP ಚಾಣಕ್ಯನ ಗೇಮ್ ಪ್ಲ್ಯಾನ್. ನಾಳೆ ಸಕ್ಕರೆನಾಡು ಮಂಡ್ಯಕ್ಕೆ ಅಮಿತ್ ಶಾ ಭೇಟಿ. ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ.
ಕರಾವಳಿಯಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ಕುಮಟಾದಲ್ಲಿ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಮಣಕಿ ಮೈದಾನದಲ್ಲಿ ಬಿಜೆಪಿ ವಿರುದ್ಧ ರಣತಂತ್ರ ಮುಂದಿನ ಚುನಾವಣೆಯಲ್ಲಿ ಗದ್ದುಗೆ ಏರಲು ಸಿದ್ಧತೆ ಸಮಾವೇಶದಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಭಾಗಿ
ಚುನಾವಣೆಯಲ್ಲಿ ಎಲ್ಲರಿಗೂ ಅವಕಾಶ ಇದೆ. ಬಿಜೆಪಿಯವರು ಅವರ ತಯಾರಿ ಅವ್ರು ಮಾಡ್ತಾರೆ. ನಮ್ಮ ತಯಾರಿ ನಾವು ಮಾಡ್ತೀವಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ರು. ಚುನಾವಣೆಗೆ ಇನ್ನೂ ಆರೇಳು ತಿಂಗಳು ಬಾಕಿ ಇದೆ. ಅಷ್ಟರಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ನೋಡೋಣ ಎಂದ್ರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130 ರಿಂದ 150 ಸೀಟು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ನೂರಕ್ಕೆ ನೂರು ಬಹುಮತ ಪಡೆಯಲಿದೆ ಎಂದ ಸಿಎಂ, ಇದೇ ನನ್ನ ಕೊನೆಯ ಚುನಾವಣೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಆದ್ರೆ ಚುನಾವಣಾ ರಾಜಕೀಯದಲ್ಲಿ ಇರಲ್ಲ ಎಂದಿದ್ದಾರೆ.
2023 ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಇದು ನನ್ನ ಕೊನೆಯ ಚುನಾವಣೆ. ನಂತರ ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕಾರ ಮಾಡೋದಿಲ್ಲ ಎಂದಿದ್ದಾರೆ.
ಒಂದಕ್ಕಿಂತ ಹೆಚ್ಚು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರುವ ಸಲುವಾಗಿ ಚುನಾವಣಾ ಆಯೋಗವು ಈಗ ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯು ತಾನು ಸ್ಪರ್ಧಿಸಿದ್ದ ಎಲ್ಲಾ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ನಾಲ್ಕು ಸ್ಥಾನಗಳಿಗಾಗಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇನ್ನೊಂದೆಡೆಗೆ ಗೆಲ್ಲಲು ಸೂಕ್ತ ನಂಬರ್ ಇಲ್ಲದಿದ್ದರೂ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್ ಪಕ್ಷವು ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ.
NRI News: ಪ್ರಸ್ತುತ ETBPS ಸೌಲಭ್ಯವು ಸೇವಾ ಕ್ಷೇತ್ರದ ಮತದಾರರಿಗೆ ಮಾತ್ರ ಲಭ್ಯವಿದ್ದು, ತಮ್ಮ ತವರು ಕ್ಷೇತ್ರದಿಂದ ಹೊರಗೆ ನಿಯೋಜಿಸಲಲಾದ ಸಶಸ್ತ್ರ ಪಡೆಗಳ ಸದಸ್ಯರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪೇದೆಗಳಿಗೆ ಮತ್ತು ಭಾರತೀಯ ರಾಯಭಾರಿ ಕಚೇರಿ ಸೇರಿದಂತೆ ರಾಜತಾಂತ್ರಿಕ ಕಾರ್ಯಗಳ ಸದಸ್ಯರಿಗೆ ನೀಡಲಾಗಿದೆ. 2020 ರಲ್ಲಿ ಅರ್ಹ ಸಾಗರೋತ್ತರ ಭಾರತೀಯ ಮತದಾರರಿಗೂ ಕೂಡ ETPBS ಸೌಲಭ್ಯವನ್ನು ವಿಸ್ತರಿಸಲು EC ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.