ಈ ಕುರಿತು ಟ್ವೀಟ್ ಮಾಡಿರುವ ಆಫ್ರಿದಿ, "ಉಯಿಗರ್ ಮುಸ್ಲಿಮರಿಗೆ ನೀಡಲಾಗುತ್ತಿರುವ ಕಿರುಕುಳ ಕೇಳಿ ನನ್ನ ಹೃದಯ ನುಚ್ಚುನೂರಾಗಿದೆ. ನೀವು ಉಮ್ಮತ್(ಮುಸ್ಲಿಂ ಸಮುದಾಯ) ಅನ್ನು ಮರುಸಂಘಟಿಸುವ ಕುರಿತು ಹೇಳಿಕೆ ನೀಡುತ್ತಿರಿ. ಅದೇ ರೀತಿ ಈ ನಿಟ್ಟಿನಲ್ಲಿಯೂ ಕೂಡ ಸ್ವಲ್ಪ ವಿಚಾರಿಸಿ" ಎಂದು ಪಾಕ್ ಪ್ರಧಾನಿ ಇಮ್ರಾನ್ ಅವರನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ "
ನಿಯಂತ್ರಣ ರೇಖೆಯಾದ್ಯಂತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ತನ್ನ ಬದಿಯಲ್ಲಿರುವ ಪಂಜಾಬ್ ಪ್ರಾಂತ್ಯಕ್ಕೆ ಸೇರಿಸಲು ಸಂಚು ರೂಪಿಸುತ್ತಿದೆ. ಆದ್ದರಿಂದ, ಇದು ಆಕ್ರಮಿತ ಕಾಶ್ಮೀರದ ಹೆಸರನ್ನು 'ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳು' (JKAS) ಎಂದು ಬದಲಾಯಿಸಿದೆ. ಇಲ್ಲಿಯವರೆಗೆ, ಕಾಶ್ಮೀರದ ಆ ಭಾಗವನ್ನು ಪಾಕಿಸ್ತಾನದಲ್ಲಿ 'ಆಜಾದ್ ಕಾಶ್ಮೀರ' ಎಂದು ಕರೆಯಲಾಗುತ್ತಿತ್ತು. ಇದೀಗ ಪಾಕಿಸ್ತಾನದ ಹೊಸ ನಡೆಯ ಹಿಂದೆ ಪಾಕಿಸ್ತಾನದ ದುಷ್ಟ ಉದ್ದೇಶವಿದೆ ಎನ್ನುವ ಅನುಮಾನ ಮೂಡಿದೆ.
ತಾಯಂದಿರು, ಮಕ್ಕಳಿಗೆ ಪೋಲಿಯೊ ಹನಿಗಳನ್ನು ಹಾಕಿಸದಿದ್ದರೆ ಆರೋಗ್ಯ ಕಾರ್ಯಕರ್ತರ ಬಳಿಗೆ ಹೋಗಿ ಅವರ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ನಾನು ವಿನಂತಿಸುತ್ತೇನೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಗೆ ಭಾರತ ತೀಕ್ಷ್ಣ ಪ್ರತ್ಯುತ್ತರ ನೀಡಿದೆ. ಇಮ್ರಾನ್ ಹೇಳಿಕೆಗೆ ತಿರುಗೇಟು ನೀಡಿರುವ ಭಾರತ ಪಾಕ್ ಭಾರತದ ಆಂತರಿಕ ವಿಷಯಗಳಲ್ಲಿ ತಲೆ ಹಾಕುವುದನ್ನು ಬಿಟ್ಟು, ತನ್ನಲ್ಲಿರುವ ಅಲ್ಪಸಂಖ್ಯಾತರ ಕುರಿತು ಗಮನ ಹರಿಸಬೇಕು ಎಂದಿದೆ.
ಸರ್ಕಾರವು ತೆರಿಗೆ ಹೆಚ್ಚಳ, ಇಂಧನ ಸುಂಕ ಹೆಚ್ಚಳ ಮತ್ತು ಕರೆನ್ಸಿಯ ಅಪಮೌಲ್ಯೀಕರಣವು ಬಡತನವನ್ನು ಹೆಚ್ಚಳಕ್ಕೆ ಕಾರಣ ಎಂದು ಪಾಷಾ ಹೇಳಿದರು. ಪಾಷಾ ಪ್ರಕಾರ, ಮುಂದಿನ ವರ್ಷದ ಜೂನ್ ವೇಳೆಗೆ, ಪಾಕಿಸ್ತಾನಿಗಳಲ್ಲಿ ಹತ್ತು ಜನರಲ್ಲಿ ನಾಲ್ವರು ಬಡವರಿರುತ್ತಾರೆ.
ಇದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಮತ್ತು ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಒಪ್ಪಂದಗಳ ಎಲ್ಲಾ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ಭಾರತದೊಂದಿಗೆ ವ್ಯಾಪಾರ ನಿರ್ಬಂಧದ ಕಾರಣದಿಂದಾಗಿ ಪಾಕಿಸ್ತಾನದಲ್ಲಿ ಹಣದುಬ್ಬರ ಹೆಚ್ಚಾಗಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರ ಆರ್ಥಿಕ ಸಲಹಾ ತಂಡ ಒಪ್ಪಿಕೊಂಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುವ ಮೂಲಕ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಮತ್ತೊಮ್ಮೆ ಕಾಶ್ಮೀರದ ಪರಿಸ್ಥಿತಿಯನ್ನು ಪ್ರಚಾರ ಮಾಡಲು ಪ್ರಯತ್ನಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ನವಾಜ್ ಷರೀಫ್ ವಿರುದ್ಧ ಯಾವುದೇ ದ್ವೇಷವನ್ನು ಹೊಂದಿಲ್ಲ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಷರೀಫ್ ಅವರ ಆರೋಗ್ಯವು ರಾಜಕೀಯಕ್ಕಿಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
ನವೆಂಬರ್ 9 ರಂದು ಕಾರ್ತಾರ್ಪುರ ಕಾರಿಡಾರ್ ಉದ್ಘಾಟನಾ ಸಮಾರಂಭಕ್ಕೆ ಸಿಧು ಆಗಮಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲು 'ಹಮಾರಾ ಸಿಧು ಎಲ್ಲಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿಚಾರಿಸಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಕರ್ತಾರ್ಪುರ ಕಾರಿಡಾರ್ನ ಆರಂಭವನ್ನು ಗುರುತಿಸಲು ಪಾಕಿಸ್ತಾನ ಬಿಡುಗಡೆ ಮಾಡಿದ ವಿಡಿಯೋವು ಮೂರು ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಪೋಸ್ಟರ್ ನ್ನು ಒಳಗೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಅದರಲ್ಲಿ ಖಲಿಸ್ತಾನ್ 2020 ಎಂದು ಬರೆಯಲಾಗಿದೆ.
ಗುರುನಾನಕ್ ದೇವ್ ಜಿ ಅವರ 550 ನೇ ಜನ್ಮ ದಿನಾಚರಣೆಯ ಆಚರಣೆಗೆ ಸಮಯಕ್ಕೆ ಸರಿಯಾಗಿ ತಯಾರಿ ಮಾಡಿದ್ದಕ್ಕಾಗಿ ನನ್ನ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
"ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ' ಮತ್ತು ನಾನು ರಾಜೀನಾಮೆ ನೀಡುವುದಿಲ್ಲ. ಪ್ರತಿಭಟನೆಯು ಕಾರ್ಯಸೂಚಿ ಆಧಾರಿತವಾಗಿದೆ ಮತ್ತು ಇದಕ್ಕೆ ವಿದೇಶಿ ಬೆಂಬಲವಿದೆ" ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಿಪಿಪಿ ಮುಖ್ಯಸ್ಥ ಬಿಲಾವಾಲ್ ಭುಟ್ಟೋ-ಜರ್ದಾರಿ ಶುಕ್ರವಾರ ರಾತ್ರಿ ನಡೆದ ಸಾರ್ವಜನಿಕ ಸಭೆಯಲ್ಲಿ 'ದೇಶದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸುವುದು ನಮ್ಮ ಬೇಡಿಕೆ' ಎಂದು ಹೇಳಿದರು.
ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಬಗ್ಗೆ ಪಾಕ್ ವೇಗಿ ಶೋಯಬ್ ಅಖ್ತರ್ ಮೆಚ್ಚುಗೆ ನುಡಿಗಳನ್ನಾಡಿದ್ದಾರೆ. ನಾಯಕತ್ವದ ವಿಚಾರದಲ್ಲಿ ಗಂಗೂಲಿ ಪಾಕಿಸ್ತಾನದ ಇಮ್ರಾನ್ ಖಾನ್ ಇದ್ದಂತೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಪ್ರಧಾನಿ ಇಮ್ರಾನ್ ಖಾನ್ ಅನುಪಸ್ಥಿತಿಯಲ್ಲಿ ದೇಶದ ಉನ್ನತ ಉದ್ಯಮಿಗಳನ್ನು ಭೇಟಿ ಮಾಡಿರುವುದು ಪಾಕಿಸ್ತಾನದಲ್ಲಿ ಮತ್ತೊಂದು ಮಿಲಿಟರಿ ಸರ್ವಾಧಿಕಾರದ ಪರ್ವ ಆರಂಭವಾಗಲಿದೆಯೇ ಎನ್ನುವ ಅನುಮಾನಗಳು ಎದುರಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.