KL Rahul Statement on Virat Kohli: ಸೆಪ್ಟೆಂಬರ್ನಿಂದ ಕೊಹ್ಲಿ ವೈಟ್-ಬಾಲ್ ಪಂದ್ಯಗಳಲ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ. ಏಷ್ಯಾಕಪ್ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಟಿ20ಯಲ್ಲಿ ಶತಕ ಬಾರಿಸಿದ್ದರು. ಅಷ್ಟೇ ಅಲ್ಲದೆ, ಆಸ್ಟ್ರೇಲಿಯದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಕೆಲವು ಸ್ಮರಣೀಯ ಇನ್ನಿಂಗ್ಸ್ಗಳನ್ನು ಆಡಿದ್ದಾರೆ.
IND vs BAN 1st Test, Live Streaming: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ (ಬುಧವಾರ) ನಡೆಯಲಿದೆ. ಚಿತ್ತಗಾಂಗ್ ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ.
KL Rahul-Athiya Shetty Marriage Date: ಅಥಿಯಾ ಮತ್ತು ಕೆಎಲ್ ರಾಹುಲ್ ಅನೇಕ ಸಂದರ್ಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದೀಗ, ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ಇನ್ನೂ ಕೆಲ ಮಾಧ್ಯಮ ವರದಿಯಲ್ಲಿ ಮದುವೆಯ ದಿನಾಂಕ ಕೂಡ ಸುದ್ದಿಯಾಗಿದೆ. ಕೆಎಲ್ ರಾಹುಲ್ ಮತ್ತು ಅಥಿಯಾ ಮದುವೆ ದಿನಾಂಕ ಯಾವುದು ಎಂದು ತಿಳಿಯೋಣ.
ವಿರಾಟ್ ಕೊಹ್ಲಿ ಅಂತೂ ಇಂತು ತಮ್ಮ ಎಂದಿನ ಬ್ಯಾಟಿಂಗ್ ಲಯಕ್ಕೆ ಮರಳಿದ್ದಾರೆ. ಅಚ್ಚರಿ ಎಂದರೆ ಅವರು ತಮ್ಮ ಟಿ20 ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಒಟ್ಟಾರೆಯಾಗಿ 71 ಮತ್ತು 72 ಶತಕವನ್ನು ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದಲ್ಲಿಯೇ ಸಿಡಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.
IND vs BAN 3nd ODI: ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ 0-2 ಹಿನ್ನಡೆಯಲ್ಲಿದೆ. 3ನೇ ಏಕದಿನ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ನಾಯಕ ಕೆ.ಎಲ್.ರಾಹುಲ್ ಅವರು ಆಡುವ 11ರಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ನೀಡಬಹುದು.
IND vs BAN: ವಿಕೆಟ್ ಕೀಪರ್ನ ಪಾತ್ರ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಈಗ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಮೂರನೇ ಏಕದಿನ ಪಂದ್ಯದ ಭಾಗವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ರಾಹುಲ್ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ರೋಹಿತ್ ಹೊರತಾಗಿ, ಸ್ಟಾರ್ ವೇಗಿ ದೀಪಕ್ ಚಹಾರ್ ಮತ್ತು ಯುವ ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಗಾಯದಿಂದಾಗಿ ಸರಣಿಯ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
Jay Shah On Rohit Sharma : ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು.
Team India New T20 Coach : ಟಿ20 ವಿಶ್ವಕಪ್ 2022 ರ ನಂತರ ಹಿರಿಯ ಟೀಂ ಇಂಡಿಯಾ ಮೊದಲ ಬಾರಿಗೆ ಬದಲಾವಣೆಗೆ ಮುಂದಾಗಿದೆ. ತಂಡದ ಹಿರಿಯ ಆಟಗಾರರು ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ, ಕೋಚ್ ರಾಹುಲ್ ದ್ರಾವಿಡ್ ಕೂಡ ಸರಣಿಯಿಂದ ತಂಡಕ್ಕೆ ಮರಳಿದ್ದಾರೆ, ಆದರೆ ತಂಡವು ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ಕೈಯಲ್ಲಿ ಒಂದು ವಿಕೆಟ್ ಸೋಲನ್ನು ಎದುರಿಸಿತು.
Rohit Sharma statement on KL Rahul: ಬಾಂಗ್ಲಾದೇಶದ ಗೆಲುವಿಗೆ 32 ರನ್ಗಳ ಅಗತ್ಯವಿದ್ದಾಗ ಮೆಹಿದಿ ಹಸನ್ ಮಿರಾಜ್ ಕ್ಯಾಚ್ ನೀಡಿದರು. ಆದರೆ ಮೆಹದಿ ಹಸನ್ ಮಿರಾಜ್ ಅವರ ಆ ಕ್ಯಾಚ್ ಅನ್ನು ಕೆಎಲ್ ರಾಹುಲ್ ಕೈ ಚೆಲ್ಲಿದರು. ಒಂದು ವೇಳೆ ಕ್ಯಾಚ್ ಹಿಡಿದಿದ್ದರೆ, ಭಾರತವು 31 ರನ್ಗಳಿಂದ ಪಂದ್ಯವನ್ನು ಗೆಲ್ಲುತ್ತಿತ್ತು. ಆದರೆ ಅದು ಸಂಭವಿಸಲಿಲ್ಲ. ಬಳಿಕ ಮೆಹಿದಿ ಹಸನ್ ಮಿರಾಜ್ ಮತ್ತು ಮುಸ್ತಫಿಜುರ್ ರೆಹಮಾನ್ ಕೊನೆಯ ವಿಕೆಟ್ಗೆ 51 ರನ್ ಸೇರಿಸಿ ಬಾಂಗ್ಲಾದೇಶಕ್ಕೆ ಜಯ ತಂದುಕೊಟ್ಟರು.
IND vs BAN 1st Odi Match : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯ (IND vs BAN) ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಿತು. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಎಲ್ಲರನ್ನು ಅಚ್ಚರಿಗೊಳಿಸಿದ್ದು, ಟೀಂ ಇಂಡಿಯಾವನ್ನು 1 ವಿಕೆಟ್ನಿಂದ ಸೋಲಿಸಿದ್ದು.
KL Rahul Become Wicket Keeper: ಕೆ ಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಮಾಡುವ ಮೂಲಕ ರೋಹಿತ್ ಪ್ರಬಲ ಹೆಜ್ಜೆಯಿಟ್ಟಿದ್ದಾರೆ. ಈ ಮೂಲಕ ಇದು ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಎನ್ನಬಹುದು. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾದ 5 ನೇ ಕ್ರಮಾಂಕದ ಬ್ಯಾಟ್ಸ್ಮನ್ ಪಾತ್ರವನ್ನು ನಿರ್ವಹಿಸಲಿದ್ದಾರೆ.
Team India : ಈ ಆಟಗಾರನನ್ನು ಟೆಸ್ಟ್ ತಂಡಕ್ಕೆ ಸೇರಿಸದೆ ಆಯ್ಕೆಗಾರರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಆಟಗಾರ ಟೆಸ್ಟ್ ಕ್ರಿಕೆಟ್ನಲ್ಲೂ ಭಾರತವನ್ನು ಮುನ್ನಡೆಸಿದ್ದಾರೆ. ಹಾಗಿದ್ರೆ, ಈ ಆಟಗಾರ ಯಾರು? ಯಾಕೆ ಆಯ್ಕೆಯಾಗಿಲ್ಲ? ಇಲ್ಲಿದೆ ನೋಡಿ..
KL Rahul-Athiya Shetty Marriage Date:ಇದೀಗ ರಾಹುಲ್ ಮದುವೆ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಿವಾಹದ ಕಾರಣ ಕೆಎಲ್ ರಾಹುಲ್ ಮುಂದಿನ ವರ್ಷ ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ವರದಿಯಾಗಿದೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ-20 ವಿಶ್ವಕಪ್ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆ ಕುಟುಂಬದವರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Athiya Shetty Wedding: ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಗಳು ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಗೆ ಒಪ್ಪಿಗೆ ನೀಡಿದ್ದಾರೆ. ಅಥಿಯಾ ಮತ್ತು ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರ ಮದುವೆಗೆ ಸಂಬಂಧಿಸಿದಂತೆ ಸುನೀಲ್ ಶೆಟ್ಟಿ ಇತ್ತೀಚೆಗೆ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ.
Indian Cricket Team BCCI: 2022ರ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 10 ವಿಕೆಟ್ ಗಳ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಭಾರತದ ಬೌಲರ್ಗಳು ಮತ್ತು ಬ್ಯಾಟ್ಸ್ಮನ್ಗಳು ಕಳಪೆಯಾಗಿ ಸೋತಿದ್ದಾರೆ. 2021ರ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಪಾಕಿಸ್ತಾನ ವಿರುದ್ಧ 10 ವಿಕೆಟ್ಗಳ ಸೋಲನ್ನು ಎದುರಿಸಬೇಕಾಯಿತು.
ಇಂಗ್ಲೆಂಡ್ ವಿರುದ್ಧ ಕೆಎಲ್ ರಾಹುಲ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ, ಆಯ್ಕೆದಾರರು ಅವರ ಬದಲಿಗೆ ಭಾರತ ತಂಡದಲ್ಲಿ ಓಪನರ್ ಬ್ಯಾಟ್ಸ್ಮನ್ ಆಗಿ ಈ ಆಟಗಾರನಿಗೆ ಅವಕಾಶ ನೀಡಬಹುದು.
ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಾತನಾಡಿದ್ದು, ಶೀಘ್ರವೇ ಹಲವು ಕ್ರಿಕೆಟಿಗರು ನಿವೃತ್ತಿಯಾಗುವ ಸಾಧ್ಯತೆ ಇದ್ದು, ತಂಡಕ್ಕೆ ಹೊಸ ನಾಯಕನ ಎಂಟ್ರಿಯಾಗಲಿದೆ ಎಂದು ಹೇಳಿದ್ದಾರೆ.
ಕೆಎಲ್ ರಾಹುಲ್ ಅವರು ಬಾಂಗ್ಲಾದೇಶದ ಬ್ಯಾಟ್ಸ್ಮನ್ ಲಿಟನ್ ದಾಸ್ ಅವರನ್ನು ಫೀಲ್ಡಿಂಗ್ ಸಮಯದಲ್ಲಿ ಬುಲೆಟ್ ಥ್ರೋನಿಂದ ರನ್ ಔಟ್ ಮಾಡಿದ್ದಾರೆ, ಈಗ ಔಟ್ ಮಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಯಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.