Lok Sabha Elections 2024: ಈ ಕುರಿತು ಮಾತನಾಡಿರುವ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಂತಿ, ನಾನು ಪತ್ರಕರ್ತೆಯಾಗಿದ್ದು, 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಬಂದಿದ್ದೆ. ಪುರಿ ಪ್ರಚಾರದಲ್ಲಿ ನನ್ನ ಸರ್ವಸ್ವವನ್ನೂ ಪಣಕ್ಕಿಟ್ಟೆ. ನಾನು ಕೂಡ ಕಾಂಗ್ರೆಸ್ ಬೆಂಬಲಿಸಿ ದೇಣಿಗೆ ಅಭಿಯಾನ ಆರಂಭಿಸಿದೆ. ಆದರೆ ನನಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲ.
Mallikarjun Kharge: ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಸಂವಿಧಾನ 371ಜೆ ತಿದ್ದುಪಡಿಯ ಮೂಲಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದರು. ಹೀಗಾಗಿ ಈ ಭಾಗದಲ್ಲಿ ನಮ್ಮ ಸಮುದಾಯ ಸೇರಿದಂತೆ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ರೀತಿಯ ಅನುಕೂಲವಾಗಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
ರಾಜ್ಯದಲ್ಲಿ 2 ನೇ ಹಂತದ ಲೋಕಸಭಾ ಚುನಾವಣೆ
ಮೇ 3 ರವರೆಗೆ ಮೂರು ದಿನ ಅಂಚೆ ಮತದಾನ ಸ್ಟಾರ್ಟ್
ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಅವಕಾಶ
ಅಂಚೆ ಮತಪತ್ರಗಳ ಸೌಲಭ್ಯ ಬಳಸಿಕೊಳ್ಳಲು ಸೂಚನೆ
ಕಾಗವಾಡ ಶಾಸಕ ರಾಜು ಕಾಗೆ ಅವರು ಲೋಕಸಭಾ ಚುನಾವಣೆ ಪ್ರಚಾರ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಚುನಾವಣೆ ಅಧಿಕಾರಿಗಳು ಶಾಸಕ ಕಾಗೆಗೆ 24 ಗಂಟೆ ಒಳಗಾಗಿ ಕಾರಣ ತಿಳಿಸುವಂತೆ ನೊಟೀಸ್ ಜಾರಿ ಮಾಡಲಾಗಿದೆ.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Lok Sabha Election 2024: ಬಿಜೆಪಿಗೆ ಜೆಡಿಎಸ್ ಮೇಲೆ ಇರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಳ್ಳುವ ಕೆಲಸ ನಡೆದಿದೆ. ಹುಣಸೂರಿನಿಂದ ಪ್ರಜ್ವಲ್ ಅವರು ಸ್ಪರ್ಧಿಸಬೇಕು ಎನ್ನುವ ಚರ್ಚೆ ಬಂದಾಗ ʼನಮ್ಮ ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಅದು ಹೋಗುವ ತನಕ ಇದೆಲ್ಲಾ ನಿಲ್ಲುವುದಿಲ್ಲʼ ಎಂದಿದ್ದರು. ಈ ಕಾರಣಕ್ಕೆ ರೇವಣ್ಣ ಮತ್ತು ಕುಮಾರಸ್ವಾಮಿ ಕುಟುಂಬದ ನಡುವೆ ಅಸಮಾಧಾನ ಹೊತ್ತಿಕೊಂಡಿತು.
Lok Sabha Election 2024: ದೇವರಾಜೇ ಗೌಡ ಈ ಪೆನ್ ಡ್ರೈವ್ ವಿಚಾರವಾಗಿ ಯಾರನ್ನೆಲ್ಲಾ ಭೇಟಿ ಮಾಡಿದ್ದರು ಎಂದು ನಮ್ಮ ವಕ್ತಾರರು ವಿವರಿಸಿದ್ದಾರೆ.ಈ ವಿಚಾರವಾಗಿ ದೇವರಾಜೇ ಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು, ಅಲ್ಲದೇ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿಸಿದ್ದರು. ನಾವು ಈ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಬೇರೆ ರೀತಿಯೇ ಮಾಡಬಹುದಾಗಿತ್ತು. ನಮಗೆ ಅದರ ಅಗತ್ಯವಿಲ್ಲ
ಏ.30: ಬಿಜೆಪಿಯವರಿಗೆ ಮಾತನಾಡಲು ಮಾತ್ರ ರಾಮನಾ? ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿ ಸುಳ್ಳು ಹೇಳಿದ ಪಕ್ಷ ಬಿಜೆಪಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Bellary Railway Police Operation: ಆರೋಪಿಯನ್ನು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ಗುಂತಕಲ್ನ ತಿಲಕ್ ನಗರದ ವಾಸಿ 38 ವರ್ಷ ವಯಸ್ಸಿನ ರಘು ಶಂಕರ್ ಎಂದು ಗುರುತಿಸಲಾಗಿದ್ದು, ಆರೋಪಿಯು ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ತಲಾ 01 ಕೆ.ಜಿ. ತೂಕದ 06 ಪಾಕೆಟ್ ಅಂದರೆ ಒಟ್ಟು 06 ಕೆ.ಜಿ. ಯಷ್ಟು ಗಾಂಜಾ ಸಾಗಿಸುತ್ತಿದ್ದುದನ್ನು ಬಳ್ಳಾರಿ ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ. 06 ಕೆ.ಜಿ. ಗಾಂಜಾದ ಮೌಲ್ಯ 06 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನಿಯಮಾನುಸಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Hassan Pen Drive Case: ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, FIR ದಾಖಲಿಸುತ್ತಾನೆ ಅನ್ನೋದು ಆತನಿಗೆ ಗೊತ್ತಿರಲಿಲ್ಲ. ಪ್ರಜ್ವಲ್ ವಿದೇಶ ಪ್ರಯಾಣ FIR ಆಗುವ ಮೊದಲೇ ನಿರ್ಧಾರವಾಗಿತ್ತು ಅಂತಾ ಹೇಳಿದ್ದಾರೆ.
PM Narendra Modi: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದ್ದಾರೆ ಎಂದು ಮೋದಿ ಹಸಿ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಹಿಂದೆ ಹಾಗೂ ಇಂದಿನ ಅವಧಿಯಲ್ಲಿ ಎಂದಿಗೂ ಮೀಸಲಾತಿಗಳನ್ನು ಬದಲಾಯಿಸಿಲ್ಲ. ಕಳೆದ 30 ವರ್ಷಗಳಿಂದ ಮುಸಲ್ಮಾನರಿಗೆ 4% ಮೀಸಲಾತಿ ನೀಡಲಾಗುತ್ತಿದ್ದು, ಮೀಸಲಾತಿ ಬಗ್ಗೆ ಮೋದಿಯವರು ಸುಳ್ಳು ಹೇಳಿ, ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗೆ ಸರ್ಕಾರ SIT ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.