ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
CM siddaramaiah: ಸುಮಾರು 7 ತಿಂಗಳ ಕಾಲ ಬರ ಪರಿಹಾರಕ್ಕಾಗಿ ಕಾದು ಕಾದು ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶವನ್ನು ಸೃಷ್ಟಿಸಿದ್ದು ಕೇಂದ್ರ ಬಿಜೆಪಿ ಸರ್ಕಾರವೇ.ಕರ್ನಾಟಕದ ರೈತರ ಸಂಕಷ್ಟವನ್ನು, ಕೇಂದ್ರದ ರಾಜಕೀಯ ದುರುದ್ದೇಶವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟ ನಂತರ ಮೋದಿ ಸರ್ಕಾರಕ್ಕೆ ಕೋರ್ಟ್ ಚಾಟಿಬೀಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.