ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ.ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ ಮೋದಿ ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್ಎಸ್ಟಿ ಮತ್ತು ಎಸ್ಎಸ್ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Lok Sabha Election 2024:ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
Lok Sabha Election 2024 news : ಬಲಿಷ್ಟ ದೇಶಕ್ಕೆ ಬಲಿಷ್ಟ ನಾಯಕತ್ವ ಬೇಕು. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಬಲಿಷ್ಠ ನಾಯಕರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Mangalore Lok Sabha Election 2024 : ಲೋಕಸಭಾ ಸಾರ್ವತ್ರಿಕ ಚುನಾವಣೆ ಮತ್ತಷ್ಟು ಕಾವೇರಿದೆ. ನಾಮಪತ್ರ ಸಲ್ಲಿಕೆಯ ಭರಾಟೆ ಕೂಡ ರಂಗೇರಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಂದ ಮತಬೇಟೆ ಕೂಡ ಬಿರುಸಾಗಿ ಸಾಗಿದೆ. ಈ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಯು ಮತದಾರನ ವಿವೇಚನೆ. ಸಮರ್ಥ ಮತ್ತು ಸ್ಪಂದನೆವುಳ್ಳ ಸಂದರನ್ನ ಆರಿಸಿ ಕಳಿಸಬೇಕಾಗಿರೋದು ನಮ್ಮೆಲ್ಲರ ಕರ್ತವ್ಯ. ಈ ಕುರಿತು ಜೀ ಕನ್ನಡ ನ್ಯೂಸ್ ಜನಜಾಗೃತಿ ನಡೆಸುತ್ತಿದೆ.
Lok Sabha Election 2024 : ರಾಹುಲ್ ಗಾಂಧಿ ನಾನು ಪ್ರಧಾನಿ ಆಗುವುದಿಲ್ಲ ಅಂತ ಹೇಳಿದ್ದಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಅದು ರಾಹುಲ್ ಗಾಂಧಿ. ಸವಾಲನ್ನು ಸ್ವೀಕಾರ ಮಾಡಿ ಅದನ್ನು ಗೆಲುವಾಗಿ ಪರಿವರ್ತಿಸುವ ಛಲ ನರೇಂದ್ರ ಮೋದಿಯವರಿಗೆ ಮಾತ್ರ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Chitradurga Lok Sabha Constituency History : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯು ಆರಂಭವಾಗಿದೆ. ಏಳು ಹಂತಗಳ ಉಮೇದುವಾರಿಕೆಯಲ್ಲಿ ಹಲವು ಏರಿಳಿತ ಕಾಣುತ್ತಿದ್ದು ಮತಬೇಟೆ ಕೂಡ ಬಿರುಸಾಗಿ ಸಾಗಿದೆ. ಈ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಮತದಾರರ ಜಾಗೃತಿಯನ್ನ ZEE ಕನ್ನಡ ನ್ಯೂಸ್ ನಡೆಸುತ್ತಿದ್ದು ಕ್ಷೇತ್ರದ ವಿಸ್ತಾರ ಪರಿಚಯ ಕೂಡ ಆರಂಭವಾಗಿದೆ.
Chikkaballapur Lok Sabha constituency : ಚಿಕ್ಕಬಳ್ಳಾಪುರ ಕ್ಷೇತ್ರ 1977 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಅಸ್ತಿತ್ವಕ್ಕೆ ಬಂದ ಕ್ಷೇತ್ರದಲ್ಲಿ ಈವರೆಗೆ ಒಟ್ಟು 12 ಚುನಾವಣೆಗಳು ನಡೆದಿದೆ ಆ ಪೈಕಿ ಕಾಂಗ್ರೆಸ್ 10 ಬಾರಿ ಗೆದ್ದಿದ್ದು ಒಂದು ಬಾರಿ ಜನತಾ ದಳ ಹಾಗೂ ಒಂದು ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.
ದೇಶಾದ್ಯಂತ ಬಿಜೆಪಿ ಪರವಾದ ಅಲೆ ಇದೆ. ರಾಜ್ಯದಲ್ಲಿಯೂ ಬಿಜೆಪಿ ಪರ ಅಲೆಯಿಂದ ಇದರಿಂದ ಸಿಎಂ ಡಿಸಿಎಂ ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಬಿಜೆಪಿ ಇಂದು 18 ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿದೆ. ಆದರೆ, ಪ್ರಕಾಶ ರಾಜ್ ಮತ್ತು ಕಮಲ್ ಹಾಸನ್ ಅವರಿಗೆ ಒಂದೇ ಒಂದು ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಸಚಿವ ಜೋಶಿ ತಿರುಗೇಟು ನೀಡಿದರು.
ಚುನಾವಣೆ ಬಂತಂದ್ರೆ ಸಾಕು ಹೆಚ್ಚು ಆ್ಯಕ್ಟಿವ್ ಆಗೊ ಪುಡಾರಿಗಳು ಮತದಾರರ ಮೇಲೆ ಪರಿಣಾಮ ಬೀರೊ ಕೆಲಸ ಮಾಡ್ತಾರೆ. ಬೆದರಿಕೆ ಒಡ್ಡಲು ಮುಂದಾಗ್ತಾರೆ. ಹಾಗಾಗಿ ಲೋಕಸಭೆ ಚುನಾವಣೆ ಸಮೀಪಿಸ್ತಿದ್ದಂತೆ ರೌಡಿಶೀಟರ್ ಗಳ ಬೆವರಿಳಿಸಲು ನಗರ ಪೊಲೀಸರು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.