Google Doodle : 2024ರ ಲೋಕಸಭೆ ಚುನಾವಣೆ ಭಾರತದಲ್ಲಿ ಏಳು ಹಂತಗಳಲ್ಲಿ ನಡೆಯಲಿದೆ. ಇಂದು 1 ನೇ ಹಂತವು ಪ್ರಾರಂಭವಾಗುತ್ತಿದ್ದಂತೆ, ಪ್ರಜಾಪ್ರಭುತ್ವದ ಪ್ರದರ್ಶನವನ್ನು ಆಚರಿಸಲು ಗೂಗಲ್ ಡೂಡಲ್ ಅನ್ನು ಬಿಡುಗಡೆ ಮಾಡಿದೆ.
Lok Sabha Election 2024: ಶುಕ್ರವಾರದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಅತ್ಯಂತ ಶ್ರೀಮಂತ ಮತ್ತು ಬಡ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವಿಶ್ಲೇಷಿಸಿದೆ.
Lok Sabha Election 2024: ಹತ್ತತ್ತು ವರ್ಷ ಪ್ರಧಾನಿ ಆಗಿ ರೈತರಿಗೆ, ಕಾರ್ಮಿಕರಿಗೆ, ಯುವ ಸಮೂಹಕ್ಕೆ, ಮಹಿಳೆಯರಿಗೆ, ದುಡಿಯುವ ವರ್ಗಗಳಿಗೆ, ಕೃಷಿ ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಾಗಲಿಲ್ಲವಲ್ಲ ಏಕೆ. ಮತೆ ನೀವು ಪ್ರಧಾನಿ ಆಗಿ ಭಾರತೀಯರಿಗೆ, ದೇಶಕ್ಕೆ ಸಿಕ್ಕಿದ್ದಾದರೂ ಏನು ಎಂದು ಪ್ರಶ್ನಿಸಿದರು
Lok Sabha Election 2024: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Election Campaigns: ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣಾ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ಮಾಡಲು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ ನಿಂದ ಶಿಡ್ಲಘಟ್ಟ ವೃತ್ತದ ವರೆಗೂ ಭರ್ಜರಿ ರೊಡ್ ಶೋ ನಡೆಸಿ ನಂತರ ಮಾತನಾಡಿದರು.
Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಲೋಸಕಭೆ ಗೆಲ್ಲಲು ಕಾಂಗ್ರೆಸ್ ಜೋಡೆತ್ತು ಎಂಟ್ರಿ - ರಕ್ಷಾ ರಾಮಯ್ಯ ಪರ ಸಿಎಂ.. ಡಿಸಿಎಂ ಕ್ಯಾಂಪೇನ್ - ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ
ಶಿವಮೊಗ್ಗದಲ್ಲಿಂದು ಬಿ.ವೈ.ರಾಘವೇಂದ್ರ ಶಕ್ತಿ ಪ್ರದರ್ಶನ
ಮೆರವಣಿಗೆ ಮೂಲಕ ಇಂದು ನಾಮಪತ್ರ ಸಲ್ಲಿಕೆಗೆ ತಯಾರಿ
ಮೆರವಣಿಗೆ ವೇಳೆ ರಾಘವೇಂದ್ರಗೆ ಸಾತ್ ನೀಡಲಿರುವ ಗಣ್ಯರು
ಈಶ್ವರಪ್ಪ ಕೌಂಟರ್ ನೀಡಲಿರುವ ರಾಜಾಹುಲಿ ಫ್ಯಾಮಿಲಿ
ಮಂಡ್ಯ ಲೋಕಸಮರ ಅಖಾಡಕ್ಕೆ ಇಂದು ಡಿ.ಬಾಸ್ ಎಂಟ್ರಿ - ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ - ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಂದು ಪ್ರಚಾರ
ಸ್ಟಾರ್ ಚಂದ್ರು ಪರ ದರ್ಶನ್ ಮತಬೇಟೆ
Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
Lok Sabha Election 2024: 58,000+ ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.
Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Minister MB Patil: ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ನಮ್ಮ ಕರ್ತವ್ಯ. ಜನರು ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ ಪರವಾಗಿ ಸ್ಪಂದಿಸುತ್ತಿದ್ದಾರೆ. ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ ಮುಂತಾದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮೋದಿಯವರ 10 ವರ್ಷಗಳ ಆಡಳಿತ ಜನರಿಗೆ ಸಾಕಾಗಿ ಹೋಗಿದೆ- ಸಚಿವ ಎಂ.ಬಿ. ಪಾಟೀಲ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿದ್ದ ಚುನಾವಣಾ ಕಾರ್ಯಗಾರದ ಸಂದರ್ಭದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಮಾಜಿ ಸಂಸದ ತೇಜಸ್ವಿ ಸೂರ್ಯ ಅವರು ಪಕ್ಷದ ಕಾರ್ಯಕರ್ತರ ಸಹಾಯದಿಂದ ಅಲ್ಲಿಂದ ಪಲಾಯನ ಮಾಡಿದ್ದಾರೆ.
ಬಿಜೆಪಿಯಲ್ಲಿ ಸಂಗಣ್ಣರಿಗೆ ಅವಕಾಶ ಕೊಟ್ಟಿದ್ರೆ ಗೆಲ್ಲುತ್ತಿದ್ರು
ಬಿಜೆಪಿ ನಾಯಕರಿಗೆ ವಿನಾಶಕಾಲೇ ವಿಪರೀತ ಬುದ್ಧಿ ಇದೆ
ಕೊಪ್ಪಳದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
ಕುಮಾರಸ್ವಾಮಿ ಬಂದ್ರೂ ಬಿಜೆಪಿ ವಿನಾಶದ ಅಂಚಿನಲ್ಲಿದೆ
ನಾನು ಯಾರನ್ನೂ ಹೆದರಿಸಲ್ಲ, ಯಾರನ್ನೂ ಓಡಿಸಲ್ಲ
ಭಾರತ ವಿಕಸಕ್ಕೆ ಮಹತ್ವದ ನಿರ್ಧಾರ ಕೈಗೊಳ್ಳುತ್ತೇನೆ
ದೊಡ್ಡ ಯೋಜನೆಗಳ ಬಗ್ಗೆ ಭಯ ಬೇಡ ಎಂದ ಮೋದಿ
ಇ.ಡಿ, ಐಟಿ ದುರ್ಬಳಕೆ ಪ್ರಶ್ನೆಯೇ ಇಲ್ಲ- ಪ್ರಧಾನಿ
2047ಕ್ಕೆ ಭಾರತ ವಿಕಸಿತ ದೇಶ ಆಗಲು ಹಲವು ಕ್ರಮ
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌಂಟ್ ಡೌನ್
ಮತದಾರರಿಗೆ ತಮ್ಮ ಮತಗಟ್ಟೆ ಹುಡುಕಲು QR ಕೋಡ್
ಮನೆ ಮನೆಗೆ ಹಂಚುವ ಓಟರ್ ಸ್ಲಿಪ್ಗಳಲ್ಲಿ QR Code
QR ಸ್ಕ್ಯಾನ್ ಮಾಡಿ ಮತಗಟ್ಟೆ ತಲುಪಲು ವ್ಯವಸ್ಥೆ
ದೇಶದಲ್ಲಿ ಮೊದಲ ಪ್ರಯೋಗ ಮಾಡಿದ ಚುನಾವಣೆ ಆಯೋಗ
ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲಾ ಸಂಸ್ಥೆಗಳಿಗೂ ಮತದಾನದ ದಿನವಾದ ಏಪ್ರಿಲ್ 26ರಂದು ರಜೆ ನೀಡಿ ಎಲ್ಲಾ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜೊತೆಗೆ ಎಲ್ಲಾ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ ಎಂದು ತುಷಾರ್ ಗಿರಿ ನಾಥ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.