Lok Sabha election 2024: ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆ, ಬಿಸಿಲ ನಗರಿ, ಎಡೆದೊರೆ ನಾಡು, ಹತ್ತಿ ಕಣಜ ಅಂತೆಲ್ಲಾ ಕರೆಯುವ ರಾಯಚೂರು ಜಿಲ್ಲೆಯಲ್ಲಿ ಬಹುಭಾಷಿಗರನ್ನು ಒಡಲಲ್ಲಿಟ್ಟುಕೊಂಡು ಪೋಷಿಸುತ್ತಿದೆ. ಬೇಸಿಗೆಕಾಲದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದ್ರೆ 45 ಡಿಗ್ರಿ ಉಷ್ಣತೆಯಲ್ಲಿ ಇಲ್ಲಿ ಜನರು ಬದುಕುತ್ತಾರೆ.
Lok Sabha Election 2024: ಈ ಕುರಿತಾಗಿ ಅವರನ್ನು ಉಲ್ಲೇಖಿಸಿ ಹಂಚಿಕೊಂಡಿರುವ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ "ಸನ್ಮಾನ್ಯ ಹೆಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ಗೆ ದುಡ್ಡೇ ದೊಡ್ಡಪ್ಪ.. ಮೋದಿಗೆ ದುಡಿಮೆಯೇ ದೊಡ್ಡಪ್ಪ
ರಾಜ್ಯದಲ್ಲಿ ದರಿದ್ರ ಸರ್ಕಾರ ಇದೆ.. ಕುಡಿಯುವ ನೀರಿಗೂ ಹಾಹಾಕಾರ
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ಭಾಷಣದುದ್ದಕ್ಕೂ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಸಿಎಂ
ಈ ಬಾರಿ ಬಿಜೆಪಿಗೆ ಮತ ನೀಡುವಂತೆ ಹಾವೇರಿಯಲ್ಲಿ ಮನವಿ
Lok Sabha Election 2024: ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೆಕೆರೂರು, ರಾಣೆಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ.ಶಿಗ್ಗಾಂವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆ ಮಾಡಿದ್ದೇನೆ ಎಂದರು.
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
ರಾಜಕೀಯದಲ್ಲಿ ಒಂದೊಂದು ನಿಮಿಷಕ್ಕೆ ಒಂದೊಂದು ತಿರುವು ಇರಲಿದೆ. ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿರುವ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ವ್ಯಂಗ್ಯವಾಡಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಕೆಬಿ ಕ್ರಾಸ್ನಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ಮುದ್ದಹನುಮೇಗೌಡ ಅವರಿಗೆ ಮತ ನೀಡಿ ಆಶೀರ್ವದಿಸುವಂತೆ ಅವರು ಮನವಿ ಮಾಡಿದರು.
ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ. ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
Lok Sabha Election 2024: ಲೋಕಸಭೆ ಚುನಾವಣೆಗಾಗಿ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ದೇಶಾದ್ಯಂತ ಪ್ರವಾಸ ಮಾಡುತ್ತಿದ್ದು, ಈ ಕಾರಣದಿಂದಾಗಿ ಚಾರ್ಟರ್ಡ್ ವಿಮಾನ ಮತ್ತು ಹೆಲಿಕಾಪ್ಟರ್ಗಳ ಬೇಡಿಕೆಯು ಶೇಕಡಾ 40 ರಷ್ಟು ಹೆಚ್ಚಾಗಿದೆ.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
PM Narendra Modi: ನವಮಂಗಳೂರು ಬಂದರು ಕೂಡಾ ಸಂಸದ ಯು.ಶ್ರೀನಿವಾಸ ಮಲ್ಯ ಅವರ ಕನಸಾಗಿತ್ತು. ಮಲ್ಯರ ಮಾತಿಗೆ ಮನ್ನಣೆ ಕೊಟ್ಟು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಪಣಂಬೂರಿನಲ್ಲಿ ಬಂದರಿಗೆ ಚಾಲನೆ ನೀಡಿದರು.ಈ ಬಂದರನ್ನು ಕೂಡಾ ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರಲು ಹೊರಟಿದ್ದೀರಿ
10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು.ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Lok Sabha election 2024 : ಬಿಜೆಪಿಯವರು, ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
Lok Sabha Election 2024 : ನನ್ನ ವಿರುದ್ಧ ಹೇಳಿಕೆಯನ್ನು ಬಿಜೆಪಿಯವರು ಸಂಜಯ್ ಪಾಟೀಲ್ ಮೂಲಕ ಮಾತನಾಡಿಸಿದ್ದಾರೆ ಎನಿಸುತ್ತಿದೆ. ಇದು ನನಗೆ ಮಾಡಿದ ಅಪಮಾನ ಅಲ್ಲ, ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.
Sriperumbudur: ಶ್ರೀಪೆರಂಬದೂರು ಕ್ಷೇತ್ರದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಮಿಂಜೂರು-ವಂಡಲೂರು ಹೊರ ವರ್ತುಲ ರಸ್ತೆ (ಒಆರ್ಆರ್) ಮೇಲೆ ದಾಳಿ ನಡೆಸಿ 700 ಕೋಟಿ, ರೂ.ಮೌಲ್ಯದ 1,425 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.ಇವುಗಳನ್ನು ಸೂಕ್ತ ದಾಖಲೆ ಇಲ್ಲದೆ ಮಿನಿ ಟ್ರಕ್ನಲ್ಲಿ ಸಾಗಿಸಲಾಗಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.