Lok Sabha election 2024: ನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Rapido Free Rides: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್ 26 ಶುಕ್ರವಾರದಂದು ರಾಪಿಡೋ ಸಂಸ್ಥೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ಸೇವೆಯನ್ನು ವಿಕಲಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ನೀಡಲಿದೆ. ಇದರ ಕುರಿತು ಮಾಹಿತಿ ಇಲ್ಲಿದೆ.
Election Commission Notice to Rahul Gandhi: ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿಲಾಗಿದೆ.
ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ಪ್ರಕರಣವನ್ನ ಕಾಂಗ್ರೆಸ್ ನೋಡುತ್ತಿದೆ. ಈ ಪ್ರಕರಣವನ್ನು ಗೌಣ ಮಾಡುವುದಕ್ಕಾಗಿ ಈ ಥರದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ನೋವುಂಟು ಮಾಡುವ ಕೆಲಸ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ರಾಜ್ಯಕ್ಕೆ ಹಾಗೂ 6 ಕೋಟಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟು ಅವಮಾನಿಸಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸ್ವಾಭಿಮಾನ ಮೆರೆಯಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ.
Lok Sabha Election 2024: ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ 983 ಮತಗಟ್ಟೆಗಳಲ್ಲಿ 197 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ.ಮೊಬೈಲ್ ನೆಟ್ ವರ್ಕ್ ಲಭ್ಯವಿಲ್ಲದ ಒಟ್ಟು 17 ಮತಗಟ್ಟೆಗಳು ಗುರುತಿಸಲಾಗಿದೆ.
Lok Sabha Election 2024: ನರೇಂದ್ರ ಮೋದಿಯವರು ದ್ವೇಷ ಬಿತ್ತುತ್ತಿರುವುದು ಧರ್ಮ-ಧರ್ಮಗಳ ನಡುವೆಯಲ್ಲ,ಪರಸ್ಪರ ಪ್ರೀತಿ,ವಿಸ್ವಾಸ,ಸಹೋದರತೆಯಿಂದ ಬಾಳಿ-ಬದುಕುತ್ತಿರುವ ಭಾರತೀಯರ ನಡುವೆ. ಬಹಿರಂಗವಾಗಿ ಇಷ್ಟು ನಿರ್ಲಜ್ಜ,ದುಷ್ಟತನದಿಂದ ಒಬ್ಬ ಪ್ರಧಾನಿಯಾದವರು ಮಾತಾಡಿದ್ದು ಭಾರತದ ಇತಿಹಾಸದಲ್ಲೇ ಮೊದಲು ಎಂದು ಅವರು ಕಿಡಿ ಕಾರಿದರು.
Lok sabha elections 2024: ಪ್ರಧಾನಿ ಮೋದಿ ಕಾಲದಲ್ಲಿ ದೇಶದ ಅಭಿವೃದ್ಧಿ ಶೂನ್ಯವಾಗಿದೆ. ಚರಿತ್ರೆಯಲ್ಲಿ ಅವರಂತೆ ಸುಳ್ಳು ಹೇಳಿದವರನ್ನು ನಾನು ನೋಡಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೆರಳಿಗೆ ಹೋಗಿ ಬದುಕಿ ಉದ್ದಾರ ಆದವರು ಯಾರೂ ಇಲ್ಲವೆಂದು ರಮೇಶ್ ಕುಮಾರ್ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.