ಐಪಿಎಲ್ 2022 ರ ಪ್ರಾರಂಭದಲ್ಲಿ ರವೀಂದ್ರ ಜಡೇಜಾ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರನ್ನಾಗಿ ಮಾಡಲಾಯಿತು. ಆದರೆ ಅವರ ನಾಯಕತ್ವದಲ್ಲಿ ತಂಡವು 8 ಪಂದ್ಯಗಳಲ್ಲಿ 6 ರಲ್ಲಿ ಸೋಲು ಕಾಣುವಂತಾಯಿತು. ಇಷ್ಟು ಮಾತ್ರವಲ್ಲದೆ, ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ವಿಫಲತೆ ಕಂಡುಕೊಂಡರು. ಕಳಪೆ ಪ್ರದರ್ಶನದಿಂದ ನಿರಾಶೆಗೊಂಡ ಅವರು ನಾಯಕತ್ವವನ್ನು ಮಧ್ಯದಲ್ಲಿ ತೊರೆದು, ಎಂಎಸ್ ಧೋನಿಯವರಿಗೆ ಹಸ್ತಾಂತರಿಸಿದರು.
ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರ ಹುಟ್ಟುಹಬ್ಬ. ಕೂಲ್ ಕ್ಯಾಪ್ಟನ್ ಇಂದು ತಮ್ಮ 41 ನೇ ವರ್ಷದ ಹುಟ್ಟು ಹಬ್ಬದ ಸಂಭ್ರದಲ್ಲಿದ್ದಾರೆ. ಧೋನಿ ಅಂತಾರಾಷ್ಟ್ರೀಯ ಆಟದಿಂದ ನಿವೃತ್ತಿಯನ್ನು ಪಡೆದಿದ್ದಾರೆ. ಇವರ ನಾಯಕತ್ವದಲ್ಲಿ ಟೀಂ ಇಂಡಿಯಾ ಅನೇಕ ದಾಖಲೆಗಳನ್ನು ಬರೆಯಿತು.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ-20, ಏಕದಿನ ವಿಶ್ವಕಪ್ ಮತ್ತುಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಧೋನಿ ನಾಯಕತ್ವದಿಂದ ಅನೇಕ ಸ್ಟಾರ್ ಆಟಗಾರರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದೆ ನಿವೃತ್ತಿ ಘೋಷಿಸಿದ್ದಾರೆ.
ದಳಪತಿ ವಿಜಯ್ ಇಂದು ತಮ್ಮ 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಾಲ ಕಲಾವಿದನಾಗಿ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ನಟ ದಕ್ಷಿಣ ಚಲನಚಿತ್ರೋದ್ಯಮದಲ್ಲಿ ಅನೇಕ ಯಶಸ್ವಿ ಚಲನಚಿತ್ರಗಳನ್ನು ನೀಡಿದ್ದಾರೆ.
ಆದರೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ತಕ್ಷಣ, ಈ ಆಟಗಾರರ ವೃತ್ತಿಜೀವನವು ಫ್ಲಾಪ್ ಆಗಿದೆಯೇನೋ ಎಂಬಂತೆ ಭಾಸವಾಗುತ್ತಿದೆ. ಈ ಆಟಗಾರರು ಧೋನಿ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.
ಭಾರತ ವಿರುದ್ಧದ ಮುಂಬರುವ T20 ಸರಣಿಗೆ ಸಜ್ಜಾಗುತ್ತಿರುವ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಡ್ವೇನ್ ಪ್ರಿಟೋರಿಯಸ್, ಮಹೇಂದ್ರ ಸಿಂಗ್ ಧೋನಿ ಅವರ ಆತ್ಮವಿಶ್ವಾಸವನ್ನು ಹೊಂದಲು ಬಯಸುತ್ತೇನೆ ಎಂದು ಸೋಮವಾರ ಹೇಳಿದ್ದರು.
ಇನ್ನು ಎಂ.ಎಸ್ ಧೋನಿ ಜಾರ್ಖಂಡ್ನ ರಾಜಧಾನಿ ರಾಂಚಿ ಮೂಲದವರು. ಪ್ರಸ್ತುತ ಜಾರ್ಖಂಡ್ನಲ್ಲಿ ಪಂಚಾಯತ್ ಚುನಾವಣೆಗಳು ನಡೆಯುತ್ತಿವೆ. ಇಲ್ಲಿನ ಚುನಾವಣಾ ಕರ್ತವ್ಯದಲ್ಲಿ ಧೋನಿ ಭಾಗಿಯಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ಸಖತ್ ವೈರಲ್ ಆಗುತ್ತಿದೆ.
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಅವರ ಶಾಂತ ಸ್ವಭಾವ ಮತ್ತು ನಾಯಕನಾಗಿ ಶಾಂತ ಸ್ವಭಾವಕ್ಕಾಗಿ ಪ್ರಪಂಚದಾದ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೇ ನಾಯಕನಾಗಿ ಹಲವು ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಮಿಸ್ಟರ್ ಐಪಿಎಲ್ ಎಂದು ಕರೆಯಲ್ಪಡುವ ರೈನಾ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಕಾಮೆಂಟ್ ಒಂದು ತುಂಬಾ ವೈರಲ್ ಆಗಿದೆ. ಈ ಕಾಮೆಂಟ್ನ ವಿಶೇಷತೆ ಏನು? ಯಾಕೆ ವೈರಲ್ ಆಗಿದೆ ಇಲ್ಲಿದೆ ನೋಡಿ..
ಪವರ್ ಕಟ್ನಿಂದಾಗಿ ಕಾನ್ವೆ ರಿವ್ಯೂ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಅವರು ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಆದರೆ ಇದೀಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಈ ಪಂದ್ಯದಿಂದ ಮತ್ತೊಂದು ವಿವಾದ ಹೊರಬಿದ್ದಿದೆ.
ಮೂಲಗಳ ಪ್ರಕಾರ, ಧೋನಿ ಈಗಾಗಲೇ ಮೆಗಾಸ್ಟಾರ್ ರಜನಿಕಾಂತ್ ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ಅವರನ್ನು ಸಂಪರ್ಕಿಸಿದ್ದಾರೆ. ಧೋನಿ ಅವರ ನಿರ್ಮಾಣದ ಚೊಚ್ಚಲ ಚಿತ್ರಕ್ಕೆ ನಯನತಾರಾ ನಾಯಕಿಯಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ, ಮಹೇಂದ್ರ ಸಿಂಗ್ ಧೋನಿ ಆಘಾತಕಾರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರದಿಂದ ಆಟಗಾರನನ್ನು ತಂಡದಿಂದ ಹೊರಗಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.