ಇನ್ನು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಿದ ಪ್ರಧಾನಿ ಮೋದಿ, ದೇಶದ ಸಂಕಲ್ಪವನ್ನು ಪ್ರಸ್ತಾಪಿಸಿದರು. “ನಾವು ಸ್ವಾತಂತ್ರ್ಯದ ಅಮೃತ ವರ್ಷವನ್ನು. ಮುಂದಿನ 25 ವರ್ಷಗಳಲ್ಲಿ, ಭಾರತದ ಸ್ವಾತಂತ್ರ್ಯದ 100 ವರ್ಷಗಳು ಪೂರ್ಣಗೊಳ್ಳುತ್ತದೆ. ಈ ಸಂದರ್ಭದಲ್ಲಿ ಭಾರತಕ್ಕೆ 5 ನಿರ್ಣಯಗಳು ಅವಶ್ಯಕ” ಎಂದು ಪ್ರಧಾನಿ ಹೇಳಿದರು,
ಬಸ್ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಇಲ್ಲಿನ ಖಾಲ್ಘಾಟ್ ಸೇತುವೆಯಿಂದ ಉರುಳಿದ ಬಸ್ ನದಿಗೆ ಬಿದ್ದಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ಪಂಜಾಬ್ನಲ್ಲಿ ನಡೆದಿದ್ದ ಭದ್ರತಾ ಲೋಪದ ಬಳಿಕ ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರತಿಮೆ ಅನಾವರಣ ಮಾಡಲು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು.
ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಭಾನುವಾರದಂದು ಹೈದರಾಬಾದ್ಗೆ ಆಗಮಿಸಿದ ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಹೈದರಾಬಾದ್ ನ್ನು ಭಾಗ್ಯನಗರ ಎಂದು ಉಲ್ಲೇಖಿಸಿದ್ದಾರೆ.
PM Modi tweet in Kannada: ಬೆಂಗಳೂರು ನಗರದ ಮೂರು ಕಡೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಇದೀಗ ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದು, ಇದು ಎಲ್ಲರ ಗಮನಸೆಳೆಯುತ್ತಿದೆ.
ಪ್ರಧಾನಿ ಮೋದಿಗೆ ರಾಜ್ಯದಲ್ಲಿ ಅವರದ್ದೇ ಆದ ಇಮೇಜ್ ಇದೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನು ಇದೇ ಜೂನ್ 20ರಂದು ಬೆಂಗಳೂರಿಗೆ ಕರೆತರಲು ಬಿಜೆಪಿ ಸಮಯ ನಿಗದಿ ಮಾಡಿದ್ದು, ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಪ್ರದಾನಿ ಭೇಟಿ ಸಂದರ್ಭದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ.
ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ 18 ರಂದು,ಅಂದರೆ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದ ಅವರು ಶತಾಯುಶಿಯಾಗಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ರಸ್ತೆ, ಎಂಜಿ ರೋಡ್, ರೈಲ್ವೆ ನಿಲ್ದಾಣದ ರಸ್ತೆ, ಮೈಸೂರು ವಿವಿಗೆ ತೆರಳುವ ಮಾರ್ಗ, ಅರಮನೆ ಸುತ್ತಲಿನ ಮಾರ್ಗಗಳನ್ನು ಕಾಮಗಾರಿ ಮಾಡಲಾಗುತ್ತಿದೆ. ಆದರೆ ಈ ಕಾಮಗಾರಿ ಪ್ರಕ್ರಿಯೆಯಿಂದಾಗಿ ವಾಹನ ಸವಾರರರು ಸಂಕಷ್ಟ ಎದುರಿಸುತ್ತಿದ್ದಾರೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಮೈಸೂರಿನ ಅರಮನೆ ಮುಂಭಾಗ ನಡೆಯಲಿರುವ ಯೋಗ ಕಾರ್ಯಕ್ರಮದ ತಾಲೀಮು ಭಾನುವಾರ ಬೆಳಗ್ಗೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಅರಮನೆಯ ಅಂಗಳದಲ್ಲಿ ಸಾರ್ವಜನಿಕರ ಪೂರ್ವಭಾವಿ ಯೋಗಭ್ಯಾಸ ಆಯೋಜಿಸಲಾಗಿತ್ತು. ಮೈಸೂರು ಜಿಲ್ಲಾಡಳಿತ, ಅರಮನೆ ಆಡಳಿತ ಮಂಡಳಿ, ಯೋಗ ಮಂಡಳಿ ಹಾಗೂ ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ತಾಲೀಮಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಭಾರತ ಸರ್ಕಾರದಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತಾಗಿ ಭಾರತದ ಪ್ರಧಾನಮಂತ್ರಿಗಳು ಮೇ. 31 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಿಂದ ವಿಡಿಯೋ ಸಂವಾದ ನಡೆಸಲಿದ್ದಾರೆ.
ಇನ್ನು ಈ ಕುರಿತು ಹಾಸನದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, " ಮೈಸೂರು ಮತ್ತು ಯೋಗಕ್ಕೆ ಅವಿನಾಭಾವ ಸಂಬಂಧವಿದೆ. ಮಹಾರಾಜರು, ಇತರರು ಯೋಗಕ್ಕೆ ಪ್ರೋತ್ಸಾಹ ನೀಡಿದ್ದರು. ಅಷ್ಟೇ ಅಲ್ಲದೆ, ಮೈಸೂರಿಗೆ ಸಿಟಿ ಆಫ್ ಯೋಗ ಎಂಬ ಖ್ಯಾತಿ ಕೂಡ ಇದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಗೆ ಆಗಮಿಸಲಿದ್ದಾರೆ" ಎಂದರು.
"ನಾನು ಯಾವುದೇ ಗಲಭೆ ಅಥವಾ ಯಾವುದೇ ರೀತಿಯ ಚರ್ಚೆಯನ್ನು ಪ್ರಾರಂಭಿಸುವ ಉದ್ದೇಶ ಹೊಂದಿರಲಿಲ್ಲ. ಇದು ಯಾವುದೇ ಅಜೆಂಡಾ ಇಲ್ಲದೆ ಉಂಟಾಟ ವಾದ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಇದೀಗ ಪ್ರಧಾನಿಯವರು ಆಡಿರುವ ಕೆಲವು ಸಾಲುಗಳು ಗೌರವ ಸೂಚಕವಾಗಿದೆ" ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ. ಇನ್ನು ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.