Ksheera Bhagya: ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ಟೀಕಿಸಿದರು.
ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ, ಹೀಗಿರುವಾಗಲೂ ಎಲ್ಲಾ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ’ ಎಂದು ಡಿಕೆಶಿ ಕುಟುಕಿದ್ದಾರೆ.
ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ಕಣ್ಕಟ್ಟು ಮಾಡುವುದು, ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು, ಕೋಮುದ್ವೇಷದ ವಿಷಬೀಜ ಬಿತ್ತಿ ನೀರೆರೆಯುವುದು ಮತ್ತು ದಿಟ್ಟ ಪ್ರಶ್ನೆಗಳು ಎದುರಾದಾಗ ಜಾಗ ಖಾಲಿ ಮಾಡುವುದು. ಇವು ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ಎಂದು ಬಿಜೆಪಿ ಟೀಕಿಸಿದೆ.
Kaveri River water dispute: ಭತ್ತ ನಾಟಿ ಮಾಡಿರುವ ಕಾವೇರಿ ಕೊಳ್ಳದ ರೈತರು ಒಣಗುತ್ತಿರುವ ಬೆಳೆ ನೋಡಿ ಕಣ್ಣೀರು ಸುರಿಸುತ್ತಿದ್ದಾರೆ. ಇದಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೇ 30 ಟಿಎಂಸಿ ನೀರು ಬೇಕು. ಈ ಯಾವ ಅಂಶಗಳನ್ನೂ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ನ್ಯಾಯಾಧಿಕರಣಕ್ಕೆ ಅರಿಕೆ ಮಾಡುವಲ್ಲಿ ಸೋತು ಕನ್ನಡಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಬಿಜೆಪಿ ಕುಟುಕಿದೆ.
ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂದಿಯವರ ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ತೊಂದರೆಯಾಗಿರುವುದು ನನ್ನ ಗಮನಕ್ಕೂ ಬಂದಿದೆ. ನಾನು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರನ್ನು ಭೇಟಿಯಾಗಿ ಇದಕ್ಕೆ ಪರಿಹಾರ ಕಂಡು ಹಿಡಿಯುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
BBMP Chief Engineer CM Shivakumar Death News: ಬಿಬಿಎಂಪಿ ಮುಖ್ಯ ಇಂಜಿನಿಯರ್ ಸಿ.ಎಂ.ಶಿವಕುಮಾರ್ ಅವರು ಪತ್ನಿ ಉಮಾ ಮಹೇಶ್ವರಿ ಮತ್ತು ಪುತ್ರಿಯರಾದ ವಿಭಾ ನಿಧಿ (12) ಹಾಗೂ ನಿರ್ವಿ ನೇಹಾ (10) ಅವರನ್ನು ಅಗಲಿದ್ದಾರೆ.
Congress Guarantee Schemes: ಈ 3 ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು 3 ತಿಂಗಳೊಳಗೆ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ಕುಟುಕಿದೆ.
Congress Guarantee Schemes: ಮುಖ್ಯಮಂತ್ರಿ ಸಿದ್ದರಾಮಯ್ಯರು ಚುನಾವಣೆಗೂ ಮುನ್ನ ಕಾಕಾ ಪಾಟೀಲ್ಗೂ ಫ್ರೀ ಮಹಾದೇವಪ್ಪ ನಿಂಗೂ ಫ್ರೀ ಎಂದು ಪುಂಗಿ ಊದಿ ರಾಜ್ಯದ ಜನರ ಕಿವಿ ಮೇಲೆ ಕಂಡೀಷನ್ ಅಪ್ಲೈ ಎನ್ನುವ ಹೂವನ್ನು ಲೀಲಾಜಾಲವಾಗಿ ಇಟ್ಟರು ಎಂದು ಬಿಜೆಪಿ ಟೀಕಿಸಿದೆ.
Congress Guarantee Schemes: ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆ ಏರಿಕೆ & ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು & ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದೆ ಎಂದು CM ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಹಠದ ಫಲವಾಗಿ ಸಾರಿಗೆ ನೌಕರರು ಬೀದಿ ಪಾಲಾಗಿದ್ದಾರೆ. ಟ್ಯಾಕ್ಸಿ, ಆಟೋ, ಖಾಸಗಿ ಬಸ್ ಚಾಲಕರು, ನಿರ್ವಾಹಕರು ದುಡಿಮೆ ಇಲ್ಲದೆ ಒಂದೊತ್ತಿನ ಗಂಜಿಗೂ ಕಷ್ಟಪಡುವಂತಾಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.