ಈ ಅಕ್ರಮದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಶಾಮಿಲಾಗಿದ್ದಾರೆ ಅಂತಾ ಸ್ಥಳೀಯರು ಆರೋಪ ಮಾಡಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಕಾಳದಂಧೆಯ ಅಕ್ಕಿ ಸಿಕ್ಕರೂ ಅಧಿಕಾರಿಗಳು ಜಾಣಮೌನ ವಹಿಸಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ.
National Education Policy 2020: ಎಲ್ಲವನ್ನೂ ರಾಜಕೀಯ ಪ್ರೇರಿತವಾಗಿ ನೋಡದೇ, ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದಲೂ ನೋಡಬೇಕೆಂದು ರಾಜ್ಯದ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇನೆ ಎಂದು ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಬಿಜೆಪಿ ವಲಸೆ ಶಾಸಕರು ಮತ್ತೆ ಕಾಂಗ್ರೆಸ್ ಗೆ ಬಂದರೆ ಹೆಚ್ಚಿನ ಸ್ಥಾನಗಳನ್ನ ಗೆಲ್ಲಬಹುದು ಎಂಬ ಲೆಕ್ಕಾಚಾರ ಕೈ ಹಿರಿಯ ನಾಯಕರಲ್ಲಿದೆ. ಈ ಪೈಕಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವ ವಹಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಭಿನ್ನ ನಿಲುವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
Basavaraj Bommai Slams Congress government: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.
ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತಾ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಚುಚ್ಚು ಮಾತುಗಳನ್ನಾಡುವಾಗ ವಿವೇಚನೆ ಇರಬೇಕು ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
10 ವರ್ಷದ ಬಳಿಕ ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಒಳ್ಳೆಯ ಕೆಲಸ ಮಾಡಿ, ಅದು ಬಿಟ್ಟು ಬಿಜೆಪಿ ಪರ ಅಂತೀರಾ. ನಾನು ಬಿಜೆಪಿ ಅಡಿಯಾಳ?’ ಎಂದು ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಮಿಷನ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಪರಸ್ಪರ ಆರೋಪ ಮಾಡುತ್ತಿವೆ. ಈ ರಾಷ್ಟ್ರೀಯ ಪಕ್ಷಗಳಿಗೆ ದೇಶದ ಜನರ ಸಮಸ್ಯೆಗೆ ಪರಿಹಾರ ಬೇಕಿಲ್ಲ. 2 ರಾಷ್ಟ್ರೀಯ ಪಕ್ಷಗಳಿಗೆ ದೇಶದ ಹಣ ಲೂಟಿ ಹೊಡೆಯುವ ಚಿಂತೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
Fake Bill Scams: ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅಂತೂ ಅನಾಥರಾಗಿದ್ದಾರೆ. ಯಾವುದೇ ಕ್ಷೇತ್ರವಿರಲಿ #ATMSarkaraಕ್ಕೆ ಕಮಿಷನ್ ಗ್ಯಾರಂಟಿ ಆದ್ರೆ ಮಾತ್ರ ಅನುದಾನಕ್ಕೆ ಪರ್ಮಿಷನ್..! ಎಂದು ಬಿಜೆಪಿ ಟೀಕಿಸಿದೆ.
ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ 3 ತಿಂಗಳಿಂದ ಯಾವುದೇ ಕಂಪ್ಲೇಟ್ ಇಲ್ಲ. ನಮಗೆ ಯಾವ ಗುತ್ತಿಗೆದಾರರ ಬಂದು ಇಷ್ಟು ಪರ್ಸೆಂಟ್ ಅಂತಾ ದೂರು ಕೊಟ್ಟಿಲ್ಲ. ಥರ್ಡ್ ಪಾರ್ಟಿಯವರು ಕಮಿಷನ್ ಕೇಳಿದ್ರೆ ಅದು ನಮಗೆ ಸಂಬಂಧ ಇಲ್ಲ. ಈ ಸರ್ಕಾರದ ಯಾವ ಸಚಿವರೂ ಕಮಿಷನ್ ಕೇಳಿಲ್ಲವೆಂದು ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.
ಗುತ್ತಿಗೆದಾರರಿಂದ ಕಾಂಗ್ರೆಸ್ ಟ್ಯಾಕ್ಸ್ ಹಾಗೂ ವೈಎಸ್ಟಿ ಟ್ಯಾಕ್ಸ್ ಸಂಗ್ರಹ ಮಾಡಲಾಗುತ್ತಿದೆ ಎಂದು ಪುನರುಚ್ಚರಿಸಿರುವ ಎಚ್.ಡಿ.ಕುಮಾರಸ್ವಾಮಿ, ವೈಎಸ್ಟಿ ಟ್ಯಾಕ್ಸ್ ಜೊತೆಗೆ ಕಾಂಗ್ರೆಸ್ ಟ್ಯಾಕ್ಸ್ ಹೆಸರನ್ನು ಉಲ್ಲೇಖ ಮಾಡಿದ್ದಾರೆ.
ರಾಜ್ಯದ ಭವಿಷ್ಯವನ್ನು ಅಡಮಾನ ಇಟ್ಟು ಕಾಂಗ್ರೆಸ್ ನೀಡಿದ ಅವೈಜ್ಞಾನಿಕ ಯೋಜನೆಗಳಿಂದ ಇಂದು ಕರ್ನಾಟಕದಾದ್ಯಂತ ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಅನುಭವಿಸಬೇಕಾಗಿ ಬಂದಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಪಕ್ಷವು 136 ಸ್ಥಾನ ಗೆಲ್ಲುತ್ತದೆ ಎಂದು ನಾನು ಹೇಳಿದ್ದೆ. ಆದರೆ ಸುಮಾರು ಜನರು ನಂಬಲಿಲ್ಲ, ವಿರೋಧ ಪಕ್ಷದವರು ಸಮ್ಮಿಶ್ರ ಸರ್ಕಾರ ಬಂದು ಬಿಡುತ್ತದೆ ಎಂದು ಮುಂಚಿತವಾಗಿಯೇ ಕಾಲಿಗೆ ಬಿದ್ದು ಸರ್ಕಾರ ಮಾಡೋಕೆ ತಯಾರಾಗಿದ್ದರು ಎಂದು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.