Uttarakhand UCC: ಸಂಪುಟ ಸಭೆಯ ನಂತರ ಕರಡನ್ನು ವಿಧಾನಸಭೆಯಲ್ಲಿ ಮಂಡಿಸಿ ಕಾನೂನಿನ ರೂಪ ನೀಡಲಾಗುವುದು ಎಂದು ತಿಳಿಸಲಾಗಿದೆ. UCC ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳನ್ನು ಒದಗಿಸುತ್ತದೆ. ಲಿಂಗ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ.
ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ.
ಏಕರೂಪ ನಾಗರಿಕ ಸಂಹಿತೆ (UCC) 2024 ರ ಮುಂಬರುವ ಲೋಕಸಭಾ ಚುನಾವಣೆಗಳನ್ನು ಗಮನಿಸಿದರೆ ಇಂದು ಭಾರತೀಯ ರಾಜಕೀಯದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಷಯಗಳಲ್ಲಿ ಒಂದಾಗಿದೆ, ಅಲ್ಲಿ ಬಿಜೆಪಿಯು ಅದನ್ನು ಪ್ರಮುಖ ಚುನಾವಣಾ ಯೋಜನೆಯನ್ನಾಗಿ ಮಾಡುವ ಸಾಧ್ಯತೆಯಿದೆ.ಇಸ್ಲಾಮಿಕ್ ಸಂಘಟನೆಗಳು ಈಗಾಗಲೇ ಈ ಕ್ರಮವನ್ನು ವಿರೋಧಿಸಿದ್ದರೆ, ಬಿಜೆಪಿಯ ಕೆಲವು ಮಿತ್ರಪಕ್ಷಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಯುಸಿಸಿ ವಿರುದ್ಧ ತಮ್ಮ ಆತಂಕವನ್ನು ವ್ಯಕ್ತಪಡಿಸಿವೆ. ಇದೀಗ, ಹಿರಿಯ ರಾಜಕಾರಣಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕೂಡ ವಿವಾದಾತ್ಮಕ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಕುರಿತಂತೆ ತಪ್ಪು ಸಂದೇಶಗಳನ್ನು ಭಿತ್ತರಿಸುವಂತಹ ವಾಟ್ಸ್ಆಪ್ ಸಂದೇಶ, ಕರೆಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಕಾನೂನು ಆಯೋಗ ಸಾರ್ವಜನಿಕರಿಗೆ ತಿಳಿಸಿದೆ
Karala CM On Congress: ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಆಗ್ರಹಿಸಿದ್ದಾರೆ.
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಭಾನುವಾರ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಬೆಂಬಲಿಸಿದ್ದಾರೆ ಮತ್ತು ಅದು ಭಾರತೀಯರನ್ನು 'ಒಗ್ಗೂಡಿಸುತ್ತದೆ' ಎಂದು ಹೇಳಿದ್ದಾರೆ.
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ರಚಿಸಿರುವ ತಜ್ಞರ ಸಮಿತಿ ಕರಡು ಸಿದ್ಧವಾಗಿದೆ ಎಂದು ಘೋಷಿಸಿದ ನಂತರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಹೇಳಿದ್ದಾರೆ.
Uniform Civil Code: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಕರಡನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಈ ವರದಿಯನ್ನು ಧಾಮಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಜ್ಞರ ಸಮಿತಿ ತಿಳಿಸಿದೆ.
Law Minister On UCC: ಏಕರೂಪ ನಾಗರಿಕ ಸಂಹಿತೆ ಕುರಿತು ದೇಶದಲ್ಲಿ ಮತ್ತೊಮ್ಮೆ ಚರ್ಚೆಗಳು ಆರಂಭಗೊಂಡಿವೆ. ಆಡಳಿತ ಪಕ್ಷದ ಜನರು ಇದನ್ನು ಜಾರಿಗೆ ತರಲು ಬಯಸುತ್ತಿದ್ದರೆ, ಪ್ರತಿಪಕ್ಷಗಳು ಅದರ ವಿರುದ್ಧ ನಿಂತಿವೆ. ಇದೇ ವೇಳೆ ಜುಲೈ 13ರವರೆಗೆ ನಿರೀಕ್ಷೆ ಮಾಡುವಂತೆ ಕಾನೂನು ಸಚಿವರು ತಿಳಿಸಿದ್ದಾರೆ.
Uniform Civil Code: ಈ ಕುರಿತು ಮಾತನಾಡಿದ್ದ ಕಾಂಗ್ರೆಸ್ ಹಿರಿಯ ಮುಖಂಡಚಿದಂಬರಂ, “ಪ್ರಧಾನಿ ಯುಸಿಸಿ ಒಂದು ಸರಳ ಪ್ರಕ್ರಿಯೆ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ, ಈ ಹಿಂದೆ ಇದ್ದ ಕಾನೂನು ಆಯೋಗದ ವರದಿಯನ್ನು ಪ್ರಧಾನಿಗಳು ಒಮ್ಮೆ ಓದಬೇಕು. ಅದು ಈ ಸಮಯದಲ್ಲಿ ಪ್ರಸ್ತುತವಲ್ಲ ಎಂದು ಹೇಳುತ್ತದೆ ಎಂದಿದ್ದರು. ಬಿಜೆಪಿಯವರ ಮಾತು ಮತ್ತು ನಡೆಗಳಿಂದಾಗಿ ಇಂದು ದೇಶ ಇಬ್ಭಾಗವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಜನರ ಮೇಲೆ ಹೇರಿದ ಯುಸಿಸಿ ವಿಭಜನೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅಜೆಂಡಾ ಆಧಾರಿತ ಬಹುಮತದ ಸರ್ಕಾರ ಅದನ್ನು ಜನರ ಮೇಲೆ ಹೇರಲು ಸಾಧ್ಯವಿಲ್ಲ" ಎಂಬುದು ಅವರ ಅಭಿಪ್ರಾಯವಾಗಿದೆ.
UCC: ಏಕರೂಪ ನಾಗರಿಕ ಸಂಹಿತೆ ಒಂದು ಸಾಧಾರಣ ಪ್ರಕ್ರಿಯೆ ಇರುವಂತೆ ಬಿಂಬಿಸಲು ಪ್ರಧಾನಿ ಮೋದಿ ಯತ್ನಿಸುತ್ತಿದ್ದಾರೆ. ಹೀಗಾಗಿ ಅವರು ಈ ಹಿಂದಿನ ಕಾನೂನು ಆಯೋಗದ ವರದಿಯನ್ನೊಮ್ಮೆ ಓದಬೇಕು, ಏಕೆಂದರೆ ಅದು ಈ ಸಮಯದಲ್ಲಿ ಪ್ರಸ್ತುತವಲ್ಲ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
UCC Update: ಏಕರೂಪ ನಾಗರಿಕ ಸಂಹಿತೆಯ ಕುರಿತು ಕೇಂದ್ರ ಕಾನೂನು ಆಯೋಗ ಹೊಸ ಸಮಾಲೋಚನೆ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹಿಂದೆ 21ನೇ ಕಾನೂನು ಆಯೋಗವೂ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಅಧ್ಯಯನ ನಡೆಸಿತ್ತು.
2019 ರಲ್ಲಿ ವಿರೋಧ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಭಾರಿ ವಿರೋಧ ಮಾಡಿದ್ದ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಈ ಬಾರಿಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ತರಲು ಬಿಜೆಪಿ ಬದ್ಧವಾಗಿದೆ ಆದರೆ ಎಲ್ಲಾ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಚರ್ಚೆಗಳನ್ನು ಅನುಸರಿಸಿದ ನಂತರ ಮಾತ್ರವೇ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಸಮಿತಿಯನ್ನು ರಚಿಸಲು ಗುಜರಾತ್ ಸರ್ಕಾರ ನಿರ್ಧರಿಸಿದೆ ಎಂದು ಶನಿವಾರ ತಿಳಿಸಿದೆ. ಮುಂದಿನ ವಾರದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿರುವುದರಿಂದ ಪ್ರಸ್ತುತ ಬಿಜೆಪಿ ಸರ್ಕಾರದ ಕೊನೆಯ ಸಭೆಯಾಗಬಹುದಾದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಮತ್ತು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಅವರು ಈ ನಿರ್ಧಾರವನ್ನು ಸುದ್ದಿಗಾರರಿಗೆ ತಿಳಿಸಿದರು.
Uniform Civil Code - ಉತ್ತರಾಖಂಡ (Uttarakhand) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸರ್ಕಾರವು (Uttarakhand Government) ಇಂದು ನಡೆದ ಸಭೆಯಲ್ಲಿ Uniform Civil Code ಅಂದರೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳ ಮುಂಚಿತವಾಗಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರದಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.