ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟ್ವೀಟ್ ಮಾಡಿ, "ಇದು ಬಿಜೆಪಿಯ ಅರೆಬೆಂದ ಅಭಿವೃದ್ಧಿಯ ಗುಣಮಟ್ಟದ ಮಾದರಿಯಾಗಿದೆ. ಇನ್ನೊಂದೆಡೆ, ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇಯನ್ನು ದೊಡ್ಡ ಜನರೊಬ್ಬರು (ಪ್ರಧಾನಿ ನರೇಂದ್ರ ಮೋದಿ) ಉದ್ಘಾಟಿಸಿದರು. ಕೇವಲ ಒಂದು ವಾರದಲ್ಲಿ ದೊಡ್ಡ ಭ್ರಷ್ಟಾಚಾರದ ಪ್ರಕರಣಗಳು ಮುನ್ನೆಲೆಗೆ ಬಂದಿದೆ. ದೊಡ್ಡ ಹೊಂಡಗಳು ಕಾಣುತ್ತಿವೆ" ಎಂದು ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.
ಅಗಸ್ಟ್ 15 ರ ಸ್ವಾತಂತ್ರ ದಿನಾಚರಣೆಯಂದು ರಜೆ ನೀಡುವುದಿಲ್ಲ ಎಂದು ಉತ್ತರ ಪ್ರದೇಶದ ಸರ್ಕಾರ ಘೋಷಿಸಿದೆ.ಈ ದಿನದಂದು ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳ ಜೊತೆಗೆ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಮಾರುಕಟ್ಟೆಗಳೆಲ್ಲವೂ ತೆರೆದಿರುತ್ತವೆ.
ಲಕ್ನೋದ ಅತಿದೊಡ್ಡ ಲುಲು ಮಾಲ್ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಮಾಲ್ನಲ್ಲಿ ನಮಾಜ್ ಮಾಡುತ್ತಿರುವುದನ್ನು ಹಿಂದೂ ಸಂಘಟನೆಗಳು ಪ್ರಶ್ನಿಸಿವೆ.
ಯುವಕರು, ವೃದ್ಧರು ಮತ್ತು ಮಕ್ಕಳು ಸೇರಿ ಒಟ್ಟು 27 ಮಂದಿ ಒಂದೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದರು. ಅಷ್ಟೇ ಅಲ್ಲದೆ, ಈ ಆಟೋ ಅತೀ ವೇಗವಾಗಿ ಬರುತ್ತಿತ್ತು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಿಕ್ಷಾವನ್ನು ತಡೆದಿದ್ದು, ಆಗ ವಿಚಾರ ಬೆಳಕಿಗೆ ಬಂದಿದೆ. ಇನ್ನು ಆಟೋದಿಂದ ಒಬ್ಬರೊಬ್ಬರೇ ಇಳಿದು ಬರುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದ ವ್ಯಕ್ತಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಸದ್ಯ ಆ ವಿಡಿಯೋ ಸಖತ್ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ.
ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರದಂದು ಪಕ್ಷದ ಎಲ್ಲಾ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದರು, ಆದರೆ ಇದೇ ವೇಳೆ ಅವರು ಉತ್ತರಪ್ರದೇಶ ಘಟಕದ ಮುಖ್ಯಸ್ಥ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.
ಮಹಿಳೆಗೆ ಟೆಸ್ಟೋಸ್ಟೆರಾನ್ ರಿಪ್ಲೇಸ್ಮೆಂಟ್ ಥೆರಪಿ ನೀಡಲಾಗುತ್ತದೆ. ಟೆಸ್ಟೋಸ್ಟೆರಾನ್ ಚಿಕಿತ್ಸೆಯು ಎದೆಯ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಡಾ.ಮೋಹಿತ್ ಜೈನ್ ತಿಳಿಸಿದ್ದಾರೆ.
ತನ್ನ ಮದುವೆ ಆಗಿ ಕೇವಲ ಒಂದೂವರೆ ತಿಂಗಳು ಕಳೆದಿದ್ದು, ಇಷ್ಟರಲ್ಲಿ ಪತ್ನಿ ಹೇಗೆ 4 ತಿಂಗಳ ಗರ್ಭಿಣಿಯಾಗುತ್ತಾಳೆ ಎಂದು ಯುವಕ ಪ್ರಶ್ನಿಸಿದ್ದಾನೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮುಸ್ಲಿಮರ ವಿರುದ್ಧದ ಕ್ರಮ ಮತ್ತು ಬುಲ್-ಡೋಜರ್ ನೀತಿಗಳ ಬಗ್ಗೆ ಕಾನೂನು ಗಣ್ಯರು ಪ್ರಶ್ನೆಗಳನ್ನು ಎತ್ತಿರುವ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಹೇಳಿದೆ.
ಗೌತಮ್ ಬುದ್ದ ನಗರದ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಚಿತ್ರಸೇನ್ 2020ರ ಜುಲೈ 25ರಿಂದ 2021ರ ಫೆಬ್ರವರಿ 3ರವರೆಗೆ ಒಟ್ಟು 193 ದಿನಗಳ ಕಾಲ ಅನುಮತಿ ಇಲ್ಲದೆ ರಜೆ ತೆಗೆದುಕೊಂಡಿದ್ದ.
ನೂಪುರ್ ಶರ್ಮಾ ಹೇಳಿಕೆಗೆ ವಿರುದ್ಧ ಮುಸ್ಲಿಂ ಸಂಘಟನೆಗಳು ಕೆಂಡಾಮಂಡಲ ಉತ್ತರ ಪ್ರದೇಶದಲ್ಲಿ ಬೀದಿಗಿಳಿದ ಪ್ರತಿಭಟನೆ ಮಾಡುತ್ತಿರುವ ಮುಸ್ಲಿಂ ಸಮುದಾಯ ಪರಿಸ್ಥಿತಿ ವಿಕೋಪ, ಪೊಲೀಸರ ಮೇಲೆ ಕಲ್ಲು ತೂರಾಟ ಬೈಕ್, ಕಾರ್, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವಿಶಿಷ್ಟ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಎಮ್ಮೆ ಕರುವನ್ನು ಕಳ್ಳತನ ಮಾಡಿರುವ ಪ್ರಕರಣ ಇದಾಗಿದೆ. ಇದೀಗ ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಹೊರಟಿರುವ ಜಿಲ್ಲಾ ಎಸ್ಪಿ ವಿಶಿಷ್ಟ ಆದೇಶ ನೀಡಿದ್ದಾರೆ.
ಜ್ಞಾನವಾಪಿ ವಿವಾದವು ನಂಬಿಕೆಯ ಕೆಲವು ವಿಷಯಗಳನ್ನು ಒಳಗೊಂಡಿದ್ದು, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಆದರೆ ಪ್ರತಿ ಮಸೀದಿಯಲ್ಲಿ ಶಿವಲಿಂಗ'ವನ್ನು ಹುಡುಕುವ ಮೂಲಕ ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
ಮೊದಲು ಕೆತ್ತಿದ ಶಿಲಾನ್ಯಾಸ ನೆರವೇರಿಸಿ, ಗರ್ಭ ಗೃಹ ನಿರ್ಮಾಣಕ್ಕೆ ಚಾಲನೆ ನೀಡಿದರು. ಮಂದಿರ ನಿರ್ಮಾಣ ಯೋಜನೆಯ ನೇತೃತ್ವ ವಹಿಸಿರುವ ರಾಮ ಜನ್ಮಭೂಮಿ ಟ್ರಸ್ಟ್, ಕಳೆದ ವಾರ ರಾಜಸ್ಥಾನದ ಮಕ್ರಾನಾದ ಮಾರ್ಬಲ್ಗಳನ್ನು ಗರ್ಭ ಗೃಹ ನಿರ್ಮಾಣಕ್ಕೆ ಬಳಸಲಾಗುವುದು ಎಂದು ತಿಳಿಸಿತ್ತು.
ಶಿವಾಂಗಿ ಗೋಯಲ್ ಯುಪಿಎಸ್ಸಿಯಲ್ಲಿ 177ನೇ ರ್ಯಾಂಕ್ ಪಡೆಯುವ ಮೂಲಕ ತನ್ನ ಕುಟುಂಬ ಮತ್ತು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ, ಆದರೂ ಛಲಬಿಡದೆ ತಮ್ಮ ಗುರಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.